Don't Miss!
- News
ಬಿಬಿಎಂಪಿ ವಾರ್ಡ್ ರಚನೆ ವಿವಾದ: ಮೀಸಲು ನಿಗದಿ ಅಂತಿಮಗೊಳಿಸದಂತೆ ಹೈಕೋರ್ಟ್ ತಾಕೀತು
- Lifestyle
Today Rashi Bhavishya: ಗುರುವಾರದ ದಿನ ಭವಿಷ್ಯ: ಮೇಷ, ಮೀನ ರಾಶಿಯವರು ವಾದಗಳಿಂದ ದೂರವಿರಿ
- Sports
ನ್ಯೂಜಿಲೆಂಡ್ ಕೇಂದ್ರೀಯ ಒಪ್ಪಂದದಿಂದ ಹೊರ ನಡೆದ ಟ್ರೆಂಟ್ ಬೌಲ್ಟ್! ಏಕೆ ಈ ನಿರ್ಧಾರ?
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಮತ್ತು ಗ್ಯಾಲಕ್ಸಿ Z ಫ್ಲಿಪ್ 4 ಫೋನ್ ಬಿಡುಗಡೆ!
- Automobiles
ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ
- Finance
ಸೆನ್ಸೆಕ್ಸ್ ಕುಸಿತ, ನಿಫ್ಟಿ ಏರಿಕೆ: ಬುಧವಾರ ವಹಿವಾಟಿನ ಅಂತ್ಯ ಹೀಗಿದೆ
- Travel
ಭಾರತದಲ್ಲಿಯ 10 ಪ್ರಸಿದ್ದ ಹನುಮಂತ ದೇವರ ದೇವಾಲಯಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ನಾನಿನ್ನು ಜೆಡಿಎಸ್ ನಲ್ಲೇ ಇದ್ದೀನಿ, ಮಂಡ್ಯ ಫಲಿತಾಂಶದ ಬಗ್ಗೆ ಮಾತನಾಡಲ್ಲ - ಪೂಜಾಗಾಂಧಿ
ಮಂಡ್ಯ ಚುನಾವಣಾ ಫಲಿತಾಂಶ ಭಾರಿ ಕುತೂಹಲ ಮೂಡಿಸಿದೆ. ಕೊನೆ ಕ್ಷಣದ ವರೆಗೆ ಏನಾಗುತ್ತದೆಯೋ ಎನ್ನುವ ನಿರೀಕ್ಷೆ ಎಲ್ಲರಿಗೆ ಇದೆ.
ನಟಿ ಪೂಜಾಗಾಂಧಿ ಇದೀಗ ಮಂಡ್ಯ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದ ಪೂಜಾಗಾಂಧಿ ನಿನ್ನೆ (ಮೇ 22) ರಾಜಕೀಯದ ಬಗ್ಗೆ ಮಾತನಾಡಿದ್ದಾರೆ.
ಲೋಕಸಭೆ ಚುನಾವಣೆ 2019 ಫಲಿತಾಂಶ LIVE : ಚಂದ್ರಬಾಬು ನಾಯ್ಡು ರಾಜೀನಾಮೆ
''ನಾನಿನ್ನು ಜೆಡಿಎಸ್ ಪಕ್ಷದಲ್ಲಿಯೇ ಇದ್ದೇನೆ. ನಮ್ಮ ತಾಯಿಗೆ ಆರೋಗ್ಯ ಸರಿ ಇಲ್ಲದ ಕಾರಣ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಮುಂದಿನ ದಿನದಲ್ಲಿ ಮತ್ತೆ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತೇನೆ'' ಎಂದಿದ್ದಾರೆ.
ಈ ವೇಳೆ ಮಂಡ್ಯ ಬಗ್ಗೆ ಪ್ರಶ್ನೆ ಮಾಡಿದಾಗ ''ಮಂಡ್ಯ ಚುನಾವಣೆ ಫಲಿತಾಂಶದ ಕುರಿತು ನಾನೇನೂ ಮಾತನಾಡಲ್ಲ. ಆ ಕುರಿತು ಮಾತನಾಡುವಷ್ಟು ದೊಡ್ಡವಳು ನಾನಲ್ಲ. ಎಕ್ಸಿಟ್ ಪೋಲ್ ಸಮೀಕ್ಷೆ ಬಗ್ಗೆ ನನಗೇನು ಗೊತ್ತಿಲ್ಲ. ನಾನು ಯಾವುದೇ ಸುದ್ದಿಗಳನ್ನು ಫಾಲೋ ಮಾಡ್ತಿಲ್ಲ'' ಎಂದಿದ್ದಾರೆ.
ಸಿನಿಮಾಗಳ ಸೋಲುಗಳ ಬಳಿಕ 2012 ರಲ್ಲಿ ಅವರು ಜೆಡಿಎಸ್ ಪಕ್ಷದ ಮೂಲಕ ರಾಜಕೀಯ ಪ್ರವೇಶ ಮಾಡಿದರು. ನಂತರ ಬಿ ಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಹಾರಿ ರಾಯಚೂರು ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸಿ ಸೋತರು. ಕಳೆದ ವರ್ಷ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದರು.