Don't Miss!
- Sports IPL 2024: ಚಿನ್ನಸ್ವಾಮಿಯಲ್ಲಿ ಡಾಗ್ ಔಟ್ ವಲಯ ನಿರ್ಮಾಣ? ಇದರ ಲಾಭವೇನು?
- News ವಸೂಲಿ ಟೈಟಾನ್ಸ್, ಇಂಪ್ಯಾಕ್ಟ್ ಪ್ಲೇಯರ್ ಇ.ಡಿ; ಮೋದಿ, ಬಿಜೆಪಿಯನ್ನು ಅಣಕಿಸಿದ ಮಹಿಳಾ ಕ್ರಿಕೆಟರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಒಡೆಯರ್'ಗಾಗಿ ದರ್ಶನ್ ಎದುರಿಸಬೇಕಾಗಿದೆ ಬಹುದೊಡ್ಡ 'ಚಾಲೆಂಜ್'
ಸದ್ಯ 'ಕುರುಕ್ಷೇತ್ರ' ಚಿತ್ರದಲ್ಲಿ ತೊಡಗಿಕೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೇರೆ ಯಾವ ಚಿತ್ರದಲ್ಲೂ ನಟಿಸುತ್ತಿಲ್ಲ. 50ನೇ ಚಿತ್ರ 'ಕುರುಕ್ಷೇತ್ರ' ಮುಗಿಸಿದ ನಂತರ ತಮ್ಮ 51ನೇ ಚಿತ್ರಕ್ಕೆ ಚಾಲನೆ ನೀಡಲಿದ್ದಾರೆ.
ಈ ಚಿತ್ರವನ್ನ ಕನ್ನಡದ ಯುವ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದು, ಚಿತ್ರದ ಸ್ಕ್ರಿಪ್ಟ್ ವರ್ಕ್ ಮುಗಿಸಿದ್ದಾರೆ. 'ಒಡೆಯರ್' ಚಿತ್ರದ ಇನ್ನು ಸ್ಕ್ರಿಪ್ಟ್ ಹಂತದಲ್ಲಿರುವಾಗಲೇ ದರ್ಶನ್ ಗೆ ಬಹುದೊಡ್ಡ ಸವಾಲು ಎದುರಾಗಿದೆ.
ಹೌದು, ದರ್ಶನ್ ಅವರನ್ನ ತುಂಬ ಸ್ಟೈಲಿಶ್ ಆಗಿ ತೋರಿಸುವ ಪ್ರಯತ್ನ ಮಾಡುತ್ತಿರುವ ಪವನ್ ಒಡೆಯರ್ ಈ ಚಿತ್ರದಲ್ಲಿ ದರ್ಶನ್ ಅವರಿಗೆ ಚಾಲೆಂಜಿಂಗ್ ಟಾಸ್ಕ್ ಕೊಟ್ಟಿದ್ದಾರೆ. ಏನದು ಎಂದು ತಿಳಿದುಕೊಳ್ಳಲು ಮುಂದೆ ಓದಿ.....
ದರ್ಶನ್ ಲವರ್ ಬಾಯ್
ಪವನ್ ಒಡೆಯರ್ ಆಕ್ಷನ್ ಕಟ್ ಹೇಳುತ್ತಿರುವ 51ನೇ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಲವರ್ ಬಾಯ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ದರ್ಶನ್ 51ನೇ ಚಿತ್ರಕ್ಕೂ ಭರ್ಜರಿ ತಯಾರಿ, ಡೈರೆಕ್ಟರ್ ಫಿಕ್ಸ್
ತೂಕ ಇಳಿಸಬೇಕಾಗಿದೆ
'ಕುರಕ್ಷೇತ್ರ' ಚಿತ್ರಕ್ಕಾಗಿ ಸುಮಾರು 90 ಕೆಜಿ ತೂಕ ಹೆಚ್ಚಿಸಿಕೊಂಡಿರುವ ದರ್ಶನ್, ಪವನ್ ಒಡೆಯರ್ ಚಿತ್ರಕ್ಕೆ ತೂಕ ಇಳಿಸಬೇಕಾಗಿದೆ. ಲವರ್ ಬಾಯ್ ಇಮೇಜ್ ಗೆ ತಕ್ಕಂತೆ ಸ್ಲಿಮ್ ಆಗಬೇಕಿದೆ.
ಎಕ್ಸ್ ಕ್ಲೂಸಿವ್: ದರ್ಶನ್ 51ನೇ ಸಿನಿಮಾದ ಬಗ್ಗೆ ಇದ್ದ ಡೌಟ್ ಕ್ಲಿಯರ್.!
ಸಿಕ್ಸ್ ಪ್ಯಾಕ್ ಮಾಡಿದ್ದ ದರ್ಶನ್
ಎ.ಪಿ ಅರ್ಜುನ್ ನಿರ್ದೇಶನ ಮಾಡಿದ್ದ 'ಐರಾವತ' ಚಿತ್ರಕ್ಕಾಗಿ ದರ್ಶನ್ ಸಿಕ್ಸ್ ಪ್ಯಾಕ್ ಮಾಡಿದ್ದರು. 'ತಾರಕ್' ಚಿತ್ರಕ್ಕಾಗಿ ತಮ್ಮ ಹೇರ್ ಸ್ಟೈಲ್ ಸಂಪೂರ್ಣವಾಗಿ ಬದಲಿಸಿದ್ದರು. ಹೀಗಾಗಿ, ಪಾತ್ರಗಳಿಗಾಗಿ ಹೊಂದಿಕೊಳ್ಳುವ ದರ್ಶನ್ ಈಗ 'ಒಡೆಯರ್' ಚಿತ್ರಕ್ಕಾಗಿ ಸ್ಲಿಮ್ ಆಗಲಿದ್ದಾರೆ.
ಚಿತ್ರದ ಟೈಟಲ್ 'ಒಡೆಯರ್'
ಅಂದ್ಹಾಗೆ, ಪವನ್ ಒಡೆಯರ್ ಹಾಗೂ ದರ್ಶನ್ ಕಾಂಬಿನೇಷನ್ ಚಿತ್ರಕ್ಕೆ ಒಡೆಯರ್ ಎಂದು ಟೈಟಲ್ ಇರಿಸಲಾಗಿದೆ. ಈ ಚಿತ್ರವನ್ನ ಸಂದೇಶ್ ನಾಗರಾಜ್ ನಿರ್ಮಾಣ ಮಾಡುತ್ತಿದ್ದಾರೆ. ಮುಂದಿನ ವರ್ಷ ಈ ಸಿನಿಮಾ ಸೆಟ್ಟೇರಲಿದೆ.