Don't Miss!
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾವಣಗೆರೆಯಲ್ಲಿ 'ಯುವರತ್ನ' ನೋಡಲು ನೂಕುನುಗ್ಗಲು, ಪೊಲೀಸರಿಂದ ಲಾಠಿಚಾರ್ಜ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ವೀಕ್ಷಣೆ ವೇಳೆ ಚಿತ್ರಮಂದಿರದ ಬಳಿ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದಿದೆ.
Recommended Video
ದಾವಣಗೆರೆಯ ಮೂರು ಚಿತ್ರಮಂದಿರಗಳಲ್ಲಿ 'ಯುವರತ್ನ' ಸಿನಿಮಾ ರಿಲೀಸ್ ಆಗಿದೆ. ನಗರದ ಗೀತಾಂಜಲಿ ಚಿತ್ರಮಂದಿರದಲ್ಲಿ ನೂಕುನುಗ್ಗಲು ಉಂಟಾದ ಹಿನ್ನೆಲೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿ ರುಚಿ ತೋರಿಸಿದರು.
'ಯವರತ್ನ' ಟ್ವಿಟ್ಟರ್ ವಿಮರ್ಶೆ; ಫಸ್ಟ್ ಶೋ ನೋಡಿ ಅಭಿಮಾನಿಗಳು ಹೇಳಿದ್ದೇನು?
ದಾವಣಗೆರೆಯಲ್ಲಿ ಗೀತಾಂಜಲಿ, ಪುಷ್ಪಾಂಜಲಿ, ಹಾಗೂ ವಸಂತ ಚಿತ್ರಮಂದಿರಗಳಲ್ಲಿ ಯುವರತ್ನ ಸಿನಿಮಾ ಬಿಡುಗಡೆಗೊಂಡಿದ್ದು, ಬೆಳಿಗ್ಗೆ ಆರು ಗಂಟೆಯಿಂದ ಮೊದಲ ಶೋ ಶುರುವಾಗಿದೆ. ಚಿತ್ರಮಂದಿರದ ಮುಂಭಾಗ ಮುಂಜಾನೆ 4 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಅಭಿಮಾನಿಗಳು ಕಾಯುತ್ತಿರುವುದು ಕಂಡುಬಂತು.
ಚಿತ್ರಮಂದಿರದ ಮುಂಭಾಗ ಅಭಿಮಾನಿಗಳು ಜಮಾಯಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಚಿತ್ರಮಂದಿರದ ಒಳಗೆ ಹೋಗಲು ಅಭಿಮಾನಿಗಳ ನೂಕುನುಗ್ಗಲು ಉಂಟಾದ ಹಿನ್ನೆಲೆ ಪೊಲೀಸರು ಹರ ಸಾಹಸ ಪಟ್ಟರು. ಕೊನೆಗೆ ಲಾಠಿ ರುಚಿ ತೋರಿಸಿ ಅಭಿಮಾನಿಗಳನ್ನು ಪೊಲೀಸರು ನಿಯಂತ್ರಿಸಬೇಕಾಯಿತು.
ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್, ಧನಂಜಯ್, ಸೋನು ಗೌಡ, ಪ್ರಕಾಶ್ ರಾಜ್ ಸೇರಿದಂತೆ ಹಲವು ಕಾಣಿಸಿಕೊಂಡಿದ್ದಾರೆ. ಎಸ್ ತಮನ್ ಸಂಗೀತವಿದ್ದು, ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡಿದೆ.