Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿದ ಪುನೀತ್ ರಾಜ್ ಕುಮಾರ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯ ಜೇಮ್ಸ್ ಸಿನಿಮಾ ಚಿತ್ರೀಕರಣದ ಹಿನ್ನೆಲೆ ಬಳ್ಳಾರಿಯಲ್ಲಿದ್ದಾರೆ. ಕಳೆದ ಎರಡ್ಮೂರು ದಿನದಿಂದ ಹೊಸಪೇಟೆಯಲ್ಲಿ ಶೂಟಿಂಗ್ ಮಾಡುತ್ತಿರುವ ಅಪ್ಪು, ಭಾನುವಾರ ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿದ್ದಾರೆ.
ಭಾನುವಾರ ಜೇಮ್ಸ್ ಸಿನಿಮಾ ಚಿತ್ರೀಕರಣ ಮುಗಿಸಿದ ಬಳಿಕ ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿ ವೀಕ್ಷಿಸಿದರು. ಈ ವೇಳೆ ಅಪ್ಪು ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.
'ಜೇಮ್ಸ್' ಚಿತ್ರೀಕರಣ ವೇಳೆ ಪುನೀತ್ ರಾಜ್ ಕುಮಾರ್ ಕೈಮುಗಿದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದೇನು?
ಹೊಸಪೇಟೆಯ ರೆಸಾರ್ಟ್ನಲ್ಲಿ ಚಿತ್ರೀಕರಣ ಮುಗಿಸಿದ ಪುನೀತ್ ರಾಜ್ ಕುಮಾರ್ ಗಂಗಾವತಿ ಕಡೆ ಪ್ರಯಾಣ ಮಾಡಲಿದ್ದಾರೆ. ಗಂಗಾವತಿಯಲ್ಲಿ ಜೇಮ್ಸ್ ಸಿನಿಮಾಗಾಗಿ ಅದ್ಧೂರಿ ಸೆಟ್ ನಿರ್ಮಿಸಲಾಗಿದೆ.
ಯುವರತ್ನ ಸಿನಿಮಾ ಶೂಟಿಂಗ್ ಸಂಪೂರ್ಣವಾಗಿ ಮುಗಿಸಿರುವ ಪುನೀತ್ ರಾಜ್ ಕುಮಾರ್, ಇದೇ ಮೊದಲ ಸಲ ಚೇತನ್ ಕುಮಾರ್ ಜೊತೆ ಚಿತ್ರ ಮಾಡುತ್ತಿದ್ದಾರೆ. ಭರ್ಜರಿ ಸಿನಿಮಾದ ಬಳಿಕ ಚೇತನ್ ಕುಮಾರ್, ಅಪ್ಪುಗಾಗಿ ಸಖತ್ ಆಗಿರುವ ಸ್ಕ್ರಿಪ್ಟ್ ಮಾಡ್ಕೊಂಡು ತಯಾರಿ ನಡೆಸಿದ್ದರು.
ಜೇಮ್ಸ್ ಚಿತ್ರಕ್ಕೆ ಪ್ರಿಯಾ ಆನಂದ್ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ರಾಜಕುಮಾರ ಸಿನಿಮಾದಲ್ಲಿ ಅಪ್ಪು ಜೊತೆ ಪ್ರಿಯಾ ಆನಂದ್ ನಟಿಸಿದ್ದರು. ಈಗ ಎರಡನೇ ಬಾರಿ ಜೋಡಿಯಾಗಿ ತೆರೆ ಹಂಚಿಕೊಳ್ಳುತ್ತಿದ್ದಾರೆ.
Recommended Video
ಇನ್ನೂ ಚಿತ್ರದಲ್ಲಿ ನಟಿ ಅನು ಪ್ರಭಾಕರ್ ಸಹ ನಟಿಸುತ್ತಿದ್ದಾರೆ. ಅನು ಪ್ರಭಾಕರ್ ಮೊದಲ ಬಾರಿಗೆ ಪುನೀತ್ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಜೊತೆಗೆ ಬಹುಭಾಷ ನಟ ಆದಿತ್ಯ ಮೆನನ್ ಮತ್ತು ತೆಲುಗು ನಟ ಸ್ಟಾರ್ ಶ್ರೀಕಾಂತ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.