Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಭಿನೇತ್ರಿ' ಬಗ್ಗೆ ಪೂಜಾಗಾಂಧಿ ಬಿಟ್ಟುಕೊಟ್ಟ ಸತ್ಯ
ಪೂಜಾಗಾಂಧಿ ಅವರು ನಿರ್ಮಿಸಿ ನಟಿಸುತ್ತಿರುವ 'ಅಭಿನೇತ್ರಿ' ಚಿತ್ರ ಸೆಟ್ಟೇರಿದೆ. ಈ ಚಿತ್ರದ ಫಸ್ಟ್ ಲುಕ್ ನೋಡಿದವರು ಬಹುಶಃ ಇದು ಮಿನುಗು ತಾರೆ ಕಲ್ಪನಾ ಅವರ ಕಥೆ ಇರಬಹುದು ಎಂದು ಭಾವಿಸಿದರು. ಇನ್ನೂ ಕೆಲವರು ಇಲ್ಲಾ ಇಲ್ಲಾ ಇದು ಮಂಜುಳಾ ಗೆಟಪ್ ಎಂದರು.
ಈಗ ಸ್ವತಃ ಪೂಜಾಗಾಂಧಿ ಅವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ತಮ್ಮ 'ಅಭಿನೇತ್ರಿ' ಚಿತ್ರ ಕಲ್ಪನಾ ಅವರ ಕುರಿತದ್ದೂ ಅಲ್ಲ ಹಾಗೆಯೇ ಮಂಜುಳಾ ಅವರ ಕಥೆಯೂ ಅಲ್ಲ. ಆದರೆ ಇದು ತಾರೆಯೊಬ್ಬಳ ಬಗೆಗಿನ ಚಿತ್ರ ಎಂದಿದ್ದಾರೆ. ಚಿತ್ರದ ಫಸ್ಟ್ ಲುಕ್ ನೋಡಿ ಇದು ಇಂತಹದ್ದೇ ಚಿತ್ರ ಎಂಬ ನಿರ್ಧಾರಕ್ಕೆ ಬರುವುದು ಸರಿಯಲ್ಲ ಎಂಬುದು ಅವರ ಮಾತಿನ ಒಟ್ಟಾರೆ ಅರ್ಥ.
ಈ ಚಿತ್ರ ಯಾವುದೇ ತಾರೆ ಕುರಿತಾದ ಚಿತ್ರವಲ್ಲ. ಅರುವತ್ತು, ಎಪ್ಪತ್ತರ ದಶಕದಲ್ಲಿ ತಾರೆಯೊಬ್ಬಳ ಕಥೆ. ಈ ಚಿತ್ರ ಡಿಫರೆಂಟ್ ಆಗಿರುತ್ತದೆ. ಹಾಗಾಗಿ ಎಪ್ಪತ್ತರ ದಶಕದ ಸೆಟ್ ಗಳು, ಕಾಸ್ಟ್ಯೂಮ್ ಗಳನ್ನು ಬಳಸಿಕೊಳ್ಳುತ್ತಿದ್ದೇವೆ. ಚೆನ್ನೈನಲ್ಲಿ ಚಿತ್ರೀಕರಣ ನಡೆಯಲಿದೆ.
ಕನ್ನಡ ಚಿತ್ರರಂಗದ ಮಟ್ಟಿಗೆ ಎಪ್ಪತ್ತರ ದಶಕ ಸ್ವರ್ಣಯುಗ. ಆಗ ಚೆನ್ನೈನಲ್ಲಿ ಕನ್ನಡ ಚಿತ್ರಗಳನ್ನು ರಾತ್ರಿ ವೇಳೆ ಚಿತ್ರೀಕರಿಸಲಾಗುತ್ತಿತ್ತು. ಬೆಳಗಿನ ವೇಳೆ ಸ್ಟುಡಿಯೋಗಳ ಅಭಾವ ಇತ್ತು. ಆಗಿನ ಕಾಲದ ಚಿತ್ರ ನಿರ್ಮಾಣದ ಕಷ್ಟನಷ್ಟಗಳು ಹೇಗಿದ್ದವು ಎಂಬುದನ್ನೂ ತಮ್ಮ ಚಿತ್ರದಲ್ಲಿ ಅನಾವರಣಗೊಳ್ಳಲಿದೆ ಎಂದಿದ್ದಾರೆ ಪೂಜಾಗಾಂಧಿ.
ಸತೀಶ್ ಪ್ರಧಾನ್ ನಿರ್ದೇಶಿಸುತ್ತಿರುವ ಈ ಚಿತ್ರದ ಪಾತ್ರವರ್ಗದಲ್ಲಿ ಪೂಜಾಗಾಂಧಿ ಜೊತೆ ಮಕರಂದ್ ದೇಶ್ ಪಾಂಡೆ, ರವಿಶಂಕರ್ ಇದ್ದಾರೆ. ಚಿತ್ರದ ಪ್ರಮುಖ ಪಾತ್ರವೊಂದಕ್ಕಾಗಿ ತಾರಾ ಅವರನ್ನು ಸಂಪರ್ಕಿಸಲಾಗಿದೆಯಂತೆ. ಮನೋಮೂರ್ತಿ ಅವರ ಸಂಗೀತ ಚಿತ್ರಕ್ಕಿದ್ದು ಸೆಪ್ಟೆಂಬರ್ 27ರಿಂದ ಶೂಟಿಂಗ್ ಆರಂಭ. (ಏಜೆನ್ಸೀಸ್)