Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯದಾದ್ಯಂತ ಪರ್ವ ನಾಟಕ ಪ್ರದರ್ಶನ: ಚಾಲನೆ ನೀಡಿದ ಎಸ್.ಎಲ್.ಭೈರಪ್ಪ
ಮೈಸೂರು ರಂಗಾಯಣವು ಗುರುವಾರ 'ಪರ್ವ' ನಾಟಕದ ರಾಜ್ಯ ಪ್ರವಾಸ ಆರಂಭಿಸಿದ್ದು, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಚಾಲನೆ ನೀಡಿ ಶುಭ ಕೋರಿದರು.
ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ''ಈಗಾಗಲೇ ಅನೇಕ ಪ್ರದರ್ಶನ ಕಂಡಿರುವ ಪರ್ವ ನಾಟಕವು ರಂಗಾಸಕ್ತರ ಮೆಚ್ಚುಗೆ ಪಡೆದಿದೆ. ಮೈಸೂರು ಮತ್ತು ಬೆಂಗಳೂರಿನ ಅನೇಕರು ನಾಟಕದ ಸವಿ ಸವಿದಿದ್ದಾರೆ. ಎಲ್ಲರೂ ನಾಟಕಕ್ಕೆ ಜೈಕಾರ ಹಾಕಿದ್ದಾರೆ. ಈಗ ಪರ್ವ ತಂಡ ರಾಜ್ಯ ಪ್ರವಾಸ ಆರಂಭಿಸಿರುವುದು ಖುಷಿಯ ವಿಚಾರ. ರಾಜ್ಯದ ಎಲ್ಲ ಭಾಗದ ಜನರೂ ಪರ್ವಕ್ಕಾಗಿ ಕಾಯುತ್ತಿದ್ದಾರೆ. ತಂಡಕ್ಕೆ ಒಳ್ಳೆಯದಾಗಲಿ'' ಎಂದು ಶುಭ ಹಾರೈಸಿದರು.
ಆರ್ಯವೈಶ್ಯರ ಒತ್ತಡಕ್ಕೆ ಮಣಿದು ನೂರು ವರ್ಷಗಳ 'ಚಿಂತಾಮಣಿ ಪದ್ಯ ನಾಟಕಂ' ನಿಷೇಧಿಸಿದ ಜಗನ್ ಸರ್ಕಾರ
ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮಾತನಾಡಿ, ಮೊದಲ ಹಂತದಲ್ಲಿ ದಾವಣಗೆರೆಯ ಗುಂಡಿ ಮಹಾದೇವಪ್ಪನವರ ಕಲ್ಯಾಣಮಂಟಪದಲ್ಲಿ ಏಪ್ರಿಲ್ 9 ರಂದು ಸಂಜೆ 4 ಗಂಟೆಗೆ ಮೊದಲ ಪ್ರದರ್ಶನ ನಡೆಯಲಿದೆ. ಧಾರವಾಡದ ಸೃಜನ ರಂಗಮಂದಿರದಲ್ಲಿ 12 ಮತ್ತು 13 ರಂದು ಬೆಳಗ್ಗೆ 10.30ಕ್ಕೆ, ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ 16 ಮತ್ತು 17 ರಂದು ಮಧ್ಯಾಹ್ನ 3.30 ಕ್ಕೆ, ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ 20 ರಂದು ಮಧ್ಯಾಹ್ನ 3.30ಕ್ಕೆ, ಕಲಬುರಗಿ ರಂಗಾಯಣದಲ್ಲಿ 22 ರಂದು ಸಂಜೆ 4 ಗಂಟೆಗೆ ಪ್ರದರ್ಶನ ನಡೆಯಲಿದೆ.
ಮೇ ಮೊದಲ ವಾರದಿಂದ ಎರಡನೇ ಹಂತದ ರಾಜ್ಯ ಪ್ರವಾಸ ಆರಂಭವಾಗಲಿದ್ದು, ಹಾಸನ, ಶಿವಮೊಗ್ಗ, ಮಂಗಳೂರು, ಮೂಡಬಿದಿರೆ, ಬೆಂಗಳೂರು, ಉಡುಪಿ, ಚಿಕ್ಕಮಗಳೂರಿನಲ್ಲಿ ಪ್ರದರ್ಶನ ನಡೆಯಲಿದೆ ಎಂದರು.
ಕಲಾವಿದರು, ತಂತ್ರಜ್ಞರು ಸೇರಿದಂತೆ 35 ಜನರ ತಂಡ ಪ್ರವಾಸ ಆರಂಭಿಸಿದೆ. ನಿರ್ದೇಶಕ ಪ್ರಕಾಶ್ ಬೆಳವಾಡಿ ನಿರ್ದೇಶನದಲ್ಲಿ ಪ್ರಸ್ತುತಪಡಿಸುತ್ತಿರುವ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ರಚಿತ ಕಾದಂಬರಿ ಪರ್ವ' ನಾಟಕದ ಕಂಪನ್ನು ಇಡೀ ದೇಶಕ್ಕೆ ಹಂಚಲು ರಂಗಾಯಣವು ಮುಂದಾಗಿದೆ.