Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತನಾಗಿ ಟ್ರ್ಯಾಕ್ಟರ್ ಚಾಲನೆ ಮಾಡಿದ ನಿರ್ದೇಶಕ ಪವನ್ ಒಡೆಯರ್
ಕೊರೊನಾ ವೈರಸ್ನಿಂದ ಶೂಟಿಂಗ್ಗೆ ಬ್ರೇಕ್ ಕೊಟ್ಟಿರುವ ಪವನ್ ಒಡೆಯರ್ ತಮ್ಮ ಊರಿಗೆ ಹೋಗಿ ಸಮಯ ಕಳೆಯುತ್ತಿದ್ದಾರೆ. ಈ ನಡುವೆ ಸಿನಿಮಾ ನಿರ್ದೇಶನ ಬಿಟ್ಟು ಜಗತ್ತಿನ ಶ್ರೇಷ್ಠ ಕೆಲಸ ಆಯ್ಕೆ ಮಾಡಿಕೊಂಡಿದ್ದಾರೆ.
ಹೀಗಂತ ನಾವು ಹೇಳ್ತಿಲ್ಲ, ಸ್ವತಃ ಪವನ್ ಒಡೆಯರ್ ತಮ್ಮ ಟ್ವಿಟ್ಟರ್ನಲ್ಲಿ ವಿಡಿಯೋ ಹಂಚಿಕೊಂಡು 'ಜಗತ್ತಿನ ಶ್ರೇಷ್ಠ ಕೆಲಸ' ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಸೀಮಂತ ಸಂಭ್ರಮದಲ್ಲಿ ನಿರ್ದೇಶಕ ಪವನ್ ಒಡೆಯರ್ ಪತ್ನಿ ಅಪೇಕ್ಷಾ ಪುರೋಹಿತ್
ಹೌದು, ಸ್ಟಾರ್ ನಿರ್ದೇಶಕ ಪವನ್ ಒಡೆಯರ್ ರೈತನಾಗಿ ಟ್ರ್ಯಾಕ್ಟರ್ ಚಾಲನೆ ಮಾಡಿರುವುದು ಗಮನ ಸೆಳೆದಿದೆ. ತಮ್ಮ ತೋಟದಲ್ಲಿ ಟ್ರ್ಯಾಕ್ಟರ್ ಮೂಲಕ ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.
ಪವನ್ ಒಡೆಯರ್ ಚೊಚ್ಚಲ ಮಗುವಿಗೆ ತಂದೆಯಾಗುತ್ತಿದ್ದು, ಈಗಷ್ಟೇ ತಮ್ಮ ಪತ್ನಿ ಆಪೇಕ್ಷಾ ಅವರ ಸೀಮಂತ ಕಾರ್ಯಕ್ರಮ ಮಾಡಿದ್ದಾರೆ. ಈ ಫೋಟೋಗಳ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಕೊರೊನಾ ವೈರಸ್ ಸಮಯದಲ್ಲಿ 'ಬದಲಾಗು ನೀನು....' ಎಂಬ ಜಾಗೃತಿ ಹಾಡು ಚಿತ್ರೀಕರಿಸಿದ್ದರು. ಈ ಹಾಡಿನಲ್ಲಿ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿದಂತೆ ಇಂಡಸ್ಟ್ರಿಯ ಬಹುತೇಕ ಕಲಾವಿದರು ಕಾಣಿಸಿಕೊಂಡಿದ್ದರು.
Recommended Video
ಇನ್ನು ನಟಸಾರ್ವಭೌಮ ಸಿನಿಮಾದ ಬಳಿಕ ರೆಮೋ ಎಂಬ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಚಿತ್ರೀಕರಂ ಮುಗಿಸಿರುವ ಪವನ್ ಒಡೆಯರ್, ಅಂತಿಮ ಹಂತದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಾಕಿ ಉಳಿಸಿಕೊಂಡಿದ್ದಾರೆ.