Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಸ್ತಿ ಗುಡಿ' ದುರಂತ ಸಂಭವಿಸಿದ್ಮೇಲೆ ದುನಿಯಾ ವಿಜಯ್, ಪಾನಿಪೂರಿ ಕಿಟ್ಟಿ ಸ್ನೇಹದಲ್ಲಿ ಬಿರುಕು.!
Recommended Video
ಇಂದು ನಿನ್ನೆಯದ್ದಲ್ಲ. ಕಳೆದ ಇಪ್ಪತ್ತು ವರ್ಷಗಳಿಂದ ದುನಿಯಾ ವಿಜಯ್ ಹಾಗೂ ಪಾನಿಪೂರಿ ಕಿಟ್ಟಿ ಮಧ್ಯೆ ಸ್ನೇಹ, ಸೇಡು ಇದ್ದೇ ಇದೆ.
ಇಪ್ಪತ್ತು ವರ್ಷಗಳಿಂದ ಆತ್ಮೀಯವಾಗಿದ್ದ ದುನಿಯಾ ವಿಜಯ್ ಹಾಗೂ ಪಾನಿಪೂರಿ ಕಿಟ್ಟಿ ಮಧ್ಯೆ ಬೇಸರ, ಮನಸ್ತಾಪ ಉಂಟು ಮಾಡಿದ್ದು 'ಮಾಸ್ತಿ ಗುಡಿ ದುರಂತ'. ಹೌದು, 'ಮಾಸ್ತಿ ಗುಡಿ' ದುರಂತ ಸಂಭವಿಸಿ ಎರಡು ವರ್ಷಗಳು ಉರುಳಿವೆ. ಈ ಎರಡು ವರ್ಷಗಳಿಂದ ದುನಿಯಾ ವಿಜಯ್ ಹಾಗೂ ಪಾನಿಪೂರಿ ಕಿಟ್ಟಿ ನಡುವೆ ಮಾತಿಲ್ಲ, ಕಥೆ ಇಲ್ಲ.!
'ಮಾಸ್ತಿ ಗುಡಿ' ದುರಂತ ಸಂಭವಿಸಿದ ಮೇಲೆ ದುನಿಯಾ ವಿಜಯ್ ರಿಂದ ಪಾನಿಪೂರಿ ಕಿಟ್ಟಿ ದೂರ ಉಳಿದರು. ಹೀಗಾಗಿ, ಪರ್ಸನಲ್ ಜಿಮ್ ಟ್ರೈನರ್ ಆಗಿದ್ದ ಪಾನಿಪೂರಿ ಕಿಟ್ಟಿ ಜಾಗಕ್ಕೆ ಪ್ರಸಾದ್ ಎಂಬುವರನ್ನು ದುನಿಯಾ ವಿಜಯ್ ಕರೆತಂದರು. ಇದೇ ಪ್ರಸಾದ್ ರಿಂದಲೇ ಮೊನ್ನೆ ರಾತ್ರಿ ರಂಪಾಟ ನಡೆದಿದೆ ಎನ್ನಲಾಗಿದೆ.
ದುನಿಯಾ ವಿಜಿ-ಪಾನಿಪುರಿ ಕಿಟ್ಟಿ ಮಧ್ಯೆ ಇರೋ ಈ 'ಪ್ರಸಾದ್' ಯಾರು.?
ಅಷ್ಟಕ್ಕೂ, 'ಮಾಸ್ತಿ ಗುಡಿ' ದುರಂತ ಸಂಭವಿಸಿದ್ಮೇಲೆ ದುನಿಯಾ ವಿಜಯ್ ರಿಂದ ಪಾನಿಪೂರಿ ಕಿಟ್ಟಿ ಅಂತರ ಕಾಯ್ದುಕೊಂಡಿದ್ದು ಯಾಕೆ.? ಸಂಪೂರ್ಣ ಮಾಹಿತಿ ಇಲ್ಲಿದೆ, ಓದಿರಿ...
'ಮಾಸ್ತಿ ಗುಡಿ' ದುರಂತದಲ್ಲಿ ಇಬ್ಬರು ಖಳನಟರ ಸಾವು
'ಮಾಸ್ತಿ ಗುಡಿ' ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಹೆಲಿಕಾಫ್ಟರ್ ನಿಂದ ತಿಪ್ಪಗೊಂಡನಹಳ್ಳಿ ಕೆರೆಗೆ ಧುಮುಕಿ ಖಳನಟರಾದ ಅನಿಲ್ ಹಾಗೂ ಉದಯ್ ಸಾವನ್ನಪ್ಪಿದರು. ಈ ಘಟನೆಯಿಂದ ಪಾನಿಪೂರಿ ಕಿಟ್ಟಿ ಆಘಾತಗೊಂಡರು.
'ಮಾಸ್ತಿ ಗುಡಿ' ಖಳನಟರ ದುರಂತ ಸಾವು: ದುರ್ಘಟನೆಯ ಸಂಪೂರ್ಣ ವಿವರ
ಪ್ರಾಣ ಸ್ನೇಹಿತರು
ಅನಿಲ್ ಹಾಗೂ ಉದಯ್ ಗೆ ಪಾನಿಪೂರಿ ಕಿಟ್ಟಿ ಪ್ರಾಣ ಸ್ನೇಹಿತ. ಅನಿಲ್ ಹಾಗೂ ಉದಯ್ ಗೆ ಜಿಮ್ ಟ್ರೈನರ್ ಆಗಿದ್ದವರು ಕೂಡ ಇದೇ ಪಾನಿಪೂರಿ ಕಿಟ್ಟಿ. ಅನಿಲ್ ಮತ್ತು ಉದಯ್ 'ಮಾಸ್ತಿ ಗುಡಿ' ಶೂಟಿಂಗ್ ಸಂದರ್ಭದಲ್ಲಿ ಸಾವನ್ನಪ್ಪಿದ್ಮೇಲೆ, ದುನಿಯಾ ವಿಜಯ್ ರಿಂದ ಪಾನಿಪೂರಿ ಕಿಟ್ಟಿ ದೂರ ಸರಿದರು. ಹಾಗಂತ ಸ್ವತಃ ಪಾನಿಪೂರಿ ಕಿಟ್ಟಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ಒಂದಲ್ಲ ಎರಡಲ್ಲ.. ದುನಿಯಾ ವಿಜಯ್ ಕಿರಿಕ್ ಗಳ ಪಟ್ಟಿ ನೋಡಿ
ಪಾನಿಪೂರಿ ಕಿಟ್ಟಿ ಹೇಳಿದ್ದೇನು.?
''ಮಾಸ್ತಿ ಗುಡಿ ಘಟನೆ ಆದ್ಮೇಲೆ, ನನಗೆ ತುಂಬಾ ಬೇಸರ ಆಯ್ತು. ನನ್ನ ಸ್ನೇಹಿತರು ಅನಿಲ್, ಉದಯ್ ತೀರಿಕೊಂಡರು. ಅದಾದ್ಮೇಲೆ, ನಾನು ದುನಿಯಾ ವಿಜಯ್ ಜೊತೆಗೆ ಮಾತನಾಡಲಿಲ್ಲ. ಫೋನ್ ಮಾಡಿದರೂ ತೆಗೆಯುತ್ತಿರಲಿಲ್ಲ'' ಎಂದು ಮಾಧ್ಯಮಗಳ ಮುಂದೆ ಪಾನಿಪೂರಿ ಕಿಟ್ಟಿ ಹೇಳಿದ್ದಾರೆ.
ದುನಿಯಾ ವಿಜಿಗೆ ಸಿಕ್ಕಿಲ್ಲ ಬೇಲ್, ಪರಪ್ಪನ ಅಗ್ರಹಾರಕ್ಕೆ ಹೊರಟ 'ಕರಿಚಿರತೆ'
ಕಾನೂನು ಹೋರಾಟಕ್ಕೆ ಮುಂದಾದ ಪಾನಿಪೂರಿ ಕಿಟ್ಟಿ
''ಅಣ್ಣನ ಮಗ ಮಾರುತಿ ಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ದುನಿಯಾ ವಿಜಯ್ ಗೆ ತಕ್ಕ ಶಿಕ್ಷೆ ಆಗಬೇಕು. ಯಾವುದೇ ಕಾರಣಕ್ಕೂ ರಾಜಿ ಆಗಲ್ಲ. ಕಾನೂನು ಹೋರಾಟ ಮಾಡುವೆ'' ಎಂದಿದ್ದಾರೆ ಪಾನಿಪೂರಿ ಕಿಟ್ಟಿ.