Don't Miss!
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೃತಪಟ್ಟ ಮಗನ ಫೋಟೋ ಇಟ್ಟುಕೊಂಡು 'ಯುವರತ್ನ' ಸಿನಿಮಾ ವೀಕ್ಷಿಸಿದ ಪೋಷಕರು
ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಕಂಡು ಅಪ್ಪು ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಎಲ್ಲಾ ವರ್ಗದ ಜನರು ಚಿತ್ರಮಂದಿರಕ್ಕೆ ಲಗ್ಗೆಯಿಡುತ್ತಿದ್ದಾರೆ.
Recommended Video
ಈ ನಡುವೆ, ಮೃತಪಟ್ಟ ಮಗನ ಫೊಟೋ ಇಟ್ಟುಕೊಂಡು ಪೋಷಕರು 'ಯುವರತ್ನ' ಸಿನಿಮಾ ನೋಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಡಿ ಆರ್ ಸಿ ಮಲ್ಟಿಫ್ಲೆಕ್ಸ್ನಲ್ಲಿ ಪೋಷಕರು ಮೃತ ಮಗನ ಭಾವಚಿತ್ರದೊಂದಿಗೆ ಸಿನಿಮಾ ನೋಡಿದ ಭಾವುಕ ಘಟನೆ ನಡೆದಿದೆ. ಮೈಸೂರಿನ ನಿವಾಸಿ ಮುರಳಿಧರ್ ಎಂಬುವವರ ಪುತ್ರ ಹರಿಕೃಷ್ಣನ್ ಕಳೆದ ಮೂರು ತಿಂಗಳ ಹಿಂದಷ್ಟೇ ಈಜಲು ಹೋಗಿ ನೀರಲ್ಲಿ ಮುಳುಗಿ ಸಾವನಪ್ಪಿದ್ದ.
ನಿರ್ಬಂಧ ಸಡಿಲಿಸಿದ ಸರ್ಕಾರ: ಭಾವುಕರಾಗಿ ಧನ್ಯವಾದ ಹೇಳಿದ ಪುನೀತ್
ಪುಟ್ಟ ಹುಡುಗ ಹರಿಕೃಷ್ಣನ್, ಪುನೀತ್ ರಾಜ್ ಕುಮಾರ್ ಅಪ್ಪಟ ಅಭಿಮಾನಿ ಆಗಿದ್ದ. ಅಷ್ಟೇ ಅಲ್ಲದೆ, ಆತ ಯುವರತ್ನ ಸಿನಿಮಾ ನೋಡಬೇಕೆಂದು ಆಸೆ ಪಟ್ಟಿದ್ದ. ಈ ಕಾರಣದಿಂದ, ಮಗನ ಆಸೆಯಂತೆ ಪೋಷಕರು ಆತನ ಫೋಟೋದೊಂದಿಗೆ 'ಯುವರತ್ನ' ವೀಕ್ಷಣೆ ಮಾಡಿದ್ದಾರೆ. ಜತೆಗೆ ತಮ್ಮಿಂದ ದೂರವಾಗಿರೋ ಮಗನಿಗೂ ಒಂದು ಟಿಕೆಟ್ ತೆಗೆದುಕೊಂಡು, ಅಪ್ಪ-ಅಮ್ಮ, ಹಿರಿಯ ಮಗನ ಜೊತೆ ಸಿನಿಮಾ ವೀಕ್ಷಣೆ ಮಾಡಿದ್ದಾರೆ.
ಎಲ್ಲಾ ವರ್ಗದ ಪ್ರೇಕ್ಷಕರ ನೆಚ್ಚನ ನಟ ಪವರ್ ಸ್ಟಾರ್. ಅದರಲ್ಲೂ ಫ್ಯಾಮಿಲಿ ಆಡಿಯನ್ಸ್ಗೆ ಪುನೀತ್ ಮತ್ತಷ್ಟು ಹತ್ತಿರ. ಯುವರತ್ನ ಚಿತ್ರವನ್ನು ಇಡೀ ಕುಟುಂಬದೊಂದಿಗೆ ಬಂದು ವೀಕ್ಷಣೆ ಮಾಡಿ ಸಂತಸಪಡುತ್ತಿದ್ದಾರೆ. ಸಂತೋಷ್ ಆನಂದ್ ರಾಮ್ ಸಾರಥ್ಯದಲ್ಲಿ ಬಂದ ಯುವರತ್ನ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.