Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣಾವ್ರ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ನಟಿಸುವ ಅವಕಾಶ
ಕನ್ನಡ ಚಿತ್ರರಂಗದ ಯಶಸ್ವಿ ನಿರ್ಮಾಣ ಸಂಸ್ಥೆಯಲ್ಲಿ ಪೂರ್ಣಿಮಾ ಎಂಟರ್ಪ್ರೈಸಸ್ ಮೊದಲ ಸಾಲಿನಲ್ಲಿ ನಿಲ್ಲುತ್ತದೆ. ಡಾ ಪಾರ್ವತಮ್ಮ ರಾಜ್ ಕುಮಾರ್ ಮುನ್ನಡೆಸುತ್ತಿದ್ದ ಬಹುದೊಡ್ಡ ಚಲನಚಿತ್ರ ನಿರ್ಮಾಣ ಸಂಸ್ಥೆ. ಈ ಸಂಸ್ಥೆಯಡಿ ಬರಲಿರುವ ಹೊಸ ಸಿನಿಮಾದಲ್ಲಿ ನಟಿಸುವ ಅವಕಾಶ ಬಂದಿದೆ.
ಪೂರ್ಣಿಮಾ ಎಂಟರ್ಪ್ರೈಸಸ್ ಸಂಸ್ಥೆಯಲ್ಲಿ ತಯಾರಾಗಲಿರುವ ಹೊಸ ಸಿನಿಮಾದಲ್ಲಿ ನಾಯಕಿ ನಟಿ ಪಾತ್ರಕ್ಕಾಗಿ ಆಡಿಷನ್ ಮಾಡಲಾಗುತ್ತಿದೆ. ಈ ಆಡಿಷನ್ನಲ್ಲಿ ಭಾಗವಹಿಸಿ ದೊಡ್ಮನೆ ನಿರ್ಮಾಣದ ಚಿತ್ರದಲ್ಲಿ ಹೀರೋಯಿನ್ ಆಗುವ ಅದೃಷ್ಟ ನಿಮ್ಮದಾಗಬಹುದು.
ಅಣ್ಣಾವ್ರ ಮೊಮ್ಮಗನ ಭರ್ಜರಿ ಎಂಟ್ರಿ: 'ಯುವ ರಣಧೀರ ಕಂಠೀರವ' ಟೀಸರ್
ಆಡಿಷನ್ನಲ್ಲಿ ಭಾಗವಹಿಸಲು ನೀವು ಮಾಡಬೇಕಾಗಿರುವುದು ಇಷ್ಟೇ.
- ವಯಸ್ಸು 18-25 ವರ್ಷ
- ಏಪ್ರಿಲ್ 15 ರೊಳಗೆ ನೊಂದಾಯಿಸಿಕೊಳ್ಳಿ
- ಕನ್ನಡ ಭಾಷೆ ಕಡ್ಡಾಯ ಹಾಗೂ ಕಲಿಯುವ ಆಸಕ್ತಿ ಇರಬೇಕು
ಆಡಿಷನ್ ಅರ್ಜಿಯಲ್ಲಿ ಪ್ರಮುಖವಾಗಿ ಮೂರು ವಿಷಯಗಳನ್ನು ಕೇಳಲಾಗಿದೆ.
* ನೀವು ನಟನೆ ತರಬೇತಿ ಪಡೆದಿದ್ದೀರಾ?
* ಮಾರ್ಷಲ್ ಆರ್ಟ್ಸ್ ತರಬೇತಿ ಇದೆಯಾ?
* ಕುದುರೆ ಸವಾರಿ ಮಾಡಲು ಬರುತ್ತದೆಯೇ?
ಈ ವಿಷಯಗಳನ್ನು ಗಮನಿಸಿರೆ ನಾಯಕಿಯ ಪಾತ್ರ ಹೇಗಿರಬಹುದು ಎಂಬ ಸಣ್ಣ ಕುತೂಹಲ ಕಣ್ಣ ಮುಂದೆ ಬರುತ್ತದೆ.
ಅಂದ್ಹಾಗೆ, ಇದು ಯಾವ ಚಿತ್ರ ಮತ್ತು ನಾಯಕ ಯಾರು ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ನಟ ಯುವರಾಜ್ ಕುಮಾರ್ ಈ ಆಡಿಷನ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪೂರ್ಣಿಮಾ ಎಂಟರ್ಪ್ರೈಸಸ್ ಸಂಸ್ಥೆ ನಿರ್ಮಾಣದ ಮುಂದಿನ ಸಿನಿಮಾ ಎಂದು ತಿಳಿಸಿದ್ದಾರೆ.
Recommended Video
'ಯುವ ರಣಧೀರ ಕಂಠೀರವ' ಚಿತ್ರದಲ್ಲಿ ಯುವರಾಜ್ ಕುಮಾರ್ ನಟಿಸುತ್ತಿದ್ದಾರೆ. ಯುವ ಅವರ ಮೊದಲ ಸಿನಿಮಾಗೆ ಪುನೀತ್ ರುದ್ರನಾಗ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರವಿ ಬಸ್ರೂರ್ ಸಂಗೀತವಿದ್ದು, ಸಂಕೇಶ್ ಛಾಯಾಗ್ರಹಣ, ಚೇತನ್ ಡಿಸೋಜಾ ಸಾಹಸ ನಿರ್ದೇಶನವಿದೆ.