Don't Miss!
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಿಗಮಪ' ಪೊಲೀಸ್ ಕಾನ್ಸ್ಟೇಬಲ್ ಪತ್ನಿ ಸಾವು ಪ್ರಕರಣಕ್ಕೆ ತಿರುವು
'ಸರಿಗಮಪ' ರಿಯಾಲಿಟಿ ಶೋನಲ್ಲಿ ಹಾಡುಹಾಡಿ ಖ್ಯಾತಿಗಳಿಸಿದ್ದ ಪೊಲೀಸ್ ಕಾನ್ಸ್ಟೇಬಲ್ ಸುಬ್ರಹ್ಮಣ್ಯ ಪತಿ ಜ್ಯೋತಿ ನಿನ್ನೆ ನಿಧನರಾಗಿದ್ದಾರೆ.
Recommended Video
ಜ್ಯೋತಿ ಅವರಿಗೆ ಕೊರೊನಾ ವೈರಸ್ ಆಗಿತ್ತು, ಹಲವಾರು ಕಡೆ ಬೆಡ್ ಮತ್ತು ಆಕ್ಸಿಜನ್ಗಾಗಿ ಹುಡುಕಾಡಿ ಕೊನೆಗೆ ಹೊಸಕೋಟೆ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದೆ ಅವರು ಸಾವನ್ನಪ್ಪಿದರು ಎಂಬ ಸುದ್ದಿಗಳು ಹರಿದಾಡಿತ್ತು. ಆದರೆ ಮಧ್ಯಾಹ್ನದ ವೇಳೆಗೆ ಬೇರೆ ಮಾಹಿತಿ ಹೊರಗೆ ಬಂದಿದೆ.
ಸುಬ್ರಹ್ಮಣ್ಯ ಪತ್ನಿ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಜ್ಯೋತಿ ಅವರು ಇತ್ತೀಚೆಗಷ್ಟೆ ಕೋಲಾರಕ್ಕೆ ತೆರಳಿದ್ದರು. ಅವರು ಅಲ್ಲಿಯೇ ಆತ್ಮಹತ್ಯೆ ಪ್ರಯತ್ನ ಮಾಡಿದ್ದಾರೆ. ಕೂಡಲೇ ಅವರನ್ನು ಹೊಸಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಶವ ಹಸ್ತಾಂತರಕ್ಕೂ ಮುನ್ನಾ ಪರೀಕ್ಷೆ ಮಾಡಿದಾಗ ಅವರಿಗೆ ಕೋವಿಡ್ ಇರುವುದು ಗೊತ್ತಾಗಿದೆ.
ಕೋಲಾರ ಮೂಲದ ಸುಬ್ರಮಣಿ ಬಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಹಳೇ ಕನ್ನಡ ಹಾಡು ಹಾಡುತ್ತಿದ್ದ ಸುಬ್ರಮಣಿ ಪೊಲೀಸರಿಗೆ ಸಂಬಂಧಿಸಿದಂತೆ ಒಂದು ಹಾಡು ಹಾಡಿದ್ದರು. ಅದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು. ಆನಂತರ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪದಲ್ಲಿ ಹಾಡುವ ಅವಕಾಶ ಸಿಕ್ಕಿತ್ತು. ಅಲ್ಲಿ ಕನ್ನಡದ ಹಾಡುಗಳನ್ನು ಹಾಡುವ ಮೂಲಕ ಸುಬ್ರಮಣಿ ರಾಜ್ಯದ ಮನೆ ಮಾತಾಗಿದ್ದರು. ಕೆ.ಆರ್.ಪುರಂನಲ್ಲಿ ತನ್ನ ಪತ್ನಿ ಜ್ಯೋತಿಯೊಂದಿಗೆ ನೆಲೆಸಿದ್ದರು. ಜ್ಯೋತಿಯವರು ಸಹ ಸುಬ್ರಹ್ಮಣ್ಯ ಜೊತೆಗೆ ಒಮ್ಮೆ ಸರಿಗಮಪ ಶೋನಲ್ಲಿ ಕಾಣಿಸಿಕೊಂಡಿದ್ದರು.
ಸುಬ್ರಹ್ಮಣ್ಯ ಪತ್ನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.