Don't Miss!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಬರ್ಟ್' ಸಿನಿಮಾ ನೋಡಿ ಮಂಗಳಮುಖಿ 'ಪದ್ಮಶ್ರೀ' ಮಂಜಮ್ಮ ಜೋಗತಿ ಹೇಳಿದ್ದೇನು?
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ರಾಜ್ಯದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಮಾರ್ಚ್ 11ರಂದು ರಿಲೀಸ್ ಆದ ರಾಬರ್ಟ್ ಇಂದಿಗೂ ಬಹುತೇಕ ಕಡೆ ಹೌಸ್ ಪ್ರದರ್ಶನ ಕಾಣುತ್ತಿದೆ. ಕಲೆಕ್ಷನ್ ವಿಚಾರದಲ್ಲಿ ದಾಖಲೆ ನಿರ್ಮಿಸಿರುವ ರಾಬರ್ಟ್ ಸಿನಿಮಾದ ಬಗ್ಗೆ ಎಲ್ಲಾ ಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
Recommended Video
ರಾಬರ್ಟ್ ಸಿನಿಮಾದಲ್ಲಿ ವಿಶೇಷವಾಗಿ ಮಂಗಳಮುಖಿ ಬಾಬಿ ಪಾತ್ರ ಪ್ರೇಕ್ಷಕರ ಮನಗೆದ್ದಿದೆ. ಬಾಬಿಯಾಗಿ ಶಿವರಾಜ್ ಕೆ.ಆರ್ ಪೇಟೆ ಕಾಣಿಸಿಕೊಂಡಿದ್ದಾರೆ. ಮಂಗಳಮುಖಿಯರ ಬಗ್ಗೆ ತೋರಿಸಿರುವ ಪ್ರೀತಿ ಮತ್ತು ಗೌರವದ ಬಗ್ಗೆ ಮಂಗಳಮುಖಿ ಸಮುದಾಯ ಧನ್ಯವಾದ ತಿಳಿಸುತ್ತಿದೆ. ಈ ಬಗ್ಗೆ ಸ್ವತಃ ದರ್ಶನ್ ಅವರೇ ಹೇಳಿಕೊಂಡಿದ್ದರು.
'ರಾಬರ್ಟ್'ಗೆ ಮೊದಲು ಆಯ್ಕೆಯಾಗಿದ್ದು ರಾಶಿ ಖನ್ನಾ; ಆದರೆ ಆಶಾ ಸೆಲೆಕ್ಟ್ ಆಗಿದ್ದು ಹೇಗೆ?
ಇದೀಗ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಅಕಾಡೆಮಿ ಅಧ್ಯಕ್ಷೆಯಾಗಿರುವ ಮಂಗಳಮುಖಿ ಮಾತಾ ಬಿ ಮಂಜಮ್ಮ ಜೋಗತಿ ಅವರು ರಾಬರ್ಟ್ ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ. ನಿನ್ನೆ (ಮಾರ್ಚ್ 24) ಬೆಂಗಳೂರಿನ ಮಂತ್ರಿ ಮಾಲ್ನಲ್ಲಿ ಸಿನಿಮಾ ವೀಕ್ಷಿಸಿದ ಮಂಜಮ್ಮ ಜೋಗತಿ ಅವರು ತುಂಬಾ ಸಂತಸಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಸಿನಿಮಾ ವೀಕ್ಷಿಸಿದೆ ಎಂದು ಮಂಜಮ್ಮ ಖುಷಿ ಪಟ್ಟಿದ್ದಾರೆ.
ಈ ಬಗ್ಗೆ ಮಂಜಮ್ಮ ವಿಡಿಯೋ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ರಾಬರ್ಟ್ ಸಿನಿಮಾ ಬಿಡುಗಡೆಯಾದ ಬಳಿಕ ಅನೇಕ ಜನ ಕರೆ ರಾಬರ್ಟ್ ನೋಡಿ ಎಂದು ಹೇಳುತ್ತಿದ್ದರು. ಯಾಕೆ ಅಂತ ಕೇಳಿದರೆ ದರ್ಶನ್ ಅವರು ತುಂಬಾ ಚೆನ್ನಾಗಿ ಮಾಡಿದ್ದಾರೆ. ಅದಕ್ಕಿಂತ ಮುಖ್ಯವಾಗಿ ನಿಮ್ಮವರ ಬಗ್ಗೆ ಪ್ರೀತಿ ವಿಶ್ವಾಸ ಇಟ್ಟು ಬೇರೆಯವರು ನಿಮಗೆ ಗೌರವ ನೀಡುವ ಮಾತುಗಳನ್ನು ಆಡಿದ್ದಾರೆ ನೀವು ಎಂದಿದ್ದರು.
ತುಂಬಾ ವರ್ಷಗಳಾಗಿತ್ತು ಚಿತ್ರಮಂದಿರಗಳಲ್ಲಿ ಸಿನಿಮಾ ನೋಡದೆ. ಅಕಾಡೆಮಿಯ ಸಿಬ್ಬಂದಿ ಜೊತೆ ಸಿನಿಮಾ ನೋಡಿದೆ. ಅಲ್ಲಿ ಶ್ರೀರಾಮ ಮಂದಿರ ನೋಡಿದಷ್ಟು ಆಯೋಧ್ಯಾ ನೋಡಿದಷ್ಟು ಸಂತೋಷವಾಯಿತು. ನಮ್ಮ ಸಮುದಾಯದ ಬಗ್ಗೆ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ನಮ್ಮ ಸಮುದಾಯವನ್ನು ಗೌರವಿಸುವಂತ ಮಾತುಗಳು ತುಂಬಾ ಖುಷಿಯಾಯಿತು ಎಂದಿದ್ದಾರೆ.