Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಟಿಟಿ ಅವಾರ್ಡ್ಸ್: ಪಂಚೆಯಲ್ಲೇ ಸ್ಟೇಜ್ ಹತ್ತಿ ಪ್ರಶಸ್ತಿ ಪಡೆದ ರಾಜ್ ಬಿ ಶೆಟ್ಟಿ, ರಿಷಭ್; ಅಲ್ಲೂ ಅಪ್ಪು ನೆನಪು
ಸೆಪ್ಟೆಂಬರ್ 11ರ ಭಾನುವಾರದಂದು ಮುಂಬೈನಲ್ಲಿ ಇದೇ ಮೊದಲ ಬಾರಿಗೆ ಒಟಿಟಿ ಪ್ಲೇ ಸಂಸ್ಥೆ ರಾಷ್ಟ್ರೀಯ ಮಟ್ಟದಲ್ಲಿ ಒಟಿಟಿ ಪ್ಲೇ ಪ್ರಶಸ್ತಿಯನ್ನು ವಿತರಿಸಿತು. ಇನ್ನು ಇದೇ ದಿನದಂದು ಬೆಂಗಳೂರಿನಲ್ಲಿ ನಡೆದ ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ತಮಿಳು ಹಾಗೂ ಮಲಯಾಳಂ ಚಿತ್ರಗಳಿಗೆ ಪ್ರಶಸ್ತಿಯನ್ನು ವಿತರಿಸಲಾಗಿತ್ತು. ಇದರ ಮುನ್ನಾ ದಿನ ನಡೆದಿದ್ದ ಕನ್ನಡ ಹಾಗೂ ತೆಲುಗು ಚಿತ್ರಗಳ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡಿದ್ದ ಗರುಡ ಗಮನ ವೃಷಭ ವಾಹನ ಚಿತ್ರ ಸೈಮಾ ಅತ್ಯುತ್ತಮ ಕನ್ನಡ ಚಿತ್ರ ಎಂಬ ಪ್ರಶಸ್ತಿಯನ್ನು ಗೆದ್ದಿತು.
ಇದೇ ಸಿನಿಮಾಗಾಗಿ ಒಟಿಟಿ ಪ್ಲೇ ಅವಾರ್ಡ್ ಅನ್ನೂ ಸಹ ರಾಜ್ ಬಿ ಶೆಟ್ಟಿ ಹಾಗೂ ರಿಷಭ್ ಶೆಟ್ಟಿ ಪಡೆದುಕೊಂಡಿದ್ದಾರೆ. ವಿಶೇಷ ಹಾಗೂ ವಿಷಾದವೇನೆಂದರೆ ಈ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಬಂದ ಏಕೈಕ ಪ್ರಶಸ್ತಿ ಇದೊಂದೇ ಎಂಬುದು. ಭಾರತ ಚಲನಚಿತ್ರರಂಗಕ್ಕೆ ಹೊಸ ಅಲೆಯ ಕೊಡುಗೆಗಳನ್ನು ನೀಡುವುದರಲ್ಲಿ ಮೊದಲಿಗರು ಎಂಬ ಅವಾರ್ಡ್ ಅನ್ನು ರಾಜ್ ಬಿ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಗೆದ್ದಿದ್ದಾರೆ.
ಈ ಮೂಲಕ ಶನಿವಾರ ತಮ್ಮ ಗರುಡ ಗಮನ ವೃಷಭ ವಾಹನ ಸಿನಿಮಾಗೆ ಸೈಮಾ ಅತ್ಯುತ್ತಮ ಚಿತ್ರ ಪ್ರಶಸ್ತಿ ಬಂದ ಖುಷಿಯಲ್ಲಿದ್ದ ರಾಜ್ ಬಿ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಭಾನುವಾರ ಒಟಿಟಿ ಪ್ಲೇ ಅವಾರ್ಡ್ ಗೆದ್ದು ಕನ್ನಡ ಚಿತ್ರರಂಗದ ಗರಿಮೆಯನ್ನು ಹೆಚ್ಚಿಸಿದೆ.
ಪಂಚೆಯಲ್ಲೇ ಪ್ರಶಸ್ತಿ ಪಡೆದ ಶೆಟ್ರು
ಇನ್ನು ಈ ಪ್ರತಿಷ್ಟಿತ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ತೆರಳಿದ್ದ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಇಬ್ಬರೂ ಸಹ ಬಿಳಿ ಪಂಚೆಯನ್ನು ಧರಿಸಿಯೇ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಈ ವಿಡಿಯೋವನ್ನು ವೀಕ್ಷಿಸಿದ ಕನ್ನಡಿಗರು ನಮ್ಮ ಮಣ್ಣಿನ ಸಂಸ್ಕೃತಿ ಇದು, ಇತರೆ ನಟರೂ ಇದನ್ನೇ ಅನುಸರಿಸಿದರೆ ಎಷ್ಟು ಚಂದ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ಭಾಷೆಯನ್ನೂ ಮೀರಿ ಗುರುತಿಸಿದ್ದಕ್ಕೆ ರಾಜ್ ಬಿ ಶೆಟ್ಟಿ ಖುಷ್
ಇನ್ನು ತಮ್ಮ ಪ್ರತಿಭೆಯನ್ನು ಗುರುತಿಸಿ ವಿಶೇಷ ಅವಾರ್ಡ್ ನೀಡಿದಕ್ಕಾಗಿ ರಾಜ್ ಬಿ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಾತನಾಡಿದ ರಾಜ್ ಬಿ ಶೆಟ್ಟಿ ಇಷ್ಟು ದಿನಗಳಲ್ಲಿ ಓರ್ವ ನಟನ ಪ್ರತಿಭೆಯನ್ನು ಆತನ ಭಾಷೆಯಿಂದ ತೂಗಲಾಗುತ್ತಿತ್ತು, ಆದರೆ ಈ ಅವಾರ್ಡ್ ಮೂಲಕ ಆ ಕೆಟ್ಟ ಪ್ರವೃತ್ತಿಯನ್ನು ಒಟಿಟಿ ಪ್ಲೇ ಬ್ರೇಕ್ ಮಾಡಿದೆ ಎಂದು ಹೇಳಿಕೆ ನೀಡಿ ಕನ್ನಡ ಚಿತ್ರರಂಗವನ್ನು ಕಳಪೆಯನ್ನಾಗಿ ನೋಡುತ್ತಿದ್ದವರಿಗೆ ಟಾಂಗ್ ಕೊಟ್ಟಿದ್ದಾರೆ.
ಅಪ್ಪು ನೆನೆದ ರಿಷಬ್
ಇನ್ನು ರಾಜ್ ಬಿ ಶೆಟ್ಟಿ ಬಳಿಕ ಮೈಕ್ ಹಿಡಿದು ಮಾತನಾಡಿದ ರಿಷಬ್ ಶೆಟ್ಟಿ ಈ ಪ್ರಶಸ್ತಿಯನ್ನು ಡಾ. ಪುನೀತ್ ರಾಜ್ಕುಮಾರ್ ಅವರಿಗೆ ಅರ್ಪಿಸುತ್ತಿದ್ದೇನೆ ಎಂದು ಘೋಷಿಸಿದರು. ಈ ಮಾತನ್ನು ಕೇಳಿ ಕಾರ್ಯಕ್ರಮದಲ್ಲಿದ್ದ ಭಾರತದ ಎಲ್ಲಾ ಚಿತ್ರರಂಗಗಳ ಕಲಾವಿದರು ಚಪ್ಪಾಳೆ ತಟ್ಟಿದರು.