Don't Miss!
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿ 'ಲಿಂಗಾ' ಚಿತ್ರೀಕರಣಕ್ಕೆ ಶಿವಮೊಗ್ಗದಲ್ಲಿ ವಿರೋಧ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಲಿಂಗಾ' ಚಿತ್ರೀಕರಣ ರಾಜ್ಯದಲ್ಲಿ ಭರದಿಂದ ಸಾಗುತ್ತಿದೆ. ಇತ್ತೀಚೆಗೆ ಕೊಲ್ಲೂರಿನಲ್ಲೂ ಲಿಂಗಂ ಚಿತ್ರೀಕರಣ ನಡೆಯಿತು. ಕನ್ನಡದ ಧೀರ ನಿರ್ಮಾಪಕ ಎಂದೇ ಕರೆಸಿಕೊಂಡಿರುವ ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿರುವ ಅದ್ದೂರಿ ಚಿತ್ರ ಇದಾಗಿದೆ.
ಶಿವಮೊಗ್ಗ ಜಿಲ್ಲೆಯ ಲಿಂಗಮಕ್ಕಿ ಜಲವಿದ್ಯುತ್ ಉತ್ಪದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯದ ಬಳಿ ಲಿಂಗಾ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ಶಿವಮೊಗ್ಗ ನಗರ ಪರಿಸರ ಪ್ರೇಮಿಗಳ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಲಿಂಗನಮಕ್ಕಿ
ಜಲಾಶಯದ
ಬಳಿ
ಲಿಂಗಾ
ಚಿತ್ರೀಕರಣಕ್ಕೆ
ಅವಕಾಶ
ನೀಡಬಾರದು
ಎಂದು
ಖ್ಯಾತ
ಸಾಹಿತಿ
ನಾ.ಡಿಸೋಜಾ
ಅವರೂ
ಸರ್ಕಾರವನ್ನು
ಒತ್ತಾಯಿಸಿದ್ದಾರೆ.
ಇದು
ಅತಿ
ಸೂಕ್ಷ್ಮ
ಪರಿಸರವಾಗಿದ್ದು
ಇದು
ನಿರ್ಬಂಧಿತ
ಪ್ರದೇಶವಾಗಿದೆ.
ಪ್ರವಾಸಿಗರು, ಸ್ಥಳೀಯರಿಗೆ ಪ್ರವೇಶ ನಿಷಿದ್ಧ
ಇಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಪ್ರವೇಶಿಸುವಂತಿಲ್ಲ. ಇಲ್ಲಿ ಛಾಯಾಚಿತ್ರ, ವಿಡಿಯೋ ಚಿತ್ರೀಕರಣವನ್ನೂ ನಿಷೇಧಿಸಲಾಗಿದೆ. ಪರಿಸ್ಥಿತಿ ಹೀಗಿರಬೇಕಾದರೆ ರಜನಿಕಾಂತ್ ಲಿಂಗಾ ಚಿತ್ರೀಕರಣಕ್ಕೆ ಅನುಮತಿ ನೀಡಿರುವುದು ಸರಿಯಲ್ಲ ಎಂದಿದ್ದಾರೆ ಡಿಸೋಜಾ.
ಚಿತ್ರೀಕರಣಕ್ಕೆ ಅವಕಾಶ ನೀಡಬಾರದು ಎಂಬ ಒತ್ತಾಯ
ರಾಜ್ಯ ಸರ್ಕಾರ ಪುನರ್ ಪರಿಶೀಲಿಸಿ ಚಿತ್ರೀಕರಣಕ್ಕೆ ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದ್ದಾರೆ. ಕೆ.ಎಸ್.ರವಿಕುಮಾರ್ ಆಕ್ಷನ್ ಕಟ್ ಹೇಳುತ್ತಿರುವ ಚಿತ್ರ ಇದಾಗಿದ್ದು ಅನುಷ್ಕಾ ಶೆಟ್ಟಿ ಹಾಗೂ ಸೋನಾಕ್ಷಿ ಸಿನ್ಹಾ ಚಿತ್ರದ ನಾಯಕಿಯರು.
ತೀರ್ಥಹಳ್ಳಿ, ಜೋಗ ಜಲಪಾತ ಬಳಿಯೂ ಶೂಟಿಂಗ್
ಎ.ಆರ್.ರೆಹಮಾನ್ ಅವರ ಸಂಗೀತ ಚಿತ್ರಕ್ಕಿದೆ. ಲಿಂಗಾ ಚಿತ್ರವನ್ನು ರಾಜ್ಯದಲ್ಲಿ ತೀರ್ಥಹಳ್ಳಿ, ಜೋಗ ಜಲಪಾತ ಬಳಿಯೂ ಚಿತ್ರೀಕರಿಸಿರುವುದು ವಿಶೇಷ.
ರಜನಿಕಾಂತ್ ಹುಟ್ಟುಹಬ್ಬಕ್ಕೆ ಚಿತ್ರ ಬಿಡುಗಡೆ
ದೀಪಾವಳಿ ಹಬ್ಬಕ್ಕೆ ಚಿತ್ರವನ್ನು ಬಿಡುಗಡೆ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಚಿತ್ರವನ್ನು ಡಿಸೆಂಬರ್ 12, 2014ಕ್ಕೆ ರಜನಿಕಾಂತ್ ಹುಟ್ಟುಹಬ್ಬಕ್ಕೆ ಬಿಡುಗಡೆ ಮಾಡಲು ರಾಕ್ ಲೈನ್ ವೆಂಕಟೇಶ್ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಇಷ್ಟಕ್ಕೂ ರಜನಿಕಾಂತ್ ಪಾತ್ರವೇನು?
ಮೂಲಗಳ ಪ್ರಕಾರ ರಜನಿಕಾಂತ್ ಅವರು ಚಿತ್ರದಲ್ಲಿ ಜಿಲ್ಲಾಧಿಕಾರಿ ಪಾತ್ರ ಪೋಷಿಸುತಿದ್ದಾರೆ ಎನ್ನಲಾಗಿದೆ.