Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಬೈ ವಿಮರ್ಶಕರಿಂದ ಪ್ರಶಸ್ತಿ ಪಡೆದ 'ಒಂದಲ್ಲಾ ಎರಡಲ್ಲಾ' ಚಿತ್ರ
ಜನರ ಮನಸ್ಸು ಗೆದಿದ್ದ 'ಒಂದಲ್ಲಾ ಎರಡಲ್ಲಾ' ಸಿನಿಮಾ ಈಗ ಪ್ರಶಸ್ತಿಯವನ್ನು ಪಡೆದಿದೆ. ಮುಂಬೈನಲ್ಲಿ ನಡೆದ ಕ್ರಿಟಿಕ್ಸ್ ಚಾಯ್ಸ್ ಫಿಲ್ಮ್ ಅವಾರ್ಡ್ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು 'ಒಂದಲ್ಲಾ ಎರಡಲ್ಲಾ' ಚಿತ್ರ ಪಡೆದಿದೆ.
ಕ್ರಿಟಿಕ್ಸ್ ಚಾಯ್ಸ್ ಫಿಲ್ಮ್ ಅವಾರ್ಡ್ ಪ್ರಶಸ್ತಿಯನ್ನು ಈವರೆಗೆ ಕಿರು ಚಿತ್ರಗಳಿಗೆ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಸಿನಿಮಾಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಮೊದಲ ಬಾರಿಯೇ 'ಒಂದಲ್ಲಾ ಎರಡಲ್ಲಾ' ಚಿತ್ರ ಪ್ರಶಸ್ತಿ ಗೆದ್ದಿದೆ.
ವಿಮರ್ಶೆ: 'ಒಂದಲ್ಲಾ ಎರಡಲ್ಲಾ' ಎಷ್ಟು ಬಾರಿ ಬೇಕಾದರೂ ನೋಡಬಹುದಾದ ಚಿತ್ರ.!
ಮುಂಬೈನ ಪತ್ರಕರ್ತರು, ಸಿನಿಮಾ ವಿಮರ್ಶಕರು ಕ್ರಿಟಿಕ್ಸ್ ಚಾಯ್ಸ್ ಫಿಲ್ಮ್ ಅವಾರ್ಡ್ ಪ್ರಶಸ್ತಿಯನ್ನು ನೀಡುತ್ತಿದ್ದರೆ. ಈ ವರ್ಷದಿಂದ ಈ ಪ್ರಶಸ್ತಿ ಮೂಲಕ ಭಾರತದ ಬೆಸ್ಟ್ ಸಿನಿಮಾವನ್ನು ಆಯ್ಕೆ ಮಾಡಲಾಗುತ್ತಿದೆ.
ಈ ವರ್ಷ ಕನ್ನಡ, ತಮಿಳು, ತೆಲುಗು, ಮರಾಠಿ, ಹಿಂದಿ, ಮಲೆಯಾಳಂ ಹೀಗೆ ಭಾರತದ ಪ್ರಮುಖ ಭಾಷೆಯ ಸಿನಿಮಾಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವು. ಕನ್ನಡದಿಂದ 'ಒಂದಲ್ಲಾ ಎರಡಲ್ಲಾ', 'ನಾತಿಚರಾಮಿ' ಮತ್ತು 'ಅಮ್ಮಚ್ಚಿಯೆಂಬ ನೆನಪುಗಳು' ಚಿತ್ರ ಆಯ್ಕೆಯಾಗಿದ್ದವು.
ಈ ಮೂರು ಸಿನಿಮಾಗಳ ಪೈಕಿ 'ಒಂದಲ್ಲಾ ಎರಡಲ್ಲಾ' ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ಪ್ರಶಸ್ತಿ ಪಡೆದ ಸಂತಸವನ್ನು ನಿರ್ದೇಶಕ ಸತ್ಯ ಪ್ರಕಾಶ್ ಫಿಲ್ಮಿಬೀಟ್ ಕನ್ನಡದ ಜೊತೆಗೆ ಹಂಚಿಕೊಂಡಿದ್ದಾರೆ. ಸಿನಿಮಾದಲ್ಲಿ ಸೌಹಾರ್ದತೆ ಬಗ್ಗೆ ತೋರಿಸಿದ್ದು, ಯಾರಿಗೂ ನೋವಾಗದೆ ಇರುವ ರೀತಿ ವಿಷಯ ಹೇಳಿರುವುದು ವಿಮರ್ಶಕರಿಗೆ ಬಹಳ ಮೆಚ್ಚುಗೆಯಾಗಿದೆಯಂತೆ.