Don't Miss!
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- News Mukhtar Ansari: ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ರಶ್ಮಿ ಮನೆ ಮೇಲಿಂದ ಬಿದ್ದು ಯುವಕ ಸಾವು
ದುನಿಯಾ ಖ್ಯಾತಿಯ ನಟಿ ರಶ್ಮಿ ಅವರ ಮನೆ ಮೇಲಿಂದ ಯುವಕನೊಬ್ಬ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 25 ವರ್ಷದ ಪ್ರತೀಕ್ ಎಂಬ ಯುವಕ ಸಾವನ್ನಪ್ಪಿದ್ದಾರೆ.
ಪ್ರತೀಕ್ ವೃತ್ತಿಯಲ್ಲಿ ಫೊಟೋಗ್ರಫರ್ ಆಗಿದ್ದು, ದುನಿಯಾ ರಶ್ಮಿ ಅವರ ಸಹೋದರ ಅರುಣ್ ಅವರ ಸ್ನೇಹಿತರಾಗಿದ್ದರಂತೆ. ರಾತ್ರಿ ಮನೆಯಲ್ಲಿ ಪಾರ್ಟಿ ಇದ್ದ ಕಾರಣ ಆಗಮಿಸಿದ್ದ ಪ್ರತೀಕ್ ಮನೆ ಮೇಲೆ ಹೋಗಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಪಾನಮತ್ತನಾಗಿದ್ದ ಪ್ರತೀಕ್ ಬಿಲ್ಡಿಂಗ್ ಮೇಲಿಂದ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಮಾರ್ಗಮಧ್ಯೆ ಪ್ರತೀಕ್ ಕೊನೆಯುಸಿರೆಳೆದಿದ್ದಾರೆ.
ದುನಿಯಾ ರಶ್ಮಿ ಯಾರ್ ಜೊತೆಗೂ ಮಾತಾಡುತ್ತಿಲ್ಲ ಯಾಕೆ?
ಅಂದ್ಹಾಗೆ, ದುನಿಯಾ ರಶ್ಮಿ ಸಹೋದರ ಅರುಣ್ ಮತ್ತು ಪ್ರತೀಕ್ ಇಬ್ಬರು ಬಿಲ್ಡಿಂಗ್ ಮೇಲೆ ಪಾರ್ಟಿ ಮಾಡುತ್ತಿದ್ದರು. ಈ ಮಧ್ಯೆ ಅರುಣ್ ಊಟ ತರಲು ಮೇಲಿಂದ ಕೆಳಗೆ ಬಂದಿದ್ದಾನೆ. ಆ ಸಮಯದಲ್ಲಿ ಮತ್ತಿನಲ್ಲಿದ್ದ ಪ್ರತೀಕ್ ಮೇಲಿಂದ ಬಿದ್ದಿದ್ದಾನೆ ಎನ್ನಲಾಗಿದೆ.
ನಂತರ ಅನ್ನಪೂರ್ಣಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದುನಿಯಾ ರಶ್ಮಿ ಕುಟುಂಬದವರು ದೂರು ನೀಡಿದ್ದಾರೆ. ಬಳಿಕ ವಿಷ್ಯ ತಿಳಿದ ಪ್ರತೀಕ್ ಕುಟುಂಬಸ್ಥರು ರಶ್ಮಿ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.