Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಟಗರು' ಚಿತ್ರಕ್ಕೆ ಶುಭ ಕೋರಿದ ಪವನ್ ಓಡೆಯರ್, ಸಂತೋಷ್ ಆನಂದ್ ರಾಮ್
'ಟಗರು' ಸಿನಿಮಾ ಇದೇ ಶುಕ್ರವಾರ ರಿಲೀಸ್ ಆಗಲಿದೆ. ಸಿನಿಮಾಗೆ ಇನ್ನು 3 ದಿನ ಬಾಕಿ ಇದ್ದು ಅಭಿಮಾನಿಗಳು ಸಿನಿಮಾ ನೋಡುವುದಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ. ಫ್ಯಾನ್ಸ್ ಮಾತ್ರವಲ್ಲದೆ ಕನ್ನಡ ಚಿತ್ರರಂಗದ ನಿರ್ದೇಶಕರು ಕೂಡ 'ಟಗರು' ನೋಡಲು ಕಾಯುತ್ತಿದ್ದಾರೆ.
ಸದ್ಯ 'ಟಗರು' ಸಿನಿಮಾಗೆ ನಿರ್ದೇಶಕರಾದ ಪವನ್ ಓಡೆಯರ್ ಮತ್ತು ಸಂತೋಷ್ ಆನಂದ್ ರಾಮ್ ಶುಭಕೋರಿದ್ದಾರೆ. ಫೇಸ್ ಬುಕ್ ನಲ್ಲಿ ಈ ಇಬ್ಬರು ನಿರ್ದೇಶಕರು ವಿಡಿಯೋ ಮೂಲಕ ತಮ್ಮ ಶುಭಾಶಯವನ್ನು 'ಟಗರು' ಚಿತ್ರತಂಡಕ್ಕೆ ಹೇಳಿದ್ದಾರೆ.
'ಟಗರು' ನೋಡಲು ತುದಿಗಾಲಲ್ಲಿ ನಿಂತಿರುವ ನಿವೇದಿತಾ ಗೌಡ
ಪವನ್ ಒಡೆಯರ್ 'ಮಾತನಾಡಿ 'ಟಗರು' ಟ್ರೇಲರ್ ನೋಡಿ ಫಿದಾ ಆಗಿದ್ದೇನೆ. ಶುಕ್ರವಾರ ಮಾರ್ನಿಂಗ್ ಶೋ ಸಿನಿಮಾ ನೋಡಬೇಕು. ಅದ್ಬುತವಾಗಿ ಸಿನಿಮಾ ಮಾಡಿರುತ್ತಾರೆ. ನೀವು ಟಿಕೆಟ್ ಬುಕ್ ಮಾಡಿ ನೋಡಿ.'' ಎಂದು ಹೇಳಿದ್ದಾರೆ.
ಇನ್ನೂ 'ಟಗರು' ಶಿವರಾಜ್ ಕುಮಾರ್ ಮತ್ತು ದುನಿಯಾ ಸೂರಿ ಕಾಂಬಿನೇಶನ್ ನಲ್ಲಿ ಬರುತ್ತಿರುವ ಎರಡನೇ ಸಿನಿಮಾವಾಗಿದೆ. ನಟಿ ಭಾವನಾ, ಮಾನ್ವಿತಾ ಹರೀಶ್, ಧನಂಜಯ್, ವಸಿಷ್ಟ ಸಿನಿಮಾದಲ್ಲಿ ನಟಿಸಿದ್ದಾರೆ. ಚರಣ್ ರಾಜ್ ಸಂಗೀತ ಚಿತ್ರದಲ್ಲಿದೆ. 'ಟಗರು' ಸಿನಿಮಾ ಇದೇ ತಿಂಗಳು 23ಕ್ಕೆ ರಿಲೀಸ್ ಆಗುತ್ತಿದೆ. ಈಗಾಗಲೇ 'ಟಗರು' ಟಿಕೆಟ್ ಬುಕ್ಕಿಂಗ್ ಶುರು ಆಗಿದೆ.