Don't Miss!
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶಸ್ವಿ 'ಆಪರೇಷನ್' ನಂತರ ನಟ ರಿಷಿಗೆ ಸಖತ್ ಡಿಮ್ಯಾಂಡ್
'ಆಪರೇಶನ್ ಅಲಮೇಲಮ್ಮ' ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ದೇಶಕ ಸುನಿ, ನಾಯಕ ನಟ ರಿಷಿ ಹಾಗೂ ನಟಿ ಶ್ರದ್ಧಾ ಶ್ರೀನಾಥ್ ಅಭಿನಯಕ್ಕೆ ಮೆಚ್ಚುಗೆ ಸಿಕ್ಕಿದೆ.
ಈ ಖುಷಿಯ ಜೊತೆ ನಟ ರಿಷಿಗೆ ಮತ್ತೊಂದು ಖುಷಿ ಸಂಗತಿ ಏನಂದ್ರೆ, ಜಯಣ್ಣ ಕಂಬೈನ್ಸ್ ನಲ್ಲಿ ತಯಾರಾಗಲಿರುವ ಹೊಸ ಚಿತ್ರಕ್ಕೆ ನಾಯಕನಾಗಿ ಆಯ್ಕೆ ಆಗಿದ್ದಾರೆ. ಈ ಮೂಲಕ ತಮ್ಮ ಮೂರನೇ ಚಿತ್ರವನ್ನ ರಿಷಿ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ 'ಮಹಾರಥಿ' ಎಂದು ಟೈಟಲ್ ಕೂಡ ಅಂತಿಮವಾಗಿದೆ.
'ಅಲಮೇಲಮ್ಮ' ವಿಮರ್ಶೆ: ಸಿಂಪಲ್ಲಾಗ್ ಒಂದು 'ಕಿಡ್ನಾಪ್' ಸ್ಟೋರಿ
ಈ ಹಿಂದೆ ತುಳುವಿನ 'ಚಾಲಿ ಪೋಲಿಲು' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವೀರೇಂದ್ರ ಶೆಟ್ಟಿ 'ಮಹಾರಥಿ' ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸದ್ಯ, ನಾಯಕನನ್ನ ಆಯ್ಕೆ ಮಾಡಿಕೊಂಡಿರುವ ಚಿತ್ರತಂಡ ಉಳಿದ ಕಲಾವಿದರು ಮತ್ತು ತಂತ್ರಜ್ಞರನ್ನ ಆಯ್ಕೆ ಮಾಡಿಕೊಳ್ಳಬೇಕಿದೆ.
'ಆಪರೇಷನ್ ಅಲಮೇಲಮ್ಮ' ಚಿತ್ರದ ನಂತರ 'ಗೋಧಿಬಣ್ಣ ಸಾಧರಣ ಮೈಕಟ್ಟು' ಖ್ಯಾತಿಯ ಹೇಮಂತ್ ರಾವ್ ನಿರ್ದೇಶನದಲ್ಲಿ ಸಿದ್ದವಾಗಲಿರುವ 'ಕವಲು ದಾರಿ' ಚಿತ್ರಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಹೀಗಾಗಿ, ಮೊದಲು 'ಕವಲುದಾರಿ' ಸಿನಿಮಾ ಚಿತ್ರೀಕರಣ ಶುರು ಮಾಡಲಿದೆ. ನಂತರ 'ಮಹಾರಥಿ' ಸೆಟ್ಟೇರಲಿದ್ದು, ಈ ವರ್ಷದ ಕೊನೆಗೆ 'ಮಹಾರಥಿ' ಲಾಂಚ್ ಆಗಬಹುದು.
ಹಾಸ್ಯದಲ್ಲಿ ಸಸ್ಪೆನ್ಸ್ ತೋರಿಸಿದ ಸುನಿಯ 'ಅಲಮೇಲಮ್ಮ'ನಿಗೆ ವಿಮರ್ಶಕರು ಏನಂದ್ರು?