Don't Miss!
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಶ್ವರೂಪಂ' ಚಿತ್ರಮಂದಿರಗಳ ಮೇಲೆ ಬಾಂಬ್ ದಾಳಿ
ತಮಿಳುನಾಡಿನಲ್ಲಿ 'ವಿಶ್ವರೂಪಂ' ಚಿತ್ರ ಬಿಡುಗಡೆ ಬಗ್ಗೆ ಮದ್ರಾಸ್ ಹೈಕೋರ್ಟ್ ಇನ್ನೂ ಅಂತಿಮ ತೀರ್ಪು ನೀಡಿಲ್ಲ. ಈ ತೀರ್ಪಿನ ನಿರೀಕ್ಷೆಯಲ್ಲಿದ್ದ ಕಮಲ್ ಹಾಸನ್ ಹಾಗೂ ಅವರ ಅಭಿಮಾನಿಗಳಿಗೆ ಬಾಂಬ್ ದಾಳಿ ಶಾಕ್ ನೀಡಿದೆ.
ಈ ಮೂಲಕ 'ವಿಶ್ವರೂಪಂ' ಚಿತ್ರಕ್ಕೆ ಮತ್ತೊಂದು ದೊಡ್ಡ ಗಂಡಾಂತರ ಎದುರಾದಂತಾಗಿದೆ. ತಮಿಳುನಾಡಿನಲ್ಲಿ 'ವಿಶ್ವರೂಪಂ' ಚಿತ್ರ ಬಿಡುಗಡೆ ಮತ್ತಷ್ಟು ಕಗ್ಗಂಟಾಗಿ ಪರಿಣಮಿಸುವ ಸಾಧ್ಯತೆಗಳಿವೆ. ಪೆಟ್ರೋಲ್ ಬಾಂಬ್ ಎಸೆದ ಪರಿಣಾಮ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಇದೀಗ ತಾನೆ ಬಂದ ಸುದ್ದಿ...ವಿಶ್ವರೂಪಂ ಚಿತ್ರದ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಫೆಬ್ರವರಿ 6ಕ್ಕೆ ತೀರ್ಪನ್ನು ಮುಂದೂಡಿದೆ. ಕಮಲ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ. ಏತನ್ಮಧ್ಯೆ ಕರ್ನಾಟಕ ಹಾಗೂ ಉಳಿದ ಕಡೆಗಳಲ್ಲಿ ವಿಶ್ವರೂಪಂ ಚಿತ್ರ ನಿರಾತಂಕವಾಗಿ ಪ್ರದರ್ಶನ ಕಾಣುತ್ತಿದೆ.
ಇನ್ನೊಂದು ಪ್ರಮುಖ ಘಟನೆಯಲ್ಲಿ ಕೆಲವು ಮುಸ್ಲಿಂ ಸಂಘಟನೆಗಳು ಕಮಲ್ ಹಾಸನ್ ಅವರನ್ನು ಭೇಟಿ ಮಾಡಿ ಚಿತ್ರದಲ್ಲಿನ ಕೆಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಮನವಿ ಮಾಡಿದರು. ಪರಿಶೀಲಿಸುವುದಾಗಿ ಕಮಲ್ ಭರವಸೆ ನೀಡಿದ್ದಾರೆ. ಶಾಂತಿ ಕಾಪಾಡುವಂತೆ ಅಭಿಮಾನಿಗಳಲ್ಲಿ ಕಮಲ್ ಮನವಿ ಮಾಡಿಕೊಂಡಿದ್ದಾರೆ. ಒನ್ಇಂಡಿಯಾ ಕನ್ನಡ)