Don't Miss!
- News ಹಾಸನ ಪೆನ್ಡ್ರೈವ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮಹಿಳಾ ಆಯೋಗ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ಸಿನಿಮಾಕ್ಕೆ ಸೌಂಡಿಲ್ಲ: ಪ್ರೇಕ್ಷಕರಿಂದ ಚಿತ್ರಮಂದಿರದ ವಿರುದ್ಧ ಪ್ರತಿಭಟನೆ
'ಯುವರತ್ನ' ಸಿನಿಮಾ ಬಿಡುಗಡೆ ಆಗಿದ್ದ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಪ್ರೇಕ್ಷಕರು ಪ್ರತಿಭಟನೆ ಮಾಡಿದ್ದಾರೆ.
Recommended Video
ಚಿತ್ರಮಂದಿರದಲ್ಲಿ ಧ್ವನಿ ಗುಣಮಟ್ಟ ಸರಿಯಿಲ್ಲ, ಸಿನಿಮಾದ ಸಂಭಾಷಣೆಗಳು ಸಹ ಕೇಳದಷ್ಟು ಕಡಿಮೆ ಸೌಂಡ್ ನೀಡಲಾಗಿದೆ ಎಂದು ಪ್ರೇಕ್ಷಕರು ಆಕ್ಷೇಪಿಸಿದ್ದಾರೆ. ಜೊತೆಗೆ ತಮ್ಮ ಸಿನಿಮಾ ಟಿಕೆಟ್ ಹಣವನ್ನು ಹಿಂದಿರುಗಿಸುವಂತೆ ಸಹ ಮನವಿ ಮಾಡಿದ್ದಾರೆ.
ಆದರೆ, ಟಿಕೆಟ್ ಹಣ ಹಿಂದಿರುಗಿಸಲು ಚಿತ್ರಮಂದಿರ ಆಡಳಿತ ಮಂಡಳಿಯವರು ನಿರಾಕರಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಪ್ರೇಕ್ಷಕರು ಚಿತ್ರಮಂದಿರದ ಒಳಗೆಯೇ ಚಿತ್ರಮಂದಿರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದ್ದಾರೆ. ಕೆಲವರು ಸಿನಿಮಾ ನೋಡದೇ ವಾಪಸ್ ಮರಳಿದ್ದಾರೆ.
ಪ್ರೇಕ್ಷಕರು ಚಿತ್ರಮಂದಿರದ ಒಳಗೆ ಪ್ರತಿಭಟನೆ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. 'ಇನ್ನು ಮುಂದೆ ಊರ್ವಶಿ ಚಿತ್ರಮಂದಿರದಲ್ಲಿ ಟಿಕೆಟ್ ಬುಕ್ ಮಾಡಬೇಡಿ' ಎಂಬ ಒಕ್ಕಣೆಯೊಂದಿಗೆ ವಿಡಿಯೋಗಳು ಹರಿದಾಡುತ್ತಿವೆ.
ಸಾಮಾಜಿಕ ಜಾಲತಾಣದಲ್ಲಿ ಕೆಲವರು ಹಂಚಿಕೊಂಡಿರುವ ಅಭಿಪ್ರಾಯದ ಪ್ರಕಾರ, ಬೆಳಿಗ್ಗಿನ ಶೋಗೆ ಧ್ವನಿ ಗುಣಮಟ್ಟ ಚೆನ್ನಾಗಿಯೇ ಇತ್ತಂತೆ ಆದರೆ ಎರಡನೇ ಶೋ ನಿಂದ ಆಚೆಗೆ ಸೌಂಡ್ ಅನ್ನು ಕಡಿಮೆ ಮಾಡಲಾಗಿದೆಯಂತೆ.
ಪ್ರತಿಭಟನೆ ವಿಷಯ ತಿಳಿದು ಪೊಲೀಸರು, ಮಾಧ್ಯಮಗಳವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪರಿಸ್ಥಿತಿಯನ್ನು ಪೊಲೀಸರು ತಿಳಿಗೊಳಿಸಿದ್ದಾರೆ.