Just In
Don't Miss!
- Automobiles
ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಯ್ತು 2021ರ ಬಜಾಜ್ ಪಲ್ಸರ್ 220ಎಫ್ ಬೈಕ್
- News
"ಸೋಂಕಿನ ವಿರುದ್ಧ ಲಸಿಕೆಗಳು ಸಂಜೀವಿನಿಯಂತೆ ಕಾರ್ಯ ನಿರ್ವಹಿಸಲಿವೆ"
- Sports
ಭಾರತ vs ಆಸ್ಟ್ರೇಲಿಯಾ: ರೋಹಿತ್ ಶರ್ಮಾ ಹೆಸರಿಗೆ ಕೆಟ್ಟ ದಾಖಲೆ
- Finance
ಅಮೆಜಾನ್ ಪ್ರೈಮ್ ವೀಡಿಯೋ: 89 ರೂಪಾಯಿಗೂ ಲಭ್ಯವಿದೆ!
- Lifestyle
ನೀವು ಅಸಡ್ಡೆ ಮಾಡುವ ಆಲೂಗಡ್ಡೆಯಲ್ಲಿದೆ ಸೌಂದರ್ಯವರ್ಧಕ ಗುಣಗಳು
- Education
NIA Recruitment 2021: 15 ಡೆಪ್ಯುರಿಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮುಂಬೈ ವಿಮರ್ಶಕರಿಂದ ಪ್ರಶಸ್ತಿ ಪಡೆದ 'ಒಂದಲ್ಲಾ ಎರಡಲ್ಲಾ' ಚಿತ್ರ
ಜನರ ಮನಸ್ಸು ಗೆದಿದ್ದ 'ಒಂದಲ್ಲಾ ಎರಡಲ್ಲಾ' ಸಿನಿಮಾ ಈಗ ಪ್ರಶಸ್ತಿಯವನ್ನು ಪಡೆದಿದೆ. ಮುಂಬೈನಲ್ಲಿ ನಡೆದ ಕ್ರಿಟಿಕ್ಸ್ ಚಾಯ್ಸ್ ಫಿಲ್ಮ್ ಅವಾರ್ಡ್ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು 'ಒಂದಲ್ಲಾ ಎರಡಲ್ಲಾ' ಚಿತ್ರ ಪಡೆದಿದೆ.
ಕ್ರಿಟಿಕ್ಸ್ ಚಾಯ್ಸ್ ಫಿಲ್ಮ್ ಅವಾರ್ಡ್ ಪ್ರಶಸ್ತಿಯನ್ನು ಈವರೆಗೆ ಕಿರು ಚಿತ್ರಗಳಿಗೆ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಸಿನಿಮಾಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಮೊದಲ ಬಾರಿಯೇ 'ಒಂದಲ್ಲಾ ಎರಡಲ್ಲಾ' ಚಿತ್ರ ಪ್ರಶಸ್ತಿ ಗೆದ್ದಿದೆ.
ವಿಮರ್ಶೆ: 'ಒಂದಲ್ಲಾ ಎರಡಲ್ಲಾ' ಎಷ್ಟು ಬಾರಿ ಬೇಕಾದರೂ ನೋಡಬಹುದಾದ ಚಿತ್ರ.!
ಮುಂಬೈನ ಪತ್ರಕರ್ತರು, ಸಿನಿಮಾ ವಿಮರ್ಶಕರು ಕ್ರಿಟಿಕ್ಸ್ ಚಾಯ್ಸ್ ಫಿಲ್ಮ್ ಅವಾರ್ಡ್ ಪ್ರಶಸ್ತಿಯನ್ನು ನೀಡುತ್ತಿದ್ದರೆ. ಈ ವರ್ಷದಿಂದ ಈ ಪ್ರಶಸ್ತಿ ಮೂಲಕ ಭಾರತದ ಬೆಸ್ಟ್ ಸಿನಿಮಾವನ್ನು ಆಯ್ಕೆ ಮಾಡಲಾಗುತ್ತಿದೆ.
ಈ ವರ್ಷ ಕನ್ನಡ, ತಮಿಳು, ತೆಲುಗು, ಮರಾಠಿ, ಹಿಂದಿ, ಮಲೆಯಾಳಂ ಹೀಗೆ ಭಾರತದ ಪ್ರಮುಖ ಭಾಷೆಯ ಸಿನಿಮಾಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವು. ಕನ್ನಡದಿಂದ 'ಒಂದಲ್ಲಾ ಎರಡಲ್ಲಾ', 'ನಾತಿಚರಾಮಿ' ಮತ್ತು 'ಅಮ್ಮಚ್ಚಿಯೆಂಬ ನೆನಪುಗಳು' ಚಿತ್ರ ಆಯ್ಕೆಯಾಗಿದ್ದವು.
ಈ ಮೂರು ಸಿನಿಮಾಗಳ ಪೈಕಿ 'ಒಂದಲ್ಲಾ ಎರಡಲ್ಲಾ' ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ಪ್ರಶಸ್ತಿ ಪಡೆದ ಸಂತಸವನ್ನು ನಿರ್ದೇಶಕ ಸತ್ಯ ಪ್ರಕಾಶ್ ಫಿಲ್ಮಿಬೀಟ್ ಕನ್ನಡದ ಜೊತೆಗೆ ಹಂಚಿಕೊಂಡಿದ್ದಾರೆ. ಸಿನಿಮಾದಲ್ಲಿ ಸೌಹಾರ್ದತೆ ಬಗ್ಗೆ ತೋರಿಸಿದ್ದು, ಯಾರಿಗೂ ನೋವಾಗದೆ ಇರುವ ರೀತಿ ವಿಷಯ ಹೇಳಿರುವುದು ವಿಮರ್ಶಕರಿಗೆ ಬಹಳ ಮೆಚ್ಚುಗೆಯಾಗಿದೆಯಂತೆ.