Don't Miss!
- News Nandi Hills: ನಂದಿಬೆಟ್ಟದ ಕಡೆ ಹೊರಡುವ ಪ್ರವಾಸಿಗರೇ ಇಲ್ಲಿ ಗಮನಿಸಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದ್ದುಗದ್ದಲವಿಲ್ಲದೆ ಸೆಟ್ಟೇರಿದ ಒಂದಕ್ಷರದ ಚಿತ್ರ 'ಕ'
ಖ್ಯಾತ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರ ಪುತ್ರ ಹೆಸರಾಂತ ಡಿಸೈನರ್ ಸಾಯಿ ಕೃಷ್ಣ ಸದ್ದು ಗದ್ದಲವಿಲ್ಲದೆ 'ಕ' ಎಂಬ ಕನ್ನಡ ಸಿನಿಮಾದ ಮಾತಿನ ಭಾಗದ ಚಿತ್ರೀಕರಣ ಮಾಡಿ ಮುಗಿಸಿದ್ದಾರೆ. ಏನಿದು 'ಕ'? ಸ್ವಲ್ಪ ಸಮಯ ಕಾಯಬೇಕು ಎಲ್ಲವನ್ನೂ ಸಂಪೂರ್ಣವಾಗಿ ಮಾಧ್ಯಮದ ಮುಂದೆ ತಿಳಿಸುತ್ತೇನೆ ಎನ್ನುತ್ತಾರೆ ಸಾಯಿ ಕೃಷ್ಣ.
'ಕ' ಚಿತ್ರಕ್ಕೆ ಅವರದೇ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಅಲ್ಲದೆ ಅವರೇ ನಿರ್ಮಾಪಕರು ಸಹ. ಈ ಹಿಂದೆ 'ಕ್ಷಮಿಸಿ' ಚಿತ್ರಕ್ಕೆ ಅವರು ಪ್ರತಿಭಾನ್ವೇಷಣೆ ಮಾಡಿದ ಕಲಾವಿದರನ್ನು ಈ 'ಕ' ಚಿತ್ರ್ಕಕೆ ಆಯ್ಕೆ ಮಾಡಿಕೊಂಡಿದ್ದಾರೆ. ಜಯಣ್ಣ ಕಂಬೈನ್ಸ್ ಅರ್ಪಿಸುವ ಸಂಗೀತ ಮೂವೀಸ್ ಅವರ 'ಕ' ಚಿತ್ರದ ನಿರ್ಮಾಪಕರು ರಾಜಮ್ಮ ಸಾಯಿಪ್ರಕಾಶ್.
ಶರತ್,
ಮೋನಿಶ್
ನಾಗರಾಜ್,
ವಿಶಾಲ್
ನಾಯರ್,
ಶೈನ್
ಶೆಟ್ಟಿ
ಜೊತೆಗೆ
ಪವಿತ್ರಾ,
ಅನುಷಾ,
ಪಲ್ಲವಿ,
ದೀಪಾ,
ದೀಪ್ತಿ
ಸಹ
ತಾರಾಗಣದಲ್ಲಿ
ಇದ್ದಾರೆ.
ಚಿತ್ರೀಕರಣವನ್ನು
ಬೆಂಗಳೂರು,
ಚಿಕ್ಕಮಗಳೂರು,
ಹಾಸನ್
ಹಾಗೂ
ಖಾಸಗಿ
ಚಾನಲ್
ಅಲ್ಲಿ
ಚಿತ್ರೀಕರಿಸಿಕೊಳ್ಳಲಾಗಿದೆ.
ನಾಲ್ಕು ಹಾಡುಗಳಲ್ಲಿ ಎರಡು ಹಾಡಿನ ಚಿತ್ರೀಕರಣ ಸಂಪೂರ್ಣವಾಗಿದ್ದು ಸದ್ಯದಲ್ಲೇ ಇನ್ನೆರಡು ಹಾಡುಗಳ ಚಿತ್ರೀಕರಣ ಹಮ್ಮಿಕೊಳ್ಳಲಾಗಿದೆ. ಛಾಯಾಗ್ರಹಣ ಸ್ಟೀಲ್ ಬೆಂಜಮಿನ್, ಸಂಗೀತ ಗಣೇಶ್ ನಾರಾಯಣ ಅವರದು. (ಒನ್ಇಂಡಿಯಾ ಕನ್ನಡ)