Don't Miss!
- News Lok Sabha Election 2024: ಮತದಾನ ಮಾಡಿದವರಿಗೆ ಬೆಂಗಳೂರಿನ ಈ ಹೋಟೆಲ್ಗಳಲ್ಲಿ ಊಚಿತ ಊಟ & ತಿಂಡಿ-ಮಾಹಿತಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್, ವಿಷ್ಣುಗೆ ಬಣ್ಣ ಹಚ್ಚಿದ್ದ ಮೇಕಪ್ ಕೃಷ್ಣ ನಿಧನ
ಡಾ ರಾಜ್ ಕುಮಾರ್, ವಿಷ್ಣುವರ್ಧನ್ ರಂತಹ ಮೇರು ನಟರಿಗೆ ಬಣ್ಣ ಹಚ್ಚಿದ ಕಲಾವಿದ ಮೇಕಪ್ ಕೃಷ್ಣ (56) ನಿಧನ ಹೊಂದಿದ್ದಾರೆ. ಇಂದು (ಜನವರಿ 13) ಬೆಳಗ್ಗೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದ ಮೇಕಪ್ ಕೃಷ್ಣ ಅವರು, ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ ಕುಂಬಳಗೋಡು ಬಳಿಯ ಗೊಲ್ಲಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಡಾ.ರಾಜ್ ಗೆ 'ಭಾರತ ರತ್ನ': ಸರ್ಕಾರದ ಎದುರು ಬೇಡಿಕೆ ಇಟ್ಟ ಅಭಿಮಾನಿಗಳು
ಮೇಕಪ್ ನಲ್ಲಿ ದೊಡ್ಡ ಹೆಸರು ಮಾಡಿದ ಕೃಷ್ಣ ನಂತರ ಒಂದೊಂದೆ ಹೆಜ್ಜೆ ಮುಂದೆ ಹೋದರು. ಟಿವಿ ಕ್ಷೇತ್ರದಲ್ಲಿ ಹೆಸರು ಮಾಡಿದರು. ರಾಜ್ ಕುಮಾರ್ ಜೀವನವನ್ನು ಮೊದಲು ದೂರದರ್ಶನದಲ್ಲಿ ಪ್ರಸಾರ ಮಾಡಿದ ಖ್ಯಾತಿ ಇವರಿಗೆ ಇದೆ.
ಮೇಕಪ್ ಜೊತೆಗೆ ಕಿರುತೆರೆಯಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿಯೂ ಗುರುತಿಸಿಕೊಂಡರು. ರಂಗ ಜಂಗಮ ಎಂಬ ರಂಗ ತಂಡ ಕಟ್ಟಿ ನಾಟಕಗಳನ್ನು ಮಾಡುತ್ತಿದ್ದರು.
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಡಾ.ರಾಜ್ ಕುಟುಂಬ.!
ರಾಜ್ ಕುಮಾರ್ ಜೀವನ ಹಾಗೂ ಸಾಧನೆಯನ್ನು ರಂಗಕ್ಕೆ ಅಳವಡಿಸಬೇಕು ಎನ್ನುವುದು ಅವರ ಕನಸ್ಸಾಗಿತ್ತು. ಅದಕ್ಕೆ ಬೇಕಾದ ತಯಾರಿಗಳನ್ನೂ ನಡೆಸಿದ್ದರು. ಆದರೆ, ಅವರ ಕನಸು ನೆರವೇರಲಿಲ್ಲ. 56 ವರ್ಷದ ಮೇಕಪ್ ಕೃಷ್ಣ ತಮ್ಮ ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.