Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಪವನ್ ಒಡೆಯರ್
Recommended Video
ಕನ್ನಡದ ಸ್ಟಾರ್ ನಿರ್ದೇಶಕ ಪವನ್ ಒಡೆಯರ್ ಇಂದು ದಾಂಪತ್ಯ ಜೀವನಕ್ಕೆ ಲಗ್ಗೆ ಇಟ್ಟಿದ್ದಾರೆ. ಬಾಗಲಕೋಟೆಯಲ್ಲಿ ಇಂದು ಅವರ ಮದುವೆ ಅದ್ದೂರಿಯಾಗಿ ನಡೆದಿದೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ರವರ ನಿಶ್ಚಿತಾರ್ಥ ಸಮಾರಂಭ ಬಾಗಲಕೋಟೆಯಲ್ಲಿ ನಡೆದಿತ್ತು. ಅಪೇಕ್ಷಾ ಪುರೋಹಿತ್ ಮೂಲತಃ ಬಾಗಲಕೋಟೆಯವರಾಗಿದ್ದು, ಅಲ್ಲಿಯ ವಿದ್ಯಗಿರಿಯಲ್ಲಿರುವ ಗೌರಿಶಂಕರ್ ಕಲ್ಯಾಣ ಮಂಟಪದಲ್ಲಿ ವಿವಾಹ ಕಾರ್ಯಕ್ರಮ ಸಹ ಜರುಗಿದೆ. ಇಂದು (ಆಗಸ್ಟ್ 20) ಬೆಳಗ್ಗೆ 9.05 ಶುಭ ಮುಹೂರ್ತದಲ್ಲಿ ಅಪೇಕ್ಷಾ ಕೊರಳಿಗೆ ಪವನ್ ತಾಳಿ ಕಟ್ಟಿದ್ದಾರೆ.
ಹಸೆಮಣೆ ಏರಿದ 'ಸಿದ್ಧಾರ್ಥ'ನ ಸ್ನೇಹಿತೆ ನಯನ
ಪವನ್ ಒಡೆಯರ್ ಹಾಗೂ ಅಪೇಕ್ಷಾ ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಆದ ಎಂಟು ತಿಂಗಳ ಬಳಿಕ ಈ ಜೋಡಿ ಹಸೆಮಣೆ ಏರಿದೆ. ನಿನ್ನೆ ಆರತಕ್ಷತೆ ಕಾರ್ಯಕ್ರಮ ಸಹ ಗ್ರಾಂಡ್ ಆಗಿ ನೆರವೇರಿದೆ.
ಅಂದಹಾಗೆ, ನಿರ್ದೇಶಕ ಪವನ್ ಒಡೆಯರ್ ಸದ್ಯ ಪುನೀತ್ ರಾಜ್ ಕುಮಾರ್ ಅವರ 'ನಟ ಸಾರ್ವಭೌಮ' ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೂ ಮುಂಚೆ 'ರಣವಿಕ್ರಮ', 'ನಟರಾಜ ಸರ್ವಿಸ್', 'ಗೂಗ್ಲಿ' ಹಾಗೂ 'ಗೋವಿಂದಾಯ ನಮಃ' ಸಿನಿಮಾಗಳನ್ನು ಪವನ್ ನಿರ್ದೇಶನ ಮಾಡಿದ್ದರು.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಕ್ಸ್ಕ್ಯೂಸ್ ಮಿ ಸುನೀಲ್
ಅಪೇಕ್ಷಾ ಸಹ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಟಿ ಎನ್ ಸೀತಾರಾಮ್ ಅವರ ನಿರ್ದೇಶನದಲ್ಲಿ ಬಂದ 'ಕಾಫಿತೋಟ' ಸಿನಿಮಾದ ಒಂದು ಪಾತ್ರದಲ್ಲಿ ಅಪೇಕ್ಷ ನಟಿಸಿದ್ದರು.