ಗಣೇಶ ಹಬ್ಬಕ್ಕೆ ಉಡುಗೊರೆ ನೀಡಿದ ಒಡೆಯ- ಶ್ರೀಮನ್ನಾರಾಯಣ
Recommended Video
'ಕುರುಕ್ಷೇತ್ರ' ಮುಗಿಯುತ್ತಿದ್ದಂತೆ ಬಜಾರ್ ನಲ್ಲಿ 'ಒಡೆಯ'ನ ಅಬ್ಬರ ಹೆಚ್ಚಾಗುತ್ತಿದೆ. ದರ್ಶನ್ ಅಭಿನಯದ ಮುಂದಿನ ಸಿನಿಮಾ ಒಡೆಯ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಒಡೆಯ ಸದ್ಯದಲ್ಲೆ ತೆರೆಗೆ ಬರಲಿದೆ.
ಈ ಮಧ್ಯೆ ಗಣೇಶ ಹಬ್ಬದ ಪ್ರಯುಕ್ತ 'ಒಡೆಯ' ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಅಣ್ಣ ಮತ್ತು ತಮ್ಮಿಂದಿರ ಕಥೆ ಹೊಂದಿರುವ ಒಡೆಯ ಚಿತ್ರದಲ್ಲಿ ದರ್ಶನ್ ಗೆ ಸಹೋರರಾಗಿ ಯಶಸ್ ಸೂರ್ಯ, ಪಂಕಜ್, ಸಮರ್ಥ್ ಕಾಣಿಸಿಕೊಂಡಿದ್ದಾರೆ.
''ಎಲ್ಲರಿಗೂ ಗೌರಿ ಗಣೇಶ ಹಬ್ಬದ ಹಾರ್ಧಿಕ ಶುಭಾಶಯಗಳು. ನಿಮ್ಮೆಲ್ಲಾ ಕನಸುಗಳು ಈಡೇರಲಿ, ಆ ದೇವರ ಆಶೀರ್ವಾದ ಸದಾ ನಿಮ್ಮ ಕುಟುಂಬಗಳ ಮೇಲಿರಲಿ'' ಎಂದು ದಾಸ ದರ್ಶನ್ ಶುಭ ಕೋರಿದ್ದಾರೆ.

ಮತ್ತೊಂದೆಡೆ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಕಿರಿಕ್ ಪಾರ್ಟಿ ಚಿತ್ರದ ನಂತರ ರಕ್ಷಿತ್ ನಟಿಸಿರುವ ಸಿನಿಮಾ ಇದಾಗಿದ್ದು, ಬಹಳ ಕುತೂಹಲ ಮೂಡಿಸಿದೆ.

ಈಗಾಗಲೇ ಟೀಸರ್ ಮೂಲಕ ಗಮನ ಸೆಳೆದಿರುವ ಈ ಚಿತ್ರ ಐದು ಭಾಷೆಯಲ್ಲಿ ಬರಲು ಸಜ್ಜಾಗುತ್ತಿದೆ. ಈ ಚಿತ್ರಕ್ಕೆ ಸಚಿನ್ ರವಿ ನಿರ್ದೇಶನ ಮಾಡಿದ್ದು, ಇದೇ ಮೊದಲ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ಶಾನ್ವಿ ಶ್ರೀವತ್ಸವ್ ಕಾಣಿಸಿಕೊಂಡಿದ್ದಾರೆ.


Click it and Unblock the Notifications











