Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್, ವಿಷ್ಣುಗೆ ಬಣ್ಣ ಹಚ್ಚಿದ್ದ ಮೇಕಪ್ ಕೃಷ್ಣ ನಿಧನ
ಡಾ ರಾಜ್ ಕುಮಾರ್, ವಿಷ್ಣುವರ್ಧನ್ ರಂತಹ ಮೇರು ನಟರಿಗೆ ಬಣ್ಣ ಹಚ್ಚಿದ ಕಲಾವಿದ ಮೇಕಪ್ ಕೃಷ್ಣ (56) ನಿಧನ ಹೊಂದಿದ್ದಾರೆ. ಇಂದು (ಜನವರಿ 13) ಬೆಳಗ್ಗೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದ ಮೇಕಪ್ ಕೃಷ್ಣ ಅವರು, ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ ಕುಂಬಳಗೋಡು ಬಳಿಯ ಗೊಲ್ಲಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಡಾ.ರಾಜ್ ಗೆ 'ಭಾರತ ರತ್ನ': ಸರ್ಕಾರದ ಎದುರು ಬೇಡಿಕೆ ಇಟ್ಟ ಅಭಿಮಾನಿಗಳು
ಮೇಕಪ್ ನಲ್ಲಿ ದೊಡ್ಡ ಹೆಸರು ಮಾಡಿದ ಕೃಷ್ಣ ನಂತರ ಒಂದೊಂದೆ ಹೆಜ್ಜೆ ಮುಂದೆ ಹೋದರು. ಟಿವಿ ಕ್ಷೇತ್ರದಲ್ಲಿ ಹೆಸರು ಮಾಡಿದರು. ರಾಜ್ ಕುಮಾರ್ ಜೀವನವನ್ನು ಮೊದಲು ದೂರದರ್ಶನದಲ್ಲಿ ಪ್ರಸಾರ ಮಾಡಿದ ಖ್ಯಾತಿ ಇವರಿಗೆ ಇದೆ.
ಮೇಕಪ್ ಜೊತೆಗೆ ಕಿರುತೆರೆಯಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿಯೂ ಗುರುತಿಸಿಕೊಂಡರು. ರಂಗ ಜಂಗಮ ಎಂಬ ರಂಗ ತಂಡ ಕಟ್ಟಿ ನಾಟಕಗಳನ್ನು ಮಾಡುತ್ತಿದ್ದರು.
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಡಾ.ರಾಜ್ ಕುಟುಂಬ.!
ರಾಜ್ ಕುಮಾರ್ ಜೀವನ ಹಾಗೂ ಸಾಧನೆಯನ್ನು ರಂಗಕ್ಕೆ ಅಳವಡಿಸಬೇಕು ಎನ್ನುವುದು ಅವರ ಕನಸ್ಸಾಗಿತ್ತು. ಅದಕ್ಕೆ ಬೇಕಾದ ತಯಾರಿಗಳನ್ನೂ ನಡೆಸಿದ್ದರು. ಆದರೆ, ಅವರ ಕನಸು ನೆರವೇರಲಿಲ್ಲ. 56 ವರ್ಷದ ಮೇಕಪ್ ಕೃಷ್ಣ ತಮ್ಮ ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.