Don't Miss!
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- News Karnataka Lok Sabha Election 2024: ಮೊದಲ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಲ್ಮಾನ್ ಖಾನ್ ಜೈಲು ಶಿಕ್ಷೆ ಬಗ್ಗೆ ಪಾಕಿಸ್ತಾನದ ಪ್ರತಿಕ್ರಿಯೆ
ನಟ ಸಲ್ಮಾನ್ ಖಾನ್ ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಈ ಬಗ್ಗೆ ಎಲ್ಲೆಡೆ ಚರ್ಚೆ ಆಗುತ್ತಿದ್ದು ಬಾಲಿವುಡ್ ಸಿನಿಮಾರಂಗದಲ್ಲಿ ಸಲ್ಲು ಜೈಲು ಸೇರಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ. ಸಾಮಾನ್ಯ ಜನರಲ್ಲಿ ಸಲ್ಲು ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದು ಪಾಕಿಸ್ತಾನದ ಸಿನಿಮಾ ಕಲಾವಿದರು ಕೂಡ ಸಲ್ಮಾನ್ ಶಿಕ್ಷೆಯ ಬಗ್ಗೆ ಮಾತನಾಡಿದ್ದಾರೆ.
ಪಾಕಿಸ್ತಾನ ವಿದೇಶಾಂಗ ಸಚಿವ ಖ್ವಾಜ ಆಸಿಫ್ "ಸಲ್ಮಾನ್ ಅಲ್ಪಸಂಖ್ಯಾತ ( ಮುಸ್ಲಿಂ) ಎನ್ನುವ ಕಾರಣದಿಂದ ಶಿಕ್ಷೆಗೆ ಒಳಗಾಗಿದ್ದಾರೆ. ಮಿಕ್ಕ ನಾಲ್ಕು ಜನರನ್ನ ಮಾತ್ರ ಕೋರ್ಟ್ ನಿರಾಪರಾಧಿಗಳೆಂದು ಘೋಷಣೆ ಮಾಡಿದೆ" ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಸಲ್ಮಾನ್ ಕೃಷ್ಣಮೃಗ ಬೇಟೆಯಾಡಲು ಪ್ರಚೋದನೆ ನೀಡಿದ್ದೇ ಈ ನಟಿಯಂತೆ.!
ಪಾಕಿಸ್ತಾನದ ಕ್ರಿಕೆಟಿಗ 'ಶೋಯೆಬ್ ಅಖ್ತರ್' ಈ ಬಗ್ಗೆ ಟ್ವಿಟ್ಟರ್ ನಲ್ಲಿ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. "ನನ್ನ ಸ್ನೇಹಿತ ಸಲ್ಮಾನ್ ಖಾನ್ ಗೆ ಐದು ವರ್ಷ ಜೈಲು ಶಿಕ್ಷೆ ಪ್ರಕಟವಾಗಿರುವುದು ಬೇಸರ ತಂದಿದೆ. ಕಾನೂನು ತನ್ನ ಕೆಲಸ ಮಾಡಿದೆ ಆದರೆ ಅವರ ಅಭಿಮಾನಿಗಳು ಮತ್ತು ಕುಟುಂಬದವರಿಗೆ ಇದು ಬೇಸರ ತರಿಸುವ ವಿಚಾರ" ಎಂದಿದ್ದಾರೆ.
ಪಾಕಿಸ್ತಾನಿ ಸಿನಿಮಾ ನಟಿ 'ಮಾವ್ರಾ ಹೊಕೆನ್' "ಸಲ್ಮಾನ್ ಖಾನ್ ಒಳ್ಳೆ ವ್ಯಕ್ತಿ. ಕಾನೂನು ತಪ್ಪು ನಿರ್ಧಾರ ತೆಗೆದುಕೊಂಡಿದೆ. ಒಳ್ಳೆ ಮನಸ್ಸಿರುವ ವ್ಯಕ್ತಿಗೆ ಶಿಕ್ಷೆ ಆಗುತ್ತಿದೆ" ಎಂದು ಟ್ವಿಟ್ ಮಾಡಿದ್ದಾರೆ.
ಖ್ಯಾತ ಗಾಯಕ 'ಶಹಜದ್ ರಾಯ್' ಕೂಡ ಸಲ್ಮಾನ್ ಖಾನ್ ತೀರ್ಪಿನ ಬಗ್ಗೆ ಟ್ವಿಟ್ ಮಾಡಿದ್ದು "ಕೋರ್ಟ್ ತೀರ್ಪನ್ನು ಕೇಳಿ ತುಂಬಾ ಬೇಸರವಾಗುತ್ತಿದೆ. ಸಲ್ಮಾನ್ ಖಾನ್ ಪ್ರಾಣಿ ಪ್ರಿಯ. ಆದಷ್ಟು ಬೇಗ ಸಲ್ಮಾನ್ ಖಾನ್ ಗೆ ಜಾಮೀನು ಸಿಕ್ಕಿ ಬೇಗ ಅವರ ಕುಟುಂಬ ಸೇರಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.
ಸಲ್ಮಾನ್ ಗೆ ಮಾತ್ರ ದೋಷಿ ಪಟ್ಟ ಯಾಕೆ, ಉಳಿದವರು ಖುಲಾಸೆಯಾಗಿದ್ದು ಹೇಗೆ?