Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಠಾಣ್ ವಿವಾದ:"ಸಿನಿಮಾಗಳ ಬಗ್ಗೆ ಅನಗತ್ಯ ಹೇಳಿಕೆ ನೀಡಬೇಡಿ" ಬಿಜೆಪಿ ಮುಖಂಡರಿಗೆ ಮೋದಿ ಸಂದೇಶ
ಸಿನಿಮಾಗಳ ಬಗ್ಗೆ ಅನಗತ್ಯ ಹೇಳಿಕೆಗಳನ್ನು ನೀಡಿಬೇಡಿ ಎಂದು ಬಿಜೆಪಿ ಮುಖಂಡರಿಗೆ ಪ್ರಧಾನಿ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ. ನವದೆಹಲಿಯಲ್ಲಿ ನಡೆದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಮೋದಿ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗೆ ಬಿಜೆಪಿ ಮುಖಂಡರು ಸಿನಿಮಾಗಳಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿಂದೆ ಮಧ್ಯಪ್ರದೇಶದ ಗೃಹಮಂತ್ರಿ ನರೋತ್ತಮ್ ಮಿಶ್ರಾ 'ಪಠಾಣ್' ಸಿನಿಮಾ ಬಗ್ಗೆ ಕಮೆಂಟ್ ಮಾಡಿದ್ದರು.'ಪಠಾಣ್' ಸಿನಿಮಾದ "ಭೇಷರಮ್ ರಂಗ್.." ಹಾಡಿನಲ್ಲಿ ದೀಪಿಕಾ ಪಡುಕೋಣೆ ಬಿಕಿನಿ ಬಗ್ಗೆ ವಿವಾದವನ್ನು ಸೃಷ್ಟಿಸಿದ್ದರು.
'ಪಠಾಣ್' ರನ್ಟೈಮ್ ಮಾಹಿತಿ ಬಹಿರಂಗ: ಜೋರಾಗಿದೆ ಬಾಕ್ಸಾಫೀಸ್ ಕಲೆಕ್ಷನ್ ಲೆಕ್ಕಾಚಾರ
ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿನಿಮಾಗಳ ವಿಚಾರವಾಗಿ ಅನಗತ್ಯ ಹೇಳಿಕೆಗಳನ್ನು ನೀಡಿದಂತೆ ಖಡಕ್ ಸಂದೇಶವನ್ನು ರವಾನೆ ಮಾಡಿದ್ದಾರೆ.
" ಪ್ರಧಾನಿ ಯಾರ ಹೆಸರನ್ನೂ ತೆಗೆದುಕೊಂಡಿಲ್ಲ. ಆದರೆ, ಅವರ ಪ್ರತಿಯೊಂದು ಪದ ಹಾಗೂ ವಾಕ್ಯ ನಮ್ಮೆಲ್ಲರಿಗೂ ತುಂಬಾನೇ ಮುಖ್ಯ. ಅವರ ಮಾತುಗಳಿಂದ ಪ್ರತಿಯೊಬ್ಬರೂ ಪ್ರೇರಿತರಾಗಿದ್ದೇವೆ. ನಮ್ಮ ವರ್ತನೆಗಳು ಅವರ ಎನರ್ಜಿ ಹಾಗೂ ಮಾರ್ಗದರ್ಶನದಿಂದು ತುಂಬಿದ್ದು, ಇದು ಮುಂದಿನ ದಿನಗಳಲ್ಲೂ ಮುಂದುವರೆಯುತ್ತೆ." ಎಂದು ಮಧ್ಯಪ್ರದೇಶದ ಗೃಹಮಂತ್ರಿ ನರೋತ್ತಮ್ ಮಿಶ್ರಾ ಹೇಳಿದ್ದಾರೆ.
ನರೋತ್ತಮ್ ಮಿಶ್ರಾ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ಪ್ರಮುಖ ಸಚಿವರಲ್ಲಿ ಒಬ್ಬರು. ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಮಿಶ್ರಾ ಕೆಲವೊಮ್ಮೆ ಸುದ್ದಿಯಲ್ಲಿ ಇರುತ್ತಾರೆ. ಅದು ಸಿನಿಮಾ ಆಗಿರಲಿ ಅಥವಾ ರಾಜಕೀಯ ಮುಖಂಡರ ಬಗ್ಗೆ ಆಗಿರಲಿ ಖಡಕ್ ಕಮೆಂಟ್ಗಳನ್ನು ಪಾಸ್ ಮಾಡುತ್ತಾರೆ.
ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ 'ಪಠಾಣ್' ಸಿನಿಮಾದ "ಬೇಷರಂ ಸಾಂಗ್.." ರಿಲೀಸ್ ಆದಾಗ ಮೊದಲು ಕಮೆಂಟ್ ಮಾಡಿದ್ದು ನರೋತ್ತಮ್ ಮಿಶ್ರಾ. ಈ ಹಾಡು ಕೊಳಕು ಮನಸ್ಥಿತಿಯನ್ನು ಪ್ರದರ್ಶಿಸುತ್ತದೆ. ಅಲ್ಲದೆ ಸಿನಿಮಾದ ಶೀರ್ಷಿಕೆ ಕೂಡ "ಆಕ್ಷೇಪಾರ್ಹ" ಎಂದು ಮಧ್ಯಪ್ರದೇಶದ ಗೃಹ ಮಂತ್ರಿ ನರೋತ್ತಮ್ ಮಿಶ್ರಾ ಆರೋಪಿಸಿದ್ದರು.