Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೇಲೂರು ಮೇಲೆ ನಟಿ ಪೂಜಾಗಾಂಧಿ ಕಣ್ಣು
ಇತ್ತೀಚೆಗೆ ಅವರು ಚಿಕ್ಕಮಗಳೂರಿಗೆ ಆಗಮಿಸಿದ್ದ ವೇಳೆ ಈ ಪತ್ರಕರ್ತರೊಂದಿಗೆ ಮಾತನಾಡುತ್ತಾ ಈ ವಿಷಯವನ್ನು ತಿಳಿಸಿದರು. ಉಡುಪಿ ಚಿಕ್ಕಮಗಳೂರು ಉಪ ಚುನಾವಣೆ ಸಂದರ್ಭದಲ್ಲಿ ಅವರು ಚುನಾವಣೆ ನೀತಿ ಸಂಹಿತೆಯನ್ನು ಮುರಿದಿದ್ದ ಸಂಬಂಧ ಅವರ ವಿರುದ್ಧ ಕೇಸ್ ದಾಖಲಾಗಿತ್ತು.
ಈ ಕೇಸಿನ ವಿಚಾರಣೆ ಸಲುವಾಗಿ ಬಂದಿದ್ದ ಅವರು ಹಳೇಬೀಡು ಸಮೀಪದ ಹುಲಿಕೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, "ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಬೇಲೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ" ಎಂದರು.
ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಬರಲಿರುವ ಚುನಾವಣೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷ ಸಾಕಷ್ಟು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ರಾಜ್ಯದ ವಿವಿಧೆಡೆ ಪ್ರವಾಸ ಮಾಡಿದಾಗ ಈ ವಿಷಯ ತಮಗೆ ಮನದಟ್ಟಾಯಿತು ಎಂದರು.
ಇದೇ ಸಂದರ್ಭದಲ್ಲಿ ಬಿಎಸ್ಆರ್ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಭುಜೇಂದ್ರ ಮಾತನಾಡುತ್ತಾ, "ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಮ್ಮ ಪಕ್ಷಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಉಳಿದ ಪಕ್ಷಗಳಿಗೆ ಹೋಲಿಸಿದರೆ ನಮ್ಮ ಪಕ್ಷ ಉತ್ತಮ ಎಂಬ ಅಭಿಪ್ರಾಯ ಜನರಿಂದ ವ್ಯಕ್ತವಾಗುತ್ತಿದೆ." ಎಂದರು.
ಇತ್ತೀಚೆಗೆ ಪೂಜಾಗಾಂಧಿ ಅವರು ಪಬ್ಲಿಕ್ ಟಿವಿಯ ಹೆಚ್.ಆರ್.ರಂಗನಾಥ್ ಜೊತೆ ಮಾತನಾಡಿರುವ ಅವರು, "ನಾನು ಟಿಕೆಟ್ ಕೇಳಿಕೊಂಡು ಬಿಎಸ್ಆರ್ ಕಾಂಗ್ರೆಸ್ ಸೇರಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇದೆ. ಪಕ್ಷದ ಪ್ರಮುಖರು ನಿರ್ಧಾರ ಕೈಗೊಳ್ಳುತ್ತಾರೆ. ಟಿಕೆಟ್ ಸಿಕ್ಕರೆ ಉತ್ತರ ಕರ್ನಾಟದಿಂದ ಸ್ಪರ್ಧಿಸುತ್ತೇನೆ. ಟಿಕೆಟ್ ದೊರೆಯದಿದ್ದರೆ ಸಾಮಾನ್ಯ ಕಾರ್ಯಕರ್ತೆ ಯಾಗಿರುತ್ತೇನೆ" ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು. (ಏಜೆನ್ಸೀಸ್)