Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೃಷಿ ಇಲಾಖೆಗೆ ದರ್ಶನ್ ರಾಯಭಾರಿ: ಹೊರಬಿತ್ತು ಅಧಿಕೃತ ಆದೇಶ
ಕೃಷಿ ಇಲಾಖೆಗೆ ನಟ ದರ್ಶನ್ ರಾಯಭಾರಿ ಆಗಿ ಆಯ್ಕೆ ಆಗಿದ್ದಾರೆ. ಈ ಸುದ್ದಿ ಹೊರಬಿದ್ದು ಕೆಲವು ವಾರಗಳೇ ಆಗಿವೆ. ಆದರೆ ಕೃಷಿ ಇಲಾಖೆಯಿಂದ ಅಧಿಕೃತ ಆದೇಶ ಈಗ ಹೊರಬಿದ್ದಿದೆ.
Recommended Video
ಈ ಹಿಂದೆಯೇ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ದರ್ಶನ್ ಅವರನ್ನು ಭೇಟಿಯಾಗಿ ಕೃಷಿ ಇಲಾಖೆಗೆ ರಾಯಭಾರಿ ಆಗುವಂತೆ ಮನವಿ ಮಾಡಿದ್ದರು. ಇದಕ್ಕೆ ತುಂಬು ಹೃದಯದಿಂದ ಒಪ್ಪಿಕೊಂಡಿದ್ದರು ದರ್ಶನ್.
ನಟ ದರ್ಶನ್ ಅವರು ಯಾವುದೇ ಸಂಭಾವನೆ ಪಡೆಯದೆ ರಾಜ್ಯ ಸರ್ಕಾರದ ಕೃಷಿ ಇಲಾಖೆಯ ರಾಯಭಾರಿಯಾಗಿ ಕೃಷಿ ಇಲಾಖೆಯ ಕಾರ್ಯಕ್ರಮಗಳ ಪ್ರಚಾರ, ಪ್ರಸಾರ ಹಾಗೂ ರೈತರಿಗೆ ಸ್ಪೂರ್ತಿ ತುಂಬುವ ಕಾರ್ಯವನ್ನು ಮಾಡಲಿದ್ದಾರೆ.
ಫಾರಂ ಹೊಂದಿರುವ ನಟ ದರ್ಶನ್ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ ಜೊತೆಗೆ ಪಶುಸಂಗೋಪನೆ, ಪ್ರಾಣಿಗಳ ಆರೈಕೆಯನ್ನೂ ಮಾಡುತ್ತಾರೆ. ಕೃಷಿ ಚಟುವಟಿಕೆಯಲ್ಲಿಯೂ ಭಾಗಿಯಾಗುತ್ತಾರೆ ದರ್ಶನ್. ರೈತರ ಬಗ್ಗೆ ಅಪಾರವಾದ ಕಾಳಜಿ ದರ್ಶನ್ ಅವರಿಗೆ ಇದೆ ಹಾಗಾಗಿ ಕೃಷಿ ಇಲಾಖೆಯು ದರ್ಶನ್ ಅವರನ್ನು ತಮ್ಮ ಇಲಾಖೆಯ ರಾಯಭಾರಿಯನ್ನಾಗಿ ಆಯ್ಕೆ ಮಾಡಿಕೊಂಡಿದೆ.
ಇದೀಗ ಕೃಷಿ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದ್ದು, 'ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುತ ಪಡಿಸಲು ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ದರ್ಶನ್ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ' ಎಂದು ಆದೇಶದಲ್ಲಿ ಹೇಳಲಾಗಿದೆ.