Just In
Don't Miss!
- Automobiles
ಆಕ್ಸೆಸ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಸುಜುಕಿ ಮೋಟಾರ್ಸೈಕಲ್
- News
ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್!
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪಿ ವಾಸು ಡೈರೆಕ್ಟರ್ ಅಲ್ಲ: 'ಆಪ್ತಮಿತ್ರ' ನಿರ್ದೇಶಕನ ಕುರಿತು ರವಿಚಂದ್ರನ್ ಹೀಗೆ ಹೇಳಿದ್ದೇಕೆ?
ಕನ್ನಡದಲ್ಲಿ ಆಪ್ತಮಿತ್ರ, ಆಪ್ತರಕ್ಷಕ, ದೃಶ್ಯ, ಶಿವಲಿಂಗ ಅಂತಹ ಸೂಪರ್ ಹಿಟ್ ಚಿತ್ರಗಳನ್ನ ನೀಡಿರುವ ನಿರ್ದೇಶಕ ಪಿ ವಾಸು ಅವರು ''ನಿರ್ದೇಶಕರೇ ಅಲ್ಲ'' ಎಂದು ಕ್ರೇಜಿಸ್ಟಾರ್ ರವಿಚಂದ್ರನ್ ಹೇಳಿದ್ದಾರೆ.
ಶಿವರಾಜ್ ಕುಮಾರ್ ನಟನೆಯ 'ಆಯುಷ್ಮಾನ್ ಭವ' ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರವಿಚಂದ್ರನ್, ಪಿ ವಾಸು ಅವರ ವಿಶೇಷ ಪ್ರತಿಭೆ ಬಗ್ಗೆ ಮಾತನಾಡಿದರು. ನಿರ್ದೇಶನಕ್ಕಿಂತ ಅವರು ನಟನೆಯಲ್ಲಿ ಹೆಚ್ಚು ಪರಿಣಿತಿ ಹೊಂದಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
'ಏಕಾಂಗಿ' ಎಲ್ಲಾ ಬಿಟ್ಟಾಕಿ, ನಿಮ್ ಸ್ಟೈಲ್ ಸಿನಿಮಾ ಮಾಡಿ: ಸುದೀಪ್
''ಪಿ ವಾಸು ಅವರು ನಿರ್ದೇಶಕರಲ್ಲ...ಅವರೊಬ್ಬ ಅತ್ಯುತ್ತಮ ನಟ. ನಿರ್ದೇಶಕರು ಕಥೆ ಬರೆಯುವಾಗ, ಆ ದೃಶ್ಯವನ್ನ ಹೇಗೆ ನಟಿಸಬೇಕು ಎಂದು ಗೊತ್ತಿದ್ರೆ ಮಾತ್ರ ಅವರು ಡೈರೆಕ್ಟರ್ ಆಗುವುದಕ್ಕ ಸಾಧ್ಯ. ಹಾಗಾಗಿ, ಪಿ ವಾಸು ಅವರು ಮೊದಲು ಆಕ್ಟರ್, ನಂತರ ಡೈರೆಕ್ಟರ್'' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪಿ ವಾಸು ನಿರ್ದೇಶನದ ಆಯುಷ್ಮಾನ್ ಭವ ಸಿನಿಮಾ ಮುಂದಿನ ತಿಂಗಳು ತೆರೆಗೆ ಬರ್ತಿದೆ. ಶಿವರಾಜ್ ಕುಮಾರ್, ರಚಿತಾ ರಾಮ್, ಅನಂತ್ ನಾಗ್ ಸೇರಿದಂತೆ ಹಲವು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಟ್ರೇಲರ್ ನೋಡಿಯೇ 'ಪೈಲ್ವಾನ್' ಚಿತ್ರದ ಭವಿಷ್ಯ ಹೇಳಿದ ರವಿಚಂದ್ರನ್
ದ್ವಾರಕೀಶ್ ಅವರು ಈ ಚಿತ್ರವನ್ನ ನಿರ್ಮಿಸಿರುವುದು ವಿಶೇಷ. ಆಪ್ತಮಿತ್ರ ಚಿತ್ರದ ಬಳಿಕ ದ್ವಾರಕೀಶ್ ಜೊತೆ ಪಿ ವಾಸು ಸಿನಿಮಾ ಮಾಡಿದ್ದಾರೆ. ಈ ಹಿಂದೆ ರವಿಚಂದ್ರನ್ ನಟಿಸಿದ್ದ 'ದೃಶ್ಯ' ಸಿನಿಮಾ ಇದೇ ಪಿ ವಾಸು ಅವರು ನಿರ್ದೇಶನ ಮಾಡಿದ್ದರು.
ಡಾ ರಾಜ್ ನಟಿಸಿರುವ ಗುರಿ, ವಿಷ್ಣು ನಟನೆಯ ಕಥಾನಾಯಕ, ಜಯಸಿಂಹ, ಜೀವನ ಜ್ಯೋತಿ, ಸಮರ್ಪಣ, ದಾದಾ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಿಗೆ ಪಿ ವಾಸು ನಿರ್ದೇಶನ ಮಾಡಿದ್ದಾರೆ. ತಮಿಳು, ತೆಲುಗು, ಮಲಯಾಳಂನಲ್ಲೂ ಹೆಚ್ಚು ಸಿನಿಮಾಗಳನ್ನ ಮಾಡಿದ್ದಾರೆ.