Don't Miss!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು ಬೆಂಗಳೂರಿಗೆ ಬರ್ತಾರೆ 'ಪೆಟ್ಟಾ' ಮತ್ತು 'ಎನ್ ಟಿ ಆರ್' ಟೀಂ
ಸಂಕ್ರಾಂತಿ ಹಬ್ಬಕ್ಕೆ ಕೆಲವೇ ದಿನಗಳ ಬಾಕಿ ಇದೆ. ಈ ಬಾರಿಯ ಹಬ್ಬಕ್ಕೆ ತಮಿಳು ಹಾಗೂ ತೆಲುಗಿನಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆಯಾಗುತ್ತಿವೆ.
ಟಾಲಿವುಡ್ ನಲ್ಲಿ 'ಎನ್ ಟಿ ಆರ್' ಹಾಗೂ ಕಾಲಿವುಡ್ ನಲ್ಲಿ 'ಪೆಟ್ಟಾ' ಚಿತ್ರಗಳು ಇದೇ ವಾರ ತೆರೆಗೆ ಬರುತ್ತಿವೆ. ಈ ಹಿನ್ನಲೆಯಲ್ಲಿ ಚಿತ್ರತಂಡ ಇಂದು ಬೆಂಗಳೂರಿಗೆ ಆಗಮಿಸಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ಗಳಲ್ಲಿ ಇಂದು ಸಂಜೆ ಚಿತ್ರದ ಪ್ರೆಸ್ ಮೀಟ್ ಗಳು ನಡೆಯಲಿವೆ.
'ಪೆಟ್ಟಾ' ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಸಿನಿಮಾವಾಗಿದೆ. ಈ ಚಿತ್ರದ ನಿರ್ದೇಶಕರಾದ ಕಾರ್ತಿಕ್ ಸುಬ್ಬರಾಜ್ ಹಾಗೂ ಸಂಗೀತ ನಿರ್ದೇಶಕ ಅನಿರುದ್ಧ ನಾಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
'ಕೆಜಿಎಫ್' ಎಫೆಕ್ಟ್: ಕನ್ನಡಕ್ಕೆ ರಜನಿ-ರಾಮ್ ಚರಣ್ ಸಿನಿಮಾ.!
'ಎನ್ ಟಿ ಆರ್' ತೆಲುಗಿನ ಖ್ಯಾತ ನಟ ಎನ್ ಟಿ ರಾಮರಾವ್ ಅವರ ಜೀವನಾಧಾರಿತ ಸಿನಿಮಾವಾಗಿದೆ. ಈ ಸಿನಿಮಾದ ನಾಯಕ ಬಾಲಕೃಷ್ಣ, ನಾಯಕಿ ವಿದ್ಯಾ ಬಾಲನ್ ಕಾರ್ಯಕ್ರಮದಲ್ಲಿ ಇರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಹಾಗೂ ಯಶ್ ಸಹ ಸಾಥ್ ನೀಡಲಿದ್ದಾರೆ.
'ಎನ್ ಟಿ ಆರ್' ಸಿನಿಮಾ ಜನವರಿ 9 ರಂದು ಹಾಗೂ 'ಪೆಟ್ಟಾ' ಸಿನಿಮಾ ಜನವರಿ 10 ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿವೆ.