Don't Miss!
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಮೂಲದ ಬಾಲಿವುಡ್ ಛಾಯಾಗ್ರಾಹಕ ಈಶ್ವರ ಬಿದರಿ ನಿಧನ
ಬಾಲಿವುಡ್ನ ಖ್ಯಾತ ಸಿನಿಮಾ ಛಾಯಾಗ್ರಾಹಕ ಈಶ್ವರ್ ಬಿದರಿ ಭಾನುವಾರ ಬೆಳಗ್ಗೆ ಕರ್ನಾಟಕದ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 87 ವರ್ಷ ಬಿದರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಸಂಬಂಧಿಯೊಬ್ಬರ ಮದುವೆ ಹಿನ್ನೆಲೆ ಕಳೆದ ವಾರ ಮುಂಬೈನಿಂದ ಬೆಳಗಾವಿಗೆ ಹೋಗಿದ್ದರು. ಬೆಳಗಾವಿಯಲ್ಲಿ ಹೃದಯಾಘಾತ ಸಂಭವಿಸಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ, ಭಾನುವಾರ ಬೆಳಗ್ಗೆ 9.55ಕ್ಕೆ ನಿಧನರಾದರು ಎಂದು ಅವರ ಮಗ ಸಂಜೀವ್ ಬಿದರಿ ಪಿಟಿಐಗೆ ತಿಳಿಸಿದ್ದಾರೆ. (ಇಂಡಿಯಾ ಟು ಡೇ ವರದಿ ಮಾಡಿದೆ)
ಯುವ ನಿರ್ದೇಶಕ ಭರತ್ ಸಾವಿಗೆ ಮರುಗಿದ ಚಿತ್ರ ಸಾಹಿತಿ ಕವಿರಾಜ್
ಕನ್ನಡ ಮೂಲದ ಬಾಲಿವುಡ್ ಛಾಯಾಗ್ರಾಹಕ ಈಶ್ವರ ಬಿದರಿ ಬೆಂಗಳೂರಿನ ಎಸ್ಜೆ ಪಾಲಿಟೆಕ್ನಿಕ್ನಲ್ಲಿ ಸಿನಿಮಾಟೋಗ್ರಫಿ ಕಲಿತಿದ್ದರು. ನಂತರ ಮುಂಬೈಗೆ ತೆರಳಿ ಕನ್ನಡಿಗರೇ ಆದ ವಿ.ಕೆ.ಮೂರ್ತಿಯವರ ಬಳಿ ಸಹಾಯಕರಾಗಿ ಕೆಲಸ ಮಾಡಿದರು.
ವಿ.ಕೆ.ಮೂರ್ತಿ ಛಾಯಾಗ್ರಹಣ ಮಾಡಿರುವ 'ಪ್ಯಾಸಾ', 'ಕಾಗಝ್ ಕೆ ಫೂಲ್' ಸೇರಿದಂತೆ ಹಲವು ಹಿಂದಿ ಚಿತ್ರಗಳಿಗೆ ಬಿದರಿಯವರು ಸಹಾಯಕ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದರು.
ನಂತರ ಸ್ವತಂತ್ರ ಛಾಯಾಗ್ರಾಹಕರಾಗಿ ಬಾರ್ಡರ್, ಘಾತಕ್, ಅಂದಾಜ್, ಢಾಯಿ ಅಕ್ಷರ್ ಪ್ರೇಮ್ ಕೆ, ಅಂದಾಜ್ ಅಪ್ನಾ ಅಪ್ನಾ, ದಾಮಿನಿ, ಬಟ್ವಾರಾ, ಘುಲಾಮಿ, ಹತ್ಯಾರ್, ಯತೀಮ್ ಸೇರಿದಂತೆ ಹಲವು ಹಿಂದಿ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ.
ಚಿತ್ರೀಕರಣ ವೇಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ನಟ!
Recommended Video
ಈಶ್ವರ ಬಿದರಿಯವರು ಮಾಜಿ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಅವರ ಸೋದರ ಸಂಬಂಧಿ.