Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಟಸಾರ್ವಭೌಮ' ನಿರ್ದೇಶಕನ ಜೊತೆಯಲ್ಲಿ ಕಿಚ್ಚ ಸುದೀಪ್.!
Recommended Video
ಪುನೀತ್ ರಾಜ್ ಕುಮಾರ್ ಅಭಿನಯದ 'ನಟಸಾರ್ವಭೌಮ' ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಪೋಸ್ಟರ್ ನಿಂದ ಹೆಚ್ಚು ಗಮನ ಸೆಳೆಯುತ್ತಿರುವ ಈ ಸಿನಿಮಾ ಬಗ್ಗೆ ದಿನೇ ದಿನೇ ನಿರೀಕ್ಷೆ ಹೆಚ್ಚಾಗುತ್ತಿದೆ.
ಹೀಗಿರುವಾಗ 'ನಟಸಾರ್ವಭೌಮ' ಚಿತ್ರವನ್ನ ನಿರ್ದೇಶನ ಮಾಡುತ್ತಿರುವ ಪವನ್ ಒಡೆಯರ್, ಕಿಚ್ಚ ಸುದೀಪ್ ಅವರನ್ನ ಭೇಟಿ ಮಾಡಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದಾರೆ.
ಹೌದು, ಕಿಚ್ಚ ಸುದೀಪ್ ಅವರನ್ನ ನಿರ್ದೇಶಕ ಪವನ್ ಒಡೆಯರ್ ಭೇಟಿಯಾಗಿರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಭೇಟಿ ಹಿಂದೆ ಏನಾದರೂ ವಿಶೇಷ ಇರಬಹುದಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ.
ಒಂದು ವೇಳೆ ನಟಸಾರ್ವಭೌಮ ಚಿತ್ರದಲ್ಲಿ ಸುದೀಪ್ ಏನಾದರೂ ವಿಶೇಷ ಪಾತ್ರ ಮಾಡಬಹುದಾ, ಹಿನ್ನಲೆ ಧ್ವನಿ ನೀಡಬಹುದಾ, ಅಥವಾ ಹಾಡು ಹೇಳಬಹುದಾ ಎಂದು ಅಭಿಮಾನಿಗಳು ಚರ್ಚೆ ಮಾಡ್ತಿದ್ದಾರೆ.
ಆದ್ರೆ, ಇದು ಸಮಾನ್ಯವಾದ ಭೇಟಿ ಅಷ್ಟೇ ಎಂದು ಹೇಳಲಾಗುತ್ತಿದೆ. ಈ ಫೋಟೋವನ್ನ ಸ್ವತಃ ಶೇರ್ ಮಾಡಿರುವ ಪವನ್ ಒಡೆಯರ್ ''ರುಚಿ ತುಂಬಾ ಚೆನ್ನಾಗಿತ್ತು, ಥ್ಯಾಂಕ್ ಯೂ, ಲವ್ ಯೂ ಸುದೀಪ್ ಸರ್'' ಎಂದು ಸ್ಟೇಟಸ್ ಹಾಕಿದ್ದಾರೆ. ಬಹುಶಃ ಸುದೀಪ್ ಅವರು, ಪವನ್ ಒಡೆಯರ್ ಗೆ ರುಚಿಕರ ಊಟ ಮಾಡಿ ಬಡಿಸಿದ್ದಾರೆ ಎನ್ನುವುದು ಇಲ್ಲಿ ಗೊತ್ತಾಗುತ್ತಿದೆ.
ಅದೇನೇ ಇರಲಿ, ಸುದೀಪ್ ಮತ್ತು ಒಡೆಯರ್ ಭೇಟಿ ಸಹಜವಾದದು. ಒಂದು ವೇಳೆ ನಟಸಾರ್ವಭೌಮ ಚಿತ್ರದ ಹಿನ್ನೆಲೆ ಆಗಿದ್ದರೇ ಅದಕ್ಕಿಂತ ಖುಷಿಯ ವಿಚಾರ ಇನ್ನೊಂದಿಲ್ಲ.