Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ್ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ ಸಿಬ್ಬಂದಿ
ನಟ ವಿಜಯ್ ರಾಘವೇಂದ್ರ ಅವರನ್ನು ನೋಡಿದ ಖುಷಿಯಲ್ಲಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಪ್ರತಿಷ್ಠಿತ ಪೆಟ್ರೋಲ್ ಬಂಕ್ ಒಂದರಲ್ಲಿ ಮಂಗಳವಾರ ಈ ಘಟನೆ ವರದಿಯಾಗಿದೆ. ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ವಿಜಯ್ ರಾಘವೇಂದ್ರ ಜೋಗ ನೋಡಿಕೊಂಡು ಬೆಂಗಳೂರಿಗೆ ವಾಪಸ್ ಆಗುವ ಸಂದರ್ಭದಲ್ಲಿ ಪೆಟ್ರೋಲ್ ಹಾಕಿಸಲು ಹತ್ತಿರದ ಪೆಟ್ರೋಲ್ ಬಂಕ್ಗೆ ಹೋಗಿದ್ದಾರೆ.
ವಿಜಯ್ ರಾಘವೇಂದ್ರ ಹಾಡು ಹಾಡಲು ಆ ವಿಶೇಷ ವ್ಯಕ್ತಿಯೇ ಸ್ಪೂರ್ತಿ
ಈ ವೇಳೆ ಪೆಟ್ರೋಲ್ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ನೆಚ್ಚಿನ ಸಿನಿಮಾ ನಟನನ್ನು ನೋಡಿ ಖುಷಿಯಾಗಿ ಮೈ ಮರೆತು ಪೆಟ್ರೋಲ್ ಬದಲು ಡೀಸೆಲ್ ಹಾಕಿಬಿಟ್ಟಿದ್ದಾನೆ.
ಬಳಿಕ ನಟ ವಿಜಯ್ ರಾಘವೇಂದ್ರ ಅವರ ಬಳಿ ಪೆಟ್ರೋಲ್ ಬಂಕ್ ಸಿಬ್ಬಂದಿ ಹಾಗೂ ಮಾಲೀಕರು ಕ್ಷಮೆ ಯಾಚಿಸಿದ್ದಾರೆ. ನಂತರ ತಮ್ಮ ಲಾರಿಯಲ್ಲಿ ಹತ್ತಿಸಿ ಸರ್ವೀಸ್ ಗೆ ಕಳುಹಿಸಲಾಯಿತು.
ಮತ್ತೊಂದೆಡೆ ವಿಜಯ್ ರಾಘವೇಂದ್ರ ಹಾಗೂ ಕುಟುಂಬದವರು ಬೇರೆ ಕಾರಿನ ವ್ಯವಸ್ಥೆ ಮಾಡಿಕೊಂಡು ಬೆಂಗಳೂರಿಗೆ ಪ್ರಯಾಣ ಮಾಡಿದ್ದಾರೆ ಎಂದು ತಿಳಿದು ಬಂದಿದೆ.