Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ಚಿತ್ರಕ್ಕೆ ಪವನ್ ಒಡೆಯರ್ ಆಕ್ಷನ್ ಕಟ್
ಕನ್ನಡದಲ್ಲಿ ಕೋಮಲ್ ಪೋಷಿಸಿದ್ದ ಪಾತ್ರವನ್ನು ತೆಲುಗಿನಲ್ಲಿ ಡೈಲಾಗ್ ಕಿಂಗ್ ಮೋಹನ್ ಬಾಬು ಪುತ್ರ ಮಂಚು ಮನೋಜ್ ಮಾಡಲಿದ್ದಾರೆ. ಪವನ್ ಅವರ ನಿರ್ದೇಶನ ಸ್ವತಃ ಮೋಹನ್ ಬಾಬು ಅವರೇ ಕ್ಲೀನ್ ಬೋಲ್ಡ್ ಆಗಿದ್ದಾರಂತೆ. ಈಗಾಗಲೆ ಪವನ್ ಕೈಗೆ ಮುಂಗಡ ಹಣವೂ ಸಂದಾಯವಾಗಿದೆ ಎನ್ನುತ್ತವೆ ಮೂಲಗಳು.
'ಗೋವಿಂದಾಯ ನಮಃ' ಚಿತ್ರವನ್ನು ಯಥಾವತ್ತಾಗಿ ತೆಲುಗಿಗೆ ತರದೆ ಒಂದಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತದೆ. ಅಲ್ಲಿನ ಪ್ರೇಕ್ಷಕರ ನಾಡಿಮಿಡಿತಕ್ಕೆ ತಕ್ಕಂತೆ ಬದಲಾವಣೆಗಳಿರುತ್ತವಂತೆ. ಮಾರ್ಚ್ 21ಕ್ಕೆ ಹೈದರಾಬಾದಿನಲ್ಲಿ ಮುಹೂರ್ತ ಪಿಕ್ಸ್ ಆಗಿದೆ.
ಚಿತ್ರದ ಉಳಿದ ಪಾತ್ರವರ್ಗ, ತಂತ್ರಜ್ಞರ ಬಳಗ ಇನ್ನೂ ಅಂತಿಮವಾಗಿಲ್ಲ. ಚಿತ್ರದ ಶೀರ್ಷಿಕೆ ಸೇರಿದಂತೆ ಎಲ್ಲವೂ ಶೀಘ್ರದಲ್ಲೇ ಪ್ರಕಟವಾಗಲಿವೆ. ಏತನ್ಮಧ್ಯೆ ಪವನ್ ಮತ್ತೊಂದು ಕನ್ನಡ ಚಿತ್ರದಲ್ಲೂ ಬಿಜಿಯಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಾಯಕ ನಟನಾಗಿರುವ 'ಗೂಗ್ಲಿ' ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಮುಕ್ತಾಯವಾಗಲಿದೆ.
ಅದಾದ ಕೂಡಲೆ ತೆಲುಗು 'ಗೋವಿಂದಾಯ ನಮಃ' ಚಿತ್ರದಲ್ಲಿ ಪವನ್ ತೊಡಗಿಕೊಳ್ಳಲಿದ್ದಾರೆ. ಕೇವಲ ಕರ್ನಾಟದಕದಲ್ಲಷ್ಟೇ ಅಲ್ಲದೆ ಹೊರ ರಾಜ್ಯಗಳಲ್ಲೂ 'ಗೋವಿಂದ' ಪ್ಯಾರ್ಗೆ ಆಗ್ಬಿಟ್ಟಿದ್ದ. ದೆಹಲಿ, ಗೋವಾ, ಹೈದರಾಬಾದ್ ಸೇರಿದಂತೆ ಮುಂಬೈ ಹಾಗೂ ಚೆನ್ನೈನ ಪಿವಿಆರ್ಗಳಲ್ಲಿ 'ಗೋವಿಂದ'ನಿಗೆ ಒಳ್ಳೆಯ ಕಲೆಕ್ಷನ್ ಆಗಿತ್ತು. (ಏಜೆನ್ಸೀಸ್)