Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಟಸಾರ್ವಭೌಮ'ನಿಗಾಗಿ ಹುಬ್ಬಳ್ಳಿಗೆ ಹೊರಟ ಯುವರಾಜ-ಒಡೆಯರ್
Recommended Video
ಬೆಂಗಳೂರಿನಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರ ಮನೆ ಮೇಲೆ ಐಟಿ ದಾಳಿಯಾಗಿದೆ. ಹೀಗಾಗಿ, ನಾಳೆ ನಡೆಯಬೇಕಾಗಿರುವ 'ನಟಸಾರ್ವಭೌಮ' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯುತ್ತಾ ಇಲ್ವಾ ಎಂಬ ಗೊಂದಲ ಕಾಡುತ್ತಿದೆ.
ಮತ್ತೊಂದೆಡೆ ಯುವರಾಜ್ ಕುಮಾರ್ ಮತ್ತು ಪವನ್ ಒಡೆಯರ್ ಹುಬ್ಬಳ್ಳಿಗೆ ಪ್ರಯಾಣ ಬೆಳಸಿದ್ದಾರೆ. 'ನಟಸಾರ್ವಭೌಮ' ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ನಾಳೆ (ಜನವರಿ 5) ಸಂಜೆ 5.30ಕ್ಕೆ ಹುಬ್ಬಳ್ಳಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿರ್ದೇಶಕ ಪವನ್ ಒಡೆಯರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಅವರ ಕಿರಿಯ ಪುತ್ರ ಯುವರಾಜ್ ಕುಮಾರ್ ಹೊರಟಿದ್ದಾರೆ.
'ನಟಸಾರ್ವಭೌಮ' ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಯುವರಾಜ್ ಕುಮಾರ್ ಡ್ಯಾನ್ಸ್ ಮಾಡಲಿದ್ದಾರೆ. ಹೀಗಾಗಿ, ತಮ್ಮ ತಂಡದ ಜೊತೆ ಜರ್ನಿ ಆರಂಭಿಸಿದ್ದಾರೆ.
ಈ ಕಡೆ ಪುನೀತ್ ರಾಜ್ ಕುಮಾರ್ ಮನೆಯಲ್ಲಿ ಐಟಿ ಅಧಿಕಾರಿಗಳ ಶೋಧಕಾರ್ಯ ಬಹುತೇಕ ಕೊನೆಯ ಹಂತದಲ್ಲಿದ್ದು, ಇಂದು ಪರಿಶೀಲನೆ ಮುಗಿಸುವ ಸಾಧ್ಯತೆ ಇದೆ.
ಇಂದು ಐಟಿ ದಾಳಿ ಅಂತ್ಯಗೊಂಡಿರೇ, ನಾಳೆ ಸಂಜೆ ವೇಳೆಗೆ ಪುನೀತ್ ರಾಜ್ ಕುಮಾರ್ ಹುಬ್ಬಳ್ಳಿ ತಲುಪಲಿದ್ದಾರೆ. ಈಗಾಗಲೇ ನಿರ್ದೇಶಕ ಪವನ್ ಒಡೆಯರ್ ನಟಸಾರ್ವಭೌಮ ಆಡಿಯೋ ರಿಲೀಸ್ ಕಾರ್ಯಕ್ರಮಕ್ಕೆ ಯಾವುದೇ ಅಡ್ಡಿಯಿಲ್ಲ, ನಡೆಯುತ್ತೆ ಎಂದು ಆಹ್ವಾನ ನೀಡಿದ್ದಾರೆ.