Don't Miss!
- News ಕನಕಪುರಕ್ಕೆ ಕಾಲಿಡಲು ಭಯ; ಕೋರ್ಟ್ಗೆ ಯತ್ನಾಳ್ ಹೇಳಿಕೆ!
- Finance ತನ್ನ 4 ವರ್ಷದ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಇನ್ಫೋಸಿಸ್ ಷೇರುಗಳನ್ನು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ನೋಡಲು ಬಂದ ಫ್ಯಾನ್ಸ್: ಹಾವೇರಿಯಲ್ಲಿ ಪೊಲೀಸರಿಂದ ಲಾಠಿ ಚಾರ್ಜ್
25 ಕೋಟಿ ಲೋನ್ ವಿವಾದ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಜೊತೆಗಿನ ಜಟಾಪಟಿ, ವಾದ-ಪ್ರತಿವಾದಗಳಲ್ಲೇ ಸಿಲುಕಿಕೊಂಡಿದ್ದ ನಟ ದರ್ಶನ್ ಈಗ ರಿಲ್ಯಾಕ್ಸ್ನಲ್ಲಿದ್ದಾರೆ.
ಬೆಂಗಳೂರು, ಮೈಸೂರಿನಿಂದ ನೇರವಾಗಿ ಹಾವೇರಿ ಕಡೆ ಹೊರಟ ದರ್ಶನ್, ಮಾಜಿ ಶಾಸಕ ಸುರೇಶ್ ಗೌಡ ಪಾಟೀಲ್ ಅವರ ಗೆಸ್ಟ್ಹೌಸ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಸೋಮವಾರ ರಾತ್ರಿಯಿಂದ ದರ್ಶನ್ ಹಾವೇರಿಯಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದರ್ಶನ್ ಜೊತೆ ನಾವಿದ್ದೇವೆ: ಸಾಮಾಜಿಕ ಜಾಲತಾಣದಲ್ಲಿ ಡಿ ಬಾಸ್ ಪರ ಅಭಿಯಾನ
ದರ್ಶನ್ ಬಂದಿದ್ದಾರೆ ಎಂಬ ವಿಷಯ ತಿಳಿದು ಸುರೇಶ್ ಗೌಡ ಪಾಟೀಲರ ಗೆಸ್ಟ್ಹೌಸ್ ಬಳಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಡಿ ಬಾಸ್, ಡಿ ಬಾಸ್ ಎಂದು ಕೂಗುತ್ತಾ, ಜೈಕಾರ ಹಾಕಿದರು. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಕೊನೆಗೂ ದರ್ಶನ್ ಅವರು ಗೆಸ್ಟ್ಹೌಸ್ನಿಂದ ಹೊರಗೆ ಬಂದರು. ಕಾರಿನಿಂದ ಇಳಿದು ಅಭಿಮಾನಿಗಳತ್ತ ಕೈ ಬೀಸಿದರು. ನೋಡು ನೋಡುತ್ತಿದ್ದಂತೆ ಅಭಿಮಾನಿಗಳು ದರ್ಶನ್ ಕಾರು ಸುತ್ತುವರಿದು ಫೋಟೋ ತೆಗೆಸಿಕೊಳ್ಳಲು ಯತ್ನಿಸಿದರು. ಅಪ್ಪಿಕೊಳ್ಳಲು ಮುಂದಾದರು. ಈ ವೇಳೆ ಸಿಟ್ಟಿಗೆದ್ದ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು.
ಕಾರು ಸುತ್ತವರಿದಿದ್ದ ಅಭಿಮಾನಿಗಳನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ ಪೊಲೀಸರು ದರ್ಶನ್ ಕಾರು ಕಳುಹಿಸಿಕೊಟ್ಟರು. ಈ ವಿಡಿಯೋ ಹಾಗೂ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#Craze_ka_Bhap 💥🔥🔥💥#Exclusive_Video
— All India Challenging Star Darshan Fans (@AICSDF) July 21, 2021
ಅಭಿಮಾನಿಗಳ ಆರಾಧ್ಯ ದೈವ ನಮ್ಮ ಪ್ರೀತಿಯ ಡಿಬಾಸ್#DBoss #Darshan @dasadarshan pic.twitter.com/D5drwPVyIn
ಹಲ್ಲೆ ಆರೋಪ ಎದುರಿಸುತ್ತಿರುವ ದರ್ಶನ್
Recommended Video
ಪತ್ರಕರ್ತ-ನಿರ್ದೇಶಕ ಇಂದ್ರಜಿತ್ ಲಂಕೇಶ್ ನಟ ದರ್ಶನ್ ಹಿಂಬಾಲಕರ ವಿರುದ್ಧ ಬೆದರಿಕೆ ಆರೋಪದಲ್ಲಿ ದೂರು ನೀಡಿದ್ದಾರೆ. ದರ್ಶನ್ ವಿರುದ್ಧ ಆರೋಪ ಮಾಡಿದ್ದಕ್ಕೆ ಅವರು ಬೆಂಬಲಿಗರು ದೂರವಾಣಿ ಮೂಲಕ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.