BREAKING: ಪುನೀತ್ಗೆ 'ಕರ್ನಾಟಕ ರತ್ನ' ಪ್ರಶಸ್ತಿ ಘೋಷಿಸಿದ ಸಿಎಂ
ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.
ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ.
ಪುನೀತ್ ರಾಜ್ಕುಮಾರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಕಾನೂನು ಅಡ್ಡಿಗಳು ಇವೆಯೆಂಬ ಕಾರಣಕ್ಕೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿರಲಿಲ್ಲ. ಹಾಗಾಗಿ ಇದೀಗ 'ಕರ್ನಾಟಕ ರತ್ನ' ಘೋಷಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿವರು ಪ್ರಶಸ್ತಿ ಘೋಷಣೆ ಮಾಡುತ್ತಿದ್ದಂತೆ ಕಾರ್ಯಕ್ರಮದಲ್ಲಿ ನೆರೆದಿದ್ದವರೆಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದರು.

'ಕರ್ನಾಟಕ ರತ್ನ' ಮಾತ್ರವೇ ಅಲ್ಲ ಇನ್ನೂ ಹಲವು ಗೌರವಗಳನ್ನು ಪುನೀತ್ಗೆ ನೀಡಬೇಕೆಂಬ ಅಭಿಲಾಷೆ ಅಭಿಮಾನಿಗಳಿಗೆ ಇದೆ, ಅದೇ ಅಭಿಲಾಷೆ ಸರ್ಕಾರಕ್ಕೂ ಇದೆ ಎಂದು ಸಿಎಂ ಹೇಳಿದರು. ಕೇಂದ್ರ ಸರ್ಕಾರದ ಪ್ರಶಸ್ತಿಗಳೂ ಸಹ ಪುನೀತ್ಗೆ ಸಲ್ಲಬೇಕು ಎಂಬುದು ನಮ್ಮ ಬಯಕೆಯಾಗಿದೆ ಎಂದು ಸಿಎಂ ಹೇಳಿದರು.
More from Filmibeat
English summary
CM Basavaraj Bommai announce Karnataka Rathna award posthumous to Puneeth Rajkumar.


Click it and Unblock the Notifications











