Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೇಸ್ ನಷ್ಟೇ ಕಿಕ್ ಕೊಡ್ತಿದೆ ಭಟ್ಟರ 'ಪಂಚತಂತ್ರ'
ಯೋಗರಾಜ್ ಭಟ್ ನಿರ್ದೇಶನ ಬಹುನಿರೀಕ್ಷೆಯ ಚಿತ್ರ ಪಂಚತಂತ್ರ ಟ್ರೈಲರ್ ರಿಲೀಸ್ ಆಗಿದೆ. ಹಾಡುಗಳಿಂದ ಸಾಕಷ್ಟು ಕುತೂಹಲ ಹುಟ್ಟಿಸಿದ್ದ ಪಂಚತಂತ್ರ ಈಗ ಟ್ರೈಲರ್ ನಿಂದ ಮತ್ತಷ್ಟು ಕಿಕ್ ಹೆಚ್ಚಿಸುತ್ತಿದೆ.
ರಾಕಿಂಗ್ ಸ್ಟಾರ್ ಯಶ್ ಅವರು ಪಂಚತಂತ್ರ ಚಿತ್ರದ ಟ್ರೈಲರ್ ರಿಲೀಸ್ ಮಾಡುವ ಮೂಲಕ ಭಟ್ಟರ ಚಿತ್ರಕ್ಕೆ ಜೋಶ್ ನೀಡಿದ್ದಾರೆ.
ಪಂಚತಂತ್ರ ಚಿತ್ರದಲ್ಲಿ ಐದು ಪ್ರಮುಖ ಅಂಶಗಳಿವೆ ಎಂದು ಯೋಗರಾಜ್ ಭಟ್ಟರು ಹೇಳಿದ್ದರು. ಆ ಎಲ್ಲ ಅಂಶಗಳು ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಅದರಲ್ಲೂ ಕಾರ್ ರೇಸ್ ಅಂತೂ ಸಖತ್ ಥ್ರಿಲ್ ಕೊಡ್ತಿದೆ.
ಭಟ್ಟರ 'ಪಂಚತಂತ್ರ' ಟ್ರೈಲರ್ ರಿಲೀಸ್ ಮಾಡಲಿದ್ದಾರೆ ರಾಕಿ ಬಾಯ್
ಸಾಮಾನ್ಯವಾಗಿ ಕನ್ನಡ ಸಿನಿಮಾಗಳಲ್ಲಿ ಈ ಕಾರ್ ರೇಸ್ ಕಾನ್ಸಪ್ಟ್ ತುಂಬ ಅಪರೂಪ. ಅಲ್ಲೊಂದು ಇಲ್ಲೊಂದು ಚಿತ್ರದಲ್ಲಿ ನೋಡಿರಬಹುದು. ಆದ್ರೆ, ಪಂಚತಂತ್ರ ಚಿತ್ರದಲ್ಲಿ ರೇಸ್ ಬಹುಮುಖ್ಯ ಅಂಶವಾಗಿ ಕಾಣ್ತಿದೆ.
ಯೋಗರಾಜ್ ಭಟ್ ನಿರ್ದೇಶನವಿರುವ 'ಪಂಚತಂತ್ರ' ಚಿತ್ರದಲ್ಲಿ ಯುವ ಪ್ರತಿಭೆ ವಿಹಾನ್ ಗೌಡ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅಕ್ಷರಾ ಗೌಡ ಮತ್ತು ಸೋನಲ್ ಮಾಂಟೆರೋ ನಾಯಕಿಯರಾಗಿ ಮಿಂಚಿದ್ದಾರೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತವಿದೆ. ಚಿತ್ರ ಇದೇ ತಿಂಗಳು 29 ರಂದು ಚಿತ್ರ ತೆರೆಗೆ ಬರುತ್ತಿದೆ.