Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಡ್ಲು ಟಾಕೀಸ್ನಲ್ಲಿ 'ಪೆಪ್ಪೆರೆರೆ ಪೆರೆರೆರೆ' ತುಳು ಸಿನಿಮಾ ಬಿಡುಗಡೆ
ನಿಶಾನ್ ವರುಣ್ ಮೂವೀಸ್ ಬ್ಯಾನರ್ ನಿರ್ಮಿಸಿರುವ ವಿಜಯ್ ಶೋಭರಾಜ್ ಪಾವೂರು ನಿರ್ದೇಶನದ ಪೆಪ್ಪೆರೆರೆ ಪೆರೆರೆರೆ ತುಳು ಸಿನಿಮಾ ಮಾರ್ಚ್ 7 ರಂದು ನಮ್ಮ ಕುಡ್ಲ ಟಾಕೀಸ್ನಲ್ಲಿ ಬಿಡುಗಡೆಯಾಗಿದೆ.
ಕುಡ್ಲ ಟಾಕೀಸ್ನಲ್ಲಿ ಪೆಪ್ಪೆರೆರೆ ಪೆರೆರೆರೆ ಸಿನಿಮಾ ಬಿಡುಗಡೆ ಹಿನ್ನಲೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ''ಇಂದಿನ ದಿನಗಳಲ್ಲಿ ಕುಟುಂಬದ ಅಂತರ ಜಾಸ್ತಿಯಾಗುತ್ತಾ ಇದೆ. ಈ ಸಂದರ್ಭದಲ್ಲಿ ಮನೆಯಲ್ಲೇ ಸಿನಿಮಾವನ್ನು ಕುಟುಂಬ ಸಮೇತ ವೀಕ್ಷಿಸುವ ಮೂಲಕ ಎಲ್ಲರೂ ಒಟ್ಟು ಸೇರುತ್ತಾರೆ. ಮನರಂಜನೆಯ ಜತೆಗೆ ಸಮಾಜಕ್ಕೆ ಸಂದೇಶ ಸಾರುವ ಸಿನಿಮಾಗಳಿಂದ ಮನಸ್ಸಿಗೆ ನೆಮ್ಮದಿಯೂ ಸಿಗುತ್ತದೆ'' ಎಂದರು.
ಸಂದರ್ಶನ: 'ಗೋರಿ'ಯಿಂದ ಬಂದ ಬಂಗಾರಿ ಶ್ವೇತಾ!
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಚಲನಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ ''ಪ್ರಸಕ್ತ ತುಳು ಸಿನಿಮಾಗಳಿಗೆ ಥಿಯೇಟರ್ನ ಸಮಸ್ಯೆ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ನಮ್ಮ ಕುಡ್ಲ ಟಾಕೀಸ್ ಮೂಲಕ ತುಳು ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ನಿರ್ಮಾಪಕರಲ್ಲಿ ಹೊಸ ಆಶಾಭಾವನೆ ಮೂಡಿದೆ'' ಎಂದರು.
ಕುಡ್ಲ ಟಾಕೀಸ್ನ ಪರಿಕಲ್ಪನೆಯಿಂದ ಸಿನಿಮಾವನ್ನು ಇದೀಗ ಮನೆ ಮನೆಯಲ್ಲಿ ಕುಟುಂಬ ಸಮೇತರಾಗಿ ವೀಕ್ಷಿಸಬಹುದು. ತುಳು ಭಾಷೆಯನ್ನು ಉಳಿಸುವ ಮತ್ತು ತುಳು ಸಿನಿಮಾವನ್ನು ಬೆಳೆಸುವ ನಿಟ್ಟಿನಲ್ಲಿ ಕೇಬಲ್ ಆಪರೇಟರ್ಗಳ ಸಹಕಾರ ಅತೀ ಅಗತ್ಯವಾಗಿದೆ. ನಮ್ಮ ಕುಡ್ಲ ಟಾಕೀಸ್ ಮೂಲಕ ಸಿನಿಮಾ ಬಿಡುಗಡೆಯಾಗುವುದರಿಂದ ಹೊಸ ಹೊಸ ನಿರ್ಮಾಪಕರು ಸಿನಿಮಾ ಮಾಡಲು ಆಸಕ್ತಿ ತೋರುತ್ತಿದ್ದಾರೆ. ಕಲಾವಿದರಿಗೆ, ತಂತ್ರಜ್ಞರಿಗೆ ಯುವ ಬರಹಗಾರ ಸಾಹಿತಿಗಳಿಗೆ ಈ ಮೂಲಕ ಅವಕಾಶ ದೊರೆಯಲಿದೆ. ನಮ್ಮ ಕುಡ್ಲ ಟಾಕೀಸ್ ಪರಿಕಲ್ಪನೆಯಿಂದ ತುಳು ಚಿತ್ರರಂಗಕ್ಕೆ ವ್ಯಾಕ್ಸಿನ್ ದೊರಕಿದಂತಾಗಿದೆ'' ಎಂದು ದೇವದಾಸ್ ಕಾಪಿಕಾಡ್ ತಿಳಿಸಿದರು.
''ನಾವು ಮಾಡಿದ ಕೆಲಸ ಎಲ್ಲರಿಗೂ ಮುಟ್ಟಬೇಕು, ತಲುಪಬೇಕು. ಕಷ್ಟಪಟ್ಟು ಮಾಡಿದ ಸಿನಿಮಾ ಪ್ರೇಕ್ಷಕರಿಗೆ ತಲುಪಿದಾಗ ಮಾಡಿದ ಕೆಲಸದಲ್ಲಿ ಸಾರ್ಥಕತೆ ಲಭಿಸುತ್ತದೆ'' ಎಂದು ಎ2ಎಸ್ ಎಂಟರ್ಟೈನ್ಮೆಂಟ್ ಸಂಸ್ಥೆಯ ನಿರ್ದೇಶಕ ನಟ ಅರ್ಜುನ್ ಕಾಪಿಕಾಡ್ ತಿಳಿಸಿದರು.
ಪಂಜಾಬಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಕರಾವಳಿಯ ಬೆಡಗಿ
ಸಮಾರಂಭದಲ್ಲಿ ಮಾಲ್ನಾಡ್ ಇನ್ಫೋಟೆಕ್ನ ಸಿಇಓ ಹರೀಶ್ ಬಿ.ಕರ್ಕೇರ, ಸತ್ಯಜಿತ್ ಸುರತ್ಕಲ್, ವಿಶ್ವಾಸ್ದಾಸ್, ಪೆಪ್ಪೆರೆರೆ ಪೆರೆರೆರೆ ಸಿನಿಮಾದ ನಿರ್ಮಾಪಕರಾದ ನಿಶಾನ್ ಕೃಷ್ಣ ಭಂಡಾರಿ, ವರುಣ್ ಸಾಲ್ಯಾನ್, ಕುಸೇಲ್ದರಸೆ ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರು, ಸುರೇಶ್ ಬಿ ಕರ್ಕೇರ, ಮೋಹನ್ ಬಿ ಕರ್ಕೇರ, ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಉಪಸ್ಥಿತರಿದ್ದರು. ಲೀಲಾಕ್ಷ ಬಿ ಕರ್ಕೇರ ಸ್ವಾಗತಿಸಿದರು. ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
Recommended Video
ಪೆಪ್ಪೆರೆರೆ ಪೆರೆರೆರೆ ತುಳು ಚಲನ ಚಿತ್ರವು ಒಂದು ತಿಂಗಳ ಕಾಲ ಪ್ರತೀ ಭಾನುವಾರ ಮಧ್ಯಾಹ್ನ 1.30 ಸಂಜೆ 6, ರಾತ್ರಿ 9 ಗಂಟೆಗೆ ನಮ್ಮ ಕುಡ್ಲ ಟಾಕೀಸ್ನಲ್ಲಿ ಪ್ರದರ್ಶನ ಕಾಣಲಿದೆ.