Don't Miss!
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ಗೆ ಜಾಮೀನು: ಪಾನಿಪೂರಿ ಕಿಟ್ಟಿ ಏನಂದ್ರು.?
Recommended Video
ಜಿಮ್ ಟ್ರೈನರ್ ಮಾರುತಿ ಗೌಡ ಕಿಡ್ನ್ಯಾಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಮತ್ತು ಸ್ನೇಹಿತರಿಗೆ ಇಂದು ಸೆಷನ್ಸ್ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ಈ ಬಗ್ಗೆ ಪಾನಿಪೂರಿ ಕಿಟ್ಟಿ ಅವರು ಪ್ರತಿಕ್ರಿಯಿಸಿದ್ದು, ''ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ. ನಮ್ಮ ವಕೀಲರ ಜೊತೆ ಈ ಬಗ್ಗೆ ಚರ್ಚೆ ಮಾಡುತ್ತೇನೆ'' ಎಂದು ತಿಳಿಸಿದರು.
ಅಂಬೇಡ್ಕರ್ ಭವನದಲ್ಲಿ ಏನಾಯ್ತು ಎಂದು ಪಿನ್ ಟು ಪಿನ್ ಮಾಹಿತಿ ಬಿಚ್ಚಿಟ್ಟ ಮಾರುತಿ ಗೌಡ
''ದುನಿಯಾ ವಿಜಯ್ ಅವರು ಹೊರಗೆ ಬಂದರೇ ನನಗೆ ಮತ್ತು ನನ್ನ ಅಣ್ಣನ ಮಗನಿಗೆ ಅಪಾಯವಿದೆ ಎಂಬ ಆತಂಕ. ನಮಗೆ ಸಾರ್ವಜನಿಕ ಅಭಿಯೋಜಕರಾಗಿ ವಕೀಲ ಶ್ಯಾಮ ಸುಂದರ್ ಅವರೇ ಬೇಕು ಎಂದು ಮನವಿ ಮಾಡಿಕೊಂಡಿದ್ದೇವು. ಆದ್ರೆ, ನೀಡಿರಲಿಲ್ಲ. ಈಗ ಅವರು ಹೇಳಿದಾಗೆ ನಾವು ಮಾಡ್ತೀವಿ. ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ'' ಎಂದು ಪಾನಿ ಪೂರಿ ಕಿಟ್ಟಿ ಹೇಳಿದ್ದಾರೆ.
ದುನಿಯಾ ವಿಜಿ ಪ್ರಕರಣ: ರಾಜಿ ಸಂಧಾನಕ್ಕೆ ಮುಂದಾಗ್ತಾರಾ ಖ್ಯಾತ ನಿರ್ಮಾಪಕ.!
''ಈ ಪ್ರಕರಣದ ಬಗ್ಗೆ ನಾನು ಎಲ್ಲೂ ರಾಜಿ ಸಂಧಾನದ ಬಗ್ಗೆ ಮಾತನಾಡಿಲ್ಲ. ನಾನು ರಾಜಿ ಆಗುವುದಿಲ್ಲ. ದುನಿಯಾ ವಿಜಯ್ ಅವರ ಪತ್ನಿ ನಾಗರತ್ನ ಅವರು ಆಸ್ಪತ್ರೆಗೆ ಬಂದಾಗ ಕೇವಲ ಆರೋಗ್ಯ ವಿಚಾರಿಸಿದರು. ಯಾವುದೇ ರಾಜಿ ಬಗ್ಗೆ ಮಾತನಾಡಿಲ್ಲ'' ಎಂದು ಸ್ಪಷ್ಟಪಡಿಸಿದರು.
ದುನಿಯಾ ವಿಜಯ್ ಗೆ ಬಿಡುಗಡೆ ಭಾಗ್ಯ: ಜಾಮೀನು ನೀಡಿದ ಸೆಷನ್ಸ್ ಕೋರ್ಟ್
''ಈ ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಯಾರೂ ನನಗೆ ಯಾರೂ ಒತ್ತಡ ಹೇರಿಲ್ಲ. ನನ್ನ ಕುಟುಂಬದ ಮೇಲೆ ಕೈಹಾಕಿದ್ದಾರೆ ಎಂಬುದೇ ಈಗ ನನಗೆ ತುಂಬಾ ನೋವಿದೆ'' ಎಂದು ಬೇಸರ ಮಾಡಿಕೊಂಡರು.
ಸದ್ಯ, ಸೆಷನ್ಸ್ ಕೋರ್ಟ್ ನಿಂದ ಜಾಮೀನು ಸಿಕ್ಕಿದ್ದು, ದುನಿಯಾ ವಿಜಯ್ ಅವರ ಪರ ವಕೀಲ ಶಿವಕುಮಾರ್ ಅವರು, ಈಗ ಜಾಮೀನು ಪ್ರಕ್ರಿಯೆಯನ್ನ ಪೂರೈಸಿ, ಸಂಜೆ 6.30 ಗಂಟೆಯೊಳಗೆ ಜೈಲಿಗೆ ಆದೇಶದ ಪ್ರತಿ ಮತ್ತು ಪ್ರಕ್ರಿಯೆಗಳನ್ನ ಮುಗಿಸಬೇಕಾಗಿದೆ. ಈ ಪ್ರಕ್ರಿಯೆ ಮುಗಿದ್ರೆ, ಇಂದೇ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಲ್ಲವಾದಲ್ಲಿ, ಬುಧವಾರ ಬಿಡುಗಡೆಯಾಗಲಿದ್ದಾರೆ. ಯಾಕಂದ್ರೆ ನಾಳೆ ಗಾಂಧಿಜಯಂತಿ ಪ್ರಯುಕ್ತ ರಜೆ ಇರುತ್ತೆ.