Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಮಾಪತಿಗೆ ನೀಡಿದ್ದ ಭದ್ರತೆ ವಾಪಸ್: ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ
ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಹಿಂಪಡೆಯಲಾಗಿದೆ. ಇಲಾಖೆಯ ಈ ಹಠಾತ್ ನಿರ್ಣಯದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಉಮಾಪತಿ ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ನಿರ್ಮಾಪಕ ಉಮಾಪತಿ ಹಾಗೂ ಅವರ ಸಹೋದರ ಇಬ್ಬರಿಗೂ ಭೂಗತ ಲೋಕದಿಂದ ಜೀವ ಬೆದರಿಕೆ ಇತ್ತು. ವರ್ಷದ ಹಿಂದೆಯಷ್ಟೆ ಬಾಂಬೆ ರವಿ ಕಡೆಯ ಕೆಲವರು ಉಮಾಪತಿ ಹಾಗೂ ಅವರ ಸಹೋದರನನ್ನು ಕೊಲ್ಲಲು ಯೋಜನೆ ರೂಪಿಸಿದ್ದರು. ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಉಮಾಪತಿ ಹಾಗೂ ಅವರ ಸಹೋದರನಿಗೆ ಭದ್ರತೆ ನೀಡಿದ್ದರು.
ಆದರೆ ಈಗ ಪೊಲೀಸ್ ಭದ್ರತೆಯನ್ನು ಹಿಂಪಡೆದಿದ್ದು, ಇದನ್ನು ಪ್ರಶ್ನಿಸಿ ಉಮಾಪತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯವು ಗೃಹ ಇಲಾಖೆ ಮತ್ತು ಬೆಂಗಳೂರು ನಗರ ಪೊಲೀಸ್ ಕಮೀಷನರ್ಗೆ ನೊಟೀಸ್ ನೀಡಿದ್ದು, ಕಾರಣ ನೀಡುವಂತೆ ಕೇಳಿದೆ.
ಕಳೆದ ಒಂದು ವರ್ಷದಿಂದ ಪೊಲೀಸ್ ಇಲಾಖೆ ಭದ್ರತೆ ನೀಡುತ್ತಿದೆ. ಈಗ ಏಕಾ-ಏಕಿ ಭದ್ರತೆ ವಾಪಸ್ ಪಡೆದಿದ್ದು, ಹೀಗೆ ಹಠಾತ್ತನೆ ಭದ್ರತೆ ವಾಪಸ್ ಪಡೆದಿರುವ ಬಗ್ಗೆ ಮಾಹಿತಿಯನ್ನೂ ನೀಡಿಲ್ಲ ಎಂದು ಉಮಾಪತಿ ಆರೋಪ ಮಾಡಿದ್ದಾರೆ.
ಗ್ರಾನೈಟ್ ಸೇರಿ ಹಲವು ಉದ್ಯಮಗಳಲ್ಲಿ ಉಮಾಪತಿ ಶ್ರೀನಿವಾಸ್ ಗೌಡ ಹಾಗೂ ಅವರ ಅಣ್ಣ ತೊಡಗಿಸಿಕೊಂಡಿದ್ದಾರೆ. ಉಮಾಪತಿ ಶ್ರೀನಿವಾಸ ಗೌಡ ನಿರ್ಮಾಪಕರಾಗಿಯೂ ಜನಪ್ರಿಯರು, ಈ ಸಹೋದರರ ಏಳಿಗೆಯನ್ನು ಸಹಿಸದ ಕೆಲವರು ಉಮಾಪತಿ ಸಹೋದರರ ವಿರುದ್ಧ ಸುಪಾರಿ ನೀಡಿದ್ದರು. ಆದರೆ ಅದೃಷ್ಟವಶಾತ್ ಆರೋಪಿಗಳು ಬಂಧನಕ್ಕೆ ಒಳಗಾದರು.
ಉಮಾಪತಿ ಶ್ರೀನಿವಾಸ್ ಗೌಡ ಇದೀಗ ಫಿಲಂ ಸಿಟಿ ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು-ಕನಕಪುರ ರಸ್ತೆಯಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡಲು ಉಮಾಪತಿ ಮುಂದಾಗಿದ್ದಾರೆ. ಈಗಾಗಲೇ ಗುದ್ದಲಿ ಪೂಜೆ ಮುಗಿದಿದ್ದು, ನಿರ್ಮಾಣ ಕಾರ್ಯ ಆರಂಭವಾಗಿದೆ. 25 ಎಕರೆ ವ್ಯಾಪ್ತಿಯ ಫಿಲಂ ಸಿಟಿ ನಿರ್ಮಾಣಕ್ಕೆ 175 ಕೋಟಿ ಬಂಡವಾಳವನ್ನು ಉಮಾಪತಿ ಶ್ರೀನಿವಾಸ್ ಗೌಡ ತೊಡಗಿಸುತ್ತಿದ್ದಾರೆ. ಕೇವಲ ಒಂದು ವರ್ಷದಲ್ಲಿ ಫಿಲಂ ಸಿಟಿ ನಿರ್ಮಾಣವನ್ನು ಪೂರ್ಣಗೊಳಿಸುವ ಯೋಜನೆಯನ್ನು ಹಾಕಿಕೊಂಡಿರುವ ಉಮಾಪತಿ ವಿದೇಶದಿಂದ ತಂತ್ರಜ್ಞರನ್ನು ಇದಕ್ಕಾಗಿ ಕರೆತರುತ್ತಿದ್ದಾರೆ. ಒಟ್ಟಿನಲ್ಲಿ ಬೃಹತ್ ಆಗಿಯೇ ಫಿಲಂ ಸಿಟಿ ನಿರ್ಮಾಣ ಮಾಡುತ್ತಿದ್ದಾರೆ ಉಮಾಪತಿ.
ನಿರ್ಮಾಪಕ ಉಮಾಪತಿ ಇತ್ತೀಚೆಗೆ ದರ್ಶನ್ ಕಾರಣಕ್ಕೆ ಸುದ್ದಿಯಲ್ಲಿದ್ದರು. ದರ್ಶನ್ ಗೆಳೆಯರೇ ಕೆಲವರು ದರ್ಶನ್ ಹೆಸರು ಬಳಸಿ ಬ್ಯಾಂಕ್ ಸಾಲಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಪ್ರಕರಣದಲ್ಲಿ ದರ್ಶನ್ರ ಮೈಸೂರು ಗೆಳೆಯರು ಹಾಗೂ ಸ್ವತಃ ದರ್ಶನ್ ಉಮಾಪತಿಯೇ ಆರೋಪಿ ಎಂಬಂತೆ ಮಾತನಾಡಿದ್ದರು. ನಂತರ ಈ ವಿಷಯ ದೊಡ್ಡದಾಗಿ ಬೆಳೆದು, ದರ್ಶನ್ ಹಾಗೂ ಉಮಾಪತಿ ನಡುವೆ ಮುನಿಸಿಗೆ ಕಾರಣವಾಯ್ತು. ಇದೇ ಪ್ರಕರಣದ ಮುಂದುವರೆದ ಭಾಗದಂತೆ ಇಂದ್ರಜಿತ್ ಲಂಕೇಶ್ ಅವರೂ ದರ್ಶನ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು.