Don't Miss!
- News ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಟಸಾರ್ವಭೌಮ' ನಿರ್ದೇಶಕನ ಜೊತೆಯಲ್ಲಿ ಕಿಚ್ಚ ಸುದೀಪ್.!
Recommended Video
ಪುನೀತ್ ರಾಜ್ ಕುಮಾರ್ ಅಭಿನಯದ 'ನಟಸಾರ್ವಭೌಮ' ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಪೋಸ್ಟರ್ ನಿಂದ ಹೆಚ್ಚು ಗಮನ ಸೆಳೆಯುತ್ತಿರುವ ಈ ಸಿನಿಮಾ ಬಗ್ಗೆ ದಿನೇ ದಿನೇ ನಿರೀಕ್ಷೆ ಹೆಚ್ಚಾಗುತ್ತಿದೆ.
ಹೀಗಿರುವಾಗ 'ನಟಸಾರ್ವಭೌಮ' ಚಿತ್ರವನ್ನ ನಿರ್ದೇಶನ ಮಾಡುತ್ತಿರುವ ಪವನ್ ಒಡೆಯರ್, ಕಿಚ್ಚ ಸುದೀಪ್ ಅವರನ್ನ ಭೇಟಿ ಮಾಡಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದಾರೆ.
ಹೌದು, ಕಿಚ್ಚ ಸುದೀಪ್ ಅವರನ್ನ ನಿರ್ದೇಶಕ ಪವನ್ ಒಡೆಯರ್ ಭೇಟಿಯಾಗಿರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಭೇಟಿ ಹಿಂದೆ ಏನಾದರೂ ವಿಶೇಷ ಇರಬಹುದಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ.
ಒಂದು ವೇಳೆ ನಟಸಾರ್ವಭೌಮ ಚಿತ್ರದಲ್ಲಿ ಸುದೀಪ್ ಏನಾದರೂ ವಿಶೇಷ ಪಾತ್ರ ಮಾಡಬಹುದಾ, ಹಿನ್ನಲೆ ಧ್ವನಿ ನೀಡಬಹುದಾ, ಅಥವಾ ಹಾಡು ಹೇಳಬಹುದಾ ಎಂದು ಅಭಿಮಾನಿಗಳು ಚರ್ಚೆ ಮಾಡ್ತಿದ್ದಾರೆ.
ಆದ್ರೆ, ಇದು ಸಮಾನ್ಯವಾದ ಭೇಟಿ ಅಷ್ಟೇ ಎಂದು ಹೇಳಲಾಗುತ್ತಿದೆ. ಈ ಫೋಟೋವನ್ನ ಸ್ವತಃ ಶೇರ್ ಮಾಡಿರುವ ಪವನ್ ಒಡೆಯರ್ ''ರುಚಿ ತುಂಬಾ ಚೆನ್ನಾಗಿತ್ತು, ಥ್ಯಾಂಕ್ ಯೂ, ಲವ್ ಯೂ ಸುದೀಪ್ ಸರ್'' ಎಂದು ಸ್ಟೇಟಸ್ ಹಾಕಿದ್ದಾರೆ. ಬಹುಶಃ ಸುದೀಪ್ ಅವರು, ಪವನ್ ಒಡೆಯರ್ ಗೆ ರುಚಿಕರ ಊಟ ಮಾಡಿ ಬಡಿಸಿದ್ದಾರೆ ಎನ್ನುವುದು ಇಲ್ಲಿ ಗೊತ್ತಾಗುತ್ತಿದೆ.
ಅದೇನೇ ಇರಲಿ, ಸುದೀಪ್ ಮತ್ತು ಒಡೆಯರ್ ಭೇಟಿ ಸಹಜವಾದದು. ಒಂದು ವೇಳೆ ನಟಸಾರ್ವಭೌಮ ಚಿತ್ರದ ಹಿನ್ನೆಲೆ ಆಗಿದ್ದರೇ ಅದಕ್ಕಿಂತ ಖುಷಿಯ ವಿಚಾರ ಇನ್ನೊಂದಿಲ್ಲ.