Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಲಮನ್ನಾ ವಿಚಾರದ ಬಗ್ಗೆ ಮಾತನಾಡಿದ ಪ್ರಥಮ್
Recommended Video
ಮುಖ್ಯಮಂತ್ರಿ ಕುಮಾರ ಸ್ವಾಮಿ ತಾವು ಅಧಿಕಾರ ಸ್ವೀಕಾರ ಮಾಡಿದ 24 ಗಂಟೆಗಳಲ್ಲಿ ಸಾಲಮನ್ನಾ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಈಗ ಅದೇ ದೊಡ್ಡ ಚರ್ಚೆಗೆ ಕಾರಣ ಆಗಿದೆ. ಅಧಿಕಾರ ಸಿಕ್ಕರೂ ಸಾಲಮನ್ನಾ ಮಾಡಿಲ್ಲ ಎಂದು ಅನೇಕರು ತಮ್ಮ ಅಸಮಾಧಾನ ವ್ಯಕ್ತಿ ಪಡಿಸುತ್ತಿದ್ದಾರೆ. ಇದೀಗ ಬಿಗ್ ಬಾಗ್ ಖ್ಯಾತಿಯ ಪ್ರಥಮ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.
'ರಾಂಗ್ ರೂಟ್' ಎಂಬ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರಥಮ್ ಮುಖ್ಯಮಂತ್ರಿ ಕುಮಾರಸ್ವಾಮಿ ಪರ ಮಾತನಾಡಿದ್ದಾರೆ. ''ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸಿ ಒಂದು ವಾರಗಳು ಕಳೆದಿವೆ. ಅವರಿಗೆ ಸ್ವಲ್ಪ ಸಮಯ ಅವಕಾಶ ಕೊಡಿ. ಖಂಡಿತ ಸಾಲಮನ್ನಾ ಮಾಡ್ತಾರೆ. ಎಲ್ಲದಕ್ಕೂ ಸಮಯ ಬೇಕಾಗುತ್ತದೆ.'' ಎಂದು ಪ್ರಥಮ್ ಹೇಳಿದ್ದಾರೆ.
'ಸಾಲ ಮನ್ನಾ ಸಾಧ್ಯವಿಲ್ಲ' ಎಂದು ಎಲ್ಲೂ ಹೇಳಿಲ್ಲ : ಕುಮಾರಸ್ವಾಮಿ
ನಟ ಪ್ರಥಮ್ ಈ ಹಿಂದೆ ಅನೇಕ ಬಾರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು. ಜೊತೆಗೆ ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ರಾಷ್ಟ್ರಧ್ಯಕ್ಷ ದೇವಗೌಡರಿಗೆ ಸಹ ಚಿರಪರಿಚಿತರು.
ಅಂದಹಾಗೆ, ನಿನ್ನೆ ನವ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾತನಾಡಿರುವ ಕುಮಾರಸ್ವಾಮಿ 'ಸಾಲ ಮನ್ನಾ ಸಾಧ್ಯವಿಲ್ಲ' ಎಂದು ಎಲ್ಲೂ ನಾನು ಹೇಳಿಲ್ಲ, ಹೇಳುವುದೂ ಇಲ್ಲ. ಅದರ ಬಗ್ಗೆ ಬುಧವಾರ ಪೂರ್ಣ ಮಾಹಿತಿ ನೀಡುತ್ತೇನೆ'' ಎಂದು ಹೇಳಿದ್ದಾರೆ.