Don't Miss!
- News ಬಿಜೆಪಿ ತೊರೆದ ಕಾಂಗ್ರೆಸ್ ಸೇರ್ಪಡೆಯಾದ ಬಿಎಸ್ ಯಡಿಯೂರಪ್ಪ ಆಪ್ತ
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಿ ವಾಸು ಡೈರೆಕ್ಟರ್ ಅಲ್ಲ: 'ಆಪ್ತಮಿತ್ರ' ನಿರ್ದೇಶಕನ ಕುರಿತು ರವಿಚಂದ್ರನ್ ಹೀಗೆ ಹೇಳಿದ್ದೇಕೆ?
Recommended Video
ಕನ್ನಡದಲ್ಲಿ ಆಪ್ತಮಿತ್ರ, ಆಪ್ತರಕ್ಷಕ, ದೃಶ್ಯ, ಶಿವಲಿಂಗ ಅಂತಹ ಸೂಪರ್ ಹಿಟ್ ಚಿತ್ರಗಳನ್ನ ನೀಡಿರುವ ನಿರ್ದೇಶಕ ಪಿ ವಾಸು ಅವರು ''ನಿರ್ದೇಶಕರೇ ಅಲ್ಲ'' ಎಂದು ಕ್ರೇಜಿಸ್ಟಾರ್ ರವಿಚಂದ್ರನ್ ಹೇಳಿದ್ದಾರೆ.
ಶಿವರಾಜ್ ಕುಮಾರ್ ನಟನೆಯ 'ಆಯುಷ್ಮಾನ್ ಭವ' ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರವಿಚಂದ್ರನ್, ಪಿ ವಾಸು ಅವರ ವಿಶೇಷ ಪ್ರತಿಭೆ ಬಗ್ಗೆ ಮಾತನಾಡಿದರು. ನಿರ್ದೇಶನಕ್ಕಿಂತ ಅವರು ನಟನೆಯಲ್ಲಿ ಹೆಚ್ಚು ಪರಿಣಿತಿ ಹೊಂದಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
'ಏಕಾಂಗಿ' ಎಲ್ಲಾ ಬಿಟ್ಟಾಕಿ, ನಿಮ್ ಸ್ಟೈಲ್ ಸಿನಿಮಾ ಮಾಡಿ: ಸುದೀಪ್
''ಪಿ ವಾಸು ಅವರು ನಿರ್ದೇಶಕರಲ್ಲ...ಅವರೊಬ್ಬ ಅತ್ಯುತ್ತಮ ನಟ. ನಿರ್ದೇಶಕರು ಕಥೆ ಬರೆಯುವಾಗ, ಆ ದೃಶ್ಯವನ್ನ ಹೇಗೆ ನಟಿಸಬೇಕು ಎಂದು ಗೊತ್ತಿದ್ರೆ ಮಾತ್ರ ಅವರು ಡೈರೆಕ್ಟರ್ ಆಗುವುದಕ್ಕ ಸಾಧ್ಯ. ಹಾಗಾಗಿ, ಪಿ ವಾಸು ಅವರು ಮೊದಲು ಆಕ್ಟರ್, ನಂತರ ಡೈರೆಕ್ಟರ್'' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪಿ ವಾಸು ನಿರ್ದೇಶನದ ಆಯುಷ್ಮಾನ್ ಭವ ಸಿನಿಮಾ ಮುಂದಿನ ತಿಂಗಳು ತೆರೆಗೆ ಬರ್ತಿದೆ. ಶಿವರಾಜ್ ಕುಮಾರ್, ರಚಿತಾ ರಾಮ್, ಅನಂತ್ ನಾಗ್ ಸೇರಿದಂತೆ ಹಲವು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಟ್ರೇಲರ್ ನೋಡಿಯೇ 'ಪೈಲ್ವಾನ್' ಚಿತ್ರದ ಭವಿಷ್ಯ ಹೇಳಿದ ರವಿಚಂದ್ರನ್
ದ್ವಾರಕೀಶ್ ಅವರು ಈ ಚಿತ್ರವನ್ನ ನಿರ್ಮಿಸಿರುವುದು ವಿಶೇಷ. ಆಪ್ತಮಿತ್ರ ಚಿತ್ರದ ಬಳಿಕ ದ್ವಾರಕೀಶ್ ಜೊತೆ ಪಿ ವಾಸು ಸಿನಿಮಾ ಮಾಡಿದ್ದಾರೆ. ಈ ಹಿಂದೆ ರವಿಚಂದ್ರನ್ ನಟಿಸಿದ್ದ 'ದೃಶ್ಯ' ಸಿನಿಮಾ ಇದೇ ಪಿ ವಾಸು ಅವರು ನಿರ್ದೇಶನ ಮಾಡಿದ್ದರು.
ಡಾ ರಾಜ್ ನಟಿಸಿರುವ ಗುರಿ, ವಿಷ್ಣು ನಟನೆಯ ಕಥಾನಾಯಕ, ಜಯಸಿಂಹ, ಜೀವನ ಜ್ಯೋತಿ, ಸಮರ್ಪಣ, ದಾದಾ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಿಗೆ ಪಿ ವಾಸು ನಿರ್ದೇಶನ ಮಾಡಿದ್ದಾರೆ. ತಮಿಳು, ತೆಲುಗು, ಮಲಯಾಳಂನಲ್ಲೂ ಹೆಚ್ಚು ಸಿನಿಮಾಗಳನ್ನ ಮಾಡಿದ್ದಾರೆ.