Don't Miss!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಮಾ ರಾಮಾ ರೇ' ನಿರ್ದೇಶಕನ 'ಒಂದಲ್ಲಾ ಎರಡಲ್ಲಾ' ಪೋಸ್ಟರ್ ರಿಲೀಸ್
'ರಾಮಾ ರಾಮಾ ರೇ' ಚಿತ್ರದ ನಿರ್ದೇಶಕ ಡಿ ಸತ್ಯ ಪ್ರಕಾಶ್ ಮತ್ತು 'ಹೆಬ್ಬುಲಿ' ಖ್ಯಾತಿಯ ನಿರ್ಮಾಪಕ ಉಮಾಪತಿ ಗೌಡ ಒಟ್ಟಿಗೆ ಸೇರಿ 'ಒಂದಲ್ಲಾ ಎರಡಲ್ಲಾ' ಎಂಬ ಹೊಸ ಚಿತ್ರವನ್ನ ನಿರ್ಮಾಣ ಮಾಡುತ್ತಿರುವುದು ಗೊತ್ತಿರುವ ಸಂಗತಿ.
ಈ ಚಿತ್ರದ ಚಿತ್ರೀಕರಣ ಈಗ ಬಹುತೇಕ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿರುವ ಚಿತ್ರತಂಡ ಸದ್ಯದಲ್ಲೇ ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಈ ಮಧ್ಯೆ ಒಂದಲ್ಲಾ ಎರಡಲ್ಲಾ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ತುಂಬಾ ವಿಶೇಷವಾಗಿದೆ.
ಶ್ರೀಮತಿ ಸ್ಮಿತಾ ಉಮಾಪತಿ ಅವರು ತಮ್ಮ ಡಿ.ಎನ್.ಸಿನಿಮಾಸ್ ನಿರ್ಮಾಣ ಸಂಸ್ಥೆಯ ಮೂಲಕ ಈ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. 'ರಾಮಾ ರಾಮಾ ರೇ' ಚಿತ್ರದಲ್ಲಿ ಕೆಲಸ ಮಾಡಿದ್ದು, ಬಹುತೇಕ ಅದೇ ತಂಗತ್ರಜ್ಞರು ಇಲ್ಲಿಯೂ ಕೆಲಸ ಮಾಡಿದ್ದಾರೆ.
'ಹೆಬ್ಬುಲಿ' ನಿರ್ಮಾಪಕನ ಎರಡನೇ ಸಿನಿಮಾ ಟೈಟಲ್ ನೋಡಿ
ಲಲಿತ್ ಅವರು ಛಾಯಾಗ್ರಹಣ ಈ ಚಿತ್ರಕ್ಕಿದೆ. ವಾಸುಕಿ ವೈಭವ್ ಮತ್ತು ನಾಬಿನ್ ಪಾಲ್ ಅವರ ಸಂಗೀತವನ್ನ ಚಿತ್ರ ಒಳಗೊಂಡಿದೆ. ಈ ಚಿತ್ರದಲ್ಲಿ ಹಲವು ರಂಗಭೂಮಿ ಕಲಾವಿದರು ಬಣ್ಣ ಹಚ್ಚಿದ್ದು, ಮಾಸ್ಟರ್ ರೋಹಿತ್ ಪಾಂಡವಪುರ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇವರ ಜೊತೆಗೆ ಎಂ.ಕೆ ಮಠ, ಸಾಯಿಕೃಷ್ಣ ಕುಡ್ಲ, ನಾಗಭೂಷಣ್ ಕಾಣಿಸಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಚಿತ್ರದ ಬಹುತೇಕ ಚಿತ್ರೀಕರಣ ಮಾಡಲಾಗಿದೆ. ನಿರ್ದೇಶಕ ಸತ್ಯ ಪ್ರಕಾಶ್ ಅವರು ಹೇಳುವ ಪ್ರಕಾರ ಈ ಚಿತ್ರವೂ ''ಮುಗ್ದ ಮನಸ್ಸಿನವರಿಗೆ ಇಷ್ಟವಾಗುತ್ತದೆ ಅಥವಾ ಈ ಚಿತ್ರ ನೋಡಿದಮೇಲೆ ಮುಗದ ಮನಸ್ಸಿನವರಾಗುತ್ತಾರೆ' ಎನ್ನುತ್ತಾರೆ.