Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮ್ಮನ ಹುಟ್ಟುಹಬ್ಬವನ್ನ ಅರ್ಥಪೂರ್ಣವಾಗಿ ಆಚರಣೆ ಮಾಡಿದ ಅಪ್ಪು
ಪಾರ್ವತಮ್ಮ ರಾಜ್ ಕುಮಾರ್, ಕನ್ನಡ ಸಿನಿಮಾ ರಂಗ ಕಂಡ ಧೀಮಂತ ನಿರ್ಮಾಪಕಿ ಹಾಗೂ ವಿತರಕಿ, ದಿವಂಗತ ಪಾರ್ವತಮ್ಮನವರ ಹುಟ್ಟುಹಬ್ಬವನ್ನ ನಟ ಪುನೀತ್ ರಾಜ್ ಕುಮಾರ್ ವಿಶಿಷ್ಟವಾಗಿ ಆಚರಣೆ ಮಾಡಿದ್ದಾರೆ. ತಮ್ಮ ಕುಟುಂಬಕಷ್ಟೇ ಅಲ್ಲದೆ ನೂರಾರು ಕುಟುಂಬಗಳಿಗೆ ವಜ್ರೇಶ್ವರಿ ಕಂಬೈನ್ಸ್ ಮೂಲಕ ತಾಯಿಯಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಕಷ್ಟದಲ್ಲಿರುವ ಹಾಗೂ ಬೀದಿಗೆ ಬಿದ್ದ ಅನಾಥ ಹೆಣ್ಣು ಮಕ್ಕಳಿಗಾಗಿ ಶಕ್ತಿಧಾಮ ಅನ್ನೋ ಫೌಂಡೇಶನ್ ನ ಹುಟ್ಟುಹಾಕಿದರು. ಅದೇ ಸ್ಥಳದಲ್ಲಿ ನಟ ಪುನೀತ್ ಅಮ್ಮನ ಹುಟ್ಟುಹಬ್ಬವನ್ನ ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದಾರೆ.
ಹುಟ್ಟುಹಬ್ಬದ ವಿಶೇಷ: ಪಾರ್ವತಮ್ಮನವರ ಬಗ್ಗೆ ತಿಳಿದುಕೊಳ್ಳಬೇಕಾದ ವಿಷಯ
ಮೈಸೂರಿನಲ್ಲಿರೋ ಶಕ್ತಿಧಾಮ ಸಂಸ್ಥೆಗೆ ನಟ ಪುನೀತ್ ಹಾಗೂ ಪತ್ನಿ ಅಶ್ವಿನಿ ಪುನೀತ್ ಇತ್ತೀಚೆಗಷ್ಟೇ ಭೇಟಿ ನೀಡಿದ್ದರು. ಶಕ್ತಧಾಮದಲ್ಲಿರುವ ಮಹಿಳೆ ಮತ್ತು ಮಕ್ಕಳಿಗೆ ಹೊಸ ಬಟ್ಟೆ ಹಾಗೂ ಸಿಹಿ ಹಂಚಿ ತಾಯಿಯ ಹುಟ್ಟುಹಬ್ಬವನ್ನ ಆಚರಣೆ ಮಾಡಿದರು. ಇದೇ ಸಮಯದಲ್ಲಿ ಪಾರ್ವತಮ್ಮ ನವರ ಭಾವಚಿತ್ರಕ್ಕೆ ಪುನೀತ್ ಹಾಗೂ ಅಶ್ವಿನಿ ಪೂಜೆ ಸಲ್ಲಿಸಿದರು.
ಸಾಕಷ್ಟು ವರ್ಷಗಳಿಂದ ಶಕ್ತಿಧಾಮ ಸಂಸ್ಥೆಯನ್ನ ಪಾರ್ವತಮ್ಮ ರಾಜ್ ಕುಮಾರ್ ನಡೆಸಿಕೊಂಡು ಬರುತ್ತಿದ್ದರು. ಪುನೀತ್ ರಾಜ್ ಕುಮಾರ್ ಸಿನಿಮಾರಂಗಕ್ಕೆ ಬಂದ ನಂತರ ತಾವೇ ಶಕ್ತಿಧಾಮದ ಉಸ್ತುವಾರಿಯನ್ನ ವಹಿಸಿಕೊಂಡಿದ್ದರು. ಇಂದಿಗೂ ಪುನೀತ್ ಬೇರೆ ನಟರು ಅಭಿನಯಿಸಿದ ಚಿತ್ರಗಳಿಗೆ ಹಾಡಿ ಅದರಿಂದ ಬರುವ ಹಣವನ್ನ ಶಕ್ತಿಧಾಮಕ್ಕೆ ನೀಡುತ್ತಾ ಬಂದಿದ್ದಾರೆ.