Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವರ್ ಫುಲ್ ಹನುಮನ ಬಳಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್
Recommended Video
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯ ಯುವರತ್ನ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೆ 40 ಭಾಗದಷ್ಟು ಚಿತ್ರೀಕರಣ ಮುಗಿಸಿರುವ 'ಯುವರತ್ನ' ಚಿತ್ರತಂಡ ಈಗ ಧಾರವಾಡದಲ್ಲಿ ಬೀಡುಬಿಟ್ಟಿದೆ. ಅನೇಕ ದಿನಗಳಿಂದ ಮೈಸೂರಿನಲ್ಲಿ ಚಿತ್ರೀಕರಣ ಮಾಡುತ್ತಿದ್ದ ಪುನೀತ್ ಮತ್ತು ತಂಡ ಈದ ಮತ್ತೆ ಧಾರವಾಡದಲ್ಲಿ ಚಿತ್ರೀಕರಣ ಮಾಡುತ್ತಿದೆ.
ಅಂದ್ಹಾಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ 'ಯುವರತ್ನ' ಚಿತ್ರದ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರೀಕರಣ ಪ್ರಾರಂಭಿಸುವುದಕ್ಕು ಮೊದಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಪವರ್ ಫುಲ್ ದೇವಸ್ಥಾನವಾದ ನುಗ್ಗಿಕೇರಿ ಆನಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆಂಜನೇಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿರುವ ಅಪ್ಪು 'ಯುವರತ್ನ' ಚಿತ್ರ ಯಶಸ್ವಿಯಾಗಲಿ ಎಂದು ಕೇಳಿಕೊಂಡಿದ್ದಾರೆ.
ಧಾರವಾಡ ಕಡೆ ಪಯಣ ಬೆಳೆಸಿದ ಪುನೀತ್ ರಾಜ್ ಕುಮಾರ್ : ಕಾರಣ ಇಲ್ಲಿದೆ
ಮೊನ್ನೆ ಮೊನ್ನೆಯಷ್ಟೆ 'ಯುವರತ್ನ' ಚಿತ್ರತಂಡ ಧಾರವಾಡ ಕಡೆ ಪಯಣ ಬಳೆಸಿತ್ತು. ವಿಶೇಷ ಅಂದ್ರೆ ಇತ್ತೀಚಿಗಷ್ಟೆ ಸುಮಲತಾ ಅಂಬರೀಶ್ ಅವರು ಚುನಾವಣೆಯಲ್ಲಿ ಗೆದ್ದ ನಂತರ ನುಗ್ಗಿಕೇರಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ತುಲಾಭಾರ ನೆರವೇರಿಸಿದ್ದರು.
'ಯುವರತ್ನ' ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಚಿತ್ರದಲ್ಲಿ ದೊಡ್ಡ ಕಲಾವಿದರ ಬಳಗವೆ ಇದೆ. ಹಿರಿಯ ನಟಿ ರಾಧಿಕಾ ಶರತ್ ಕುಮಾರ್ ಸೇರಿದಂತೆ ಡಾಲಿ ಧನಂಜಯ್, ಅರು ಗೌಡ, ಕಾನ್ಸ್ಟೆಬಲ್ ಸರೋಜ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ನಾಯಕಿಯಾಗಿ ಸಾಯೇಶಾ ಸೈಗಲ್ ಬಣ್ಣ ಹಚ್ಚಿದ್ದಾರೆ.