Just In
- 2 hrs ago
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ದರ್ಶನ್ ಹೊಸ ಸಿನಿಮಾ: ಮದಕರಿ ನಾಯಕನ ಕತೆ ಏನಾಯಿತು?
- 2 hrs ago
ಕಿರುತೆರೆಯಲ್ಲಿ ಪವರ್ ಸ್ಟಾರ್ ಅಬ್ಬರ: 'ಡಿಕೆಡಿ'ಯಲ್ಲಿ ಅಪ್ಪು ಡಾನ್ಸ್
- 3 hrs ago
ಹಿಂದಿ ಬರಲ್ಲ ಎಂದು ಅವಮಾನಕ್ಕೊಳಗಾಗಿದ್ದ ದಿನಗಳನ್ನು ನೆನೆದು ಕಣ್ಣೀರಿಟ್ಟ ನೋರಾ ಫತೇಹಿ
- 3 hrs ago
ಜೆಎಸ್ಎಸ್ ಕಾಲೇಜಿಗೆ ಡಿ ಬಾಸ್ ಎಂಟ್ರಿ: ವಿದ್ಯಾರ್ಥಿಗಳ ಜೊತೆ ಸಂಭ್ರಮ
Don't Miss!
- News
ನ್ಯೂಜಿಲ್ಯಾಂಡ್ನಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
- Automobiles
ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ
- Lifestyle
ಬೆಡ್ನಲ್ಲಿ ಪುರುಷರ ಸಾಮರ್ಥ್ಯ ಹೆಚ್ಚಿಸುತ್ತೆ ಈ ಕೆಗೆಲ್ ವ್ಯಾಯಾಮ
- Sports
ಭಾರತ vs ಇಂಗ್ಲೆಂಡ್: ಕೊಹ್ಲಿ ಜೊತೆಗಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಬೆನ್ ಸ್ಟೋಕ್ಸ್
- Finance
ಮತ್ತಷ್ಟು ಕಡಿಮೆಯಾಯ್ತು ಚಿನ್ನದ ಬೆಲೆ: ಮಾರ್ಚ್ 04ರ ಬೆಲೆ ಇಲ್ಲಿದೆ
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಸಲಾರ್' ಮುಹೂರ್ತ; ಒಂದೇ ಫ್ರೇಮಿನಲ್ಲಿ ಸೆರೆಯಾದ ಯಶ್ ಮತ್ತು ಪ್ರಭಾಸ್ ಫೋಟೋ ವೈರಲ್
ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಟಾಲಿವುಡ್ ಸ್ಟಾರ್ ಪ್ರಭಾಸ್ ಕಾಂಬಿನೇಷನ್ ನ ಬಹುನಿರೀಕ್ಷೆಯ ಸಲಾರ್ ಸಿನಿಮಾದ ಮುಹೂರ್ತ ಇಂದು ಹೈದರಾಬಾದ್ ನಲ್ಲಿ ಅದ್ದೂರಿಯಾಗಿ ನೆರವೇರಿದೆ. ಪ್ರಭಾಸ್ ಸಲಾರ್ ಮುಹೂರ್ತದಲ್ಲಿ ರಾಕಿಂಗ್ ಸ್ಟಾರ್ ಯಶ್ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದಾರೆ.
ಸಲಾರ್ ಸಿನಿಮಾಗೆ ಇಂದು ಅದ್ದೂರಿಯಾಗಿ ಪೂಜೆ ಮಾಡುವ ಮೂಲಕ ಅದ್ದೂರಿಯಾಗಿ ಚಾಲನೆ ನೀಡಲಾಗಿದೆ. ಪೂಜಾ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಶೇಷ ಎಂದರೆ ಪ್ರಭಾಸ್ ಮತ್ತು ಯಶ್ ಒಂದೇ ಫ್ರೇಮಿನಲ್ಲಿ ಸೆರೆಯಾಗಿರುವ ಫೋಟೋಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಹರದುಬರುತ್ತಿದೆ.
ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡ ಅನುಷ್ಕಾ, 'ಇದು ಪ್ರಭಾಸ್ ಕುರ್ತಾ' ಎಂದ ನೆಟ್ಟಿಗರು

ಸಲಾರ್ ಮುಹೂರ್ತದಲ್ಲಿ ಪ್ರಶಾಂತ್ ನೀಲ್ ತಂಡ
ಸಲಾರ್ ಸಿನಿಮಾ ಅನೌನ್ಸ್ ಆದಾಗಿನಿಂದ ಯಾವಾಗ ಪ್ರಾರಂಭವಾಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಇಂದು ಅಧಿಕೃತವಾಗಿ ಚಾಲನೆ ನೀಡುವ ಮೂಲಕ ಕುತೂಹಲಕ್ಕೆ ತೆರೆ ಎಳೆಯಲಾಗಿದೆ. ಮುಹೂರ್ತ ಕಾರ್ಯಕ್ರಮದಲ್ಲಿ ಸಲಾರ್ ಸಿನಿಮಾ ತಂಡದವರಾದ ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್, ಪ್ರಭಾಸ್ ಮತ್ತು ವಿಶೇಷ ಅತಿಥಿ ಯಶ್ ಸೇರಿದಂತೆ ಅನೇಕರು ಹಾಜರಿದ್ದರು.

ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಪ್ರಭಾಸ್ ಉತ್ಸುಕ
ಸಲಾರ್ ಸಿನಿಮಾ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಪ್ರಭಾಸ್, 'ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಬಹಳ ಉತ್ಸುಕನಾಗಿದ್ದೇನೆ. ಸಿನಿಮಾದಲ್ಲಿ ಭಿನ್ನ ಲುಕ್ನಲ್ಲಿ ನಾನು ಕಾಣಿಸಿಕೊಳ್ಳಲಿದ್ದು, ಅದನ್ನು ಅಭಿಮಾನಿಗಳಿಗೆ ತೋರಿಸಲು ಕಾತರದಿಂದಿದ್ದೇನೆ' ಎಂದಿದ್ದಾರೆ.
ಕೆಜಿಎಫ್ ಮುಗಿಸಿ ಹೈದರಾಬಾದ್ಗೆ ಬಂದಿಳಿದ ಪ್ರಶಾಂತ್ ನೀಲ್

ತಿಂಗಳ ಕೊನೆಯಲ್ಲಿ ಚಿತ್ರೀಕರಣ ಪ್ರಾರಂಭ ಸಾಧ್ಯತೆ
ಇಂದು ಮುಹೂರ್ತ ಮಾಡಿರುವ ಸಿನಿಮಾತಂಡ ತಿಂಗಳ ಕೊನೆಯಲ್ಲಿ ಚಿತ್ರೀಕರಣ ಪ್ರಾರಂಭ ಮಾಡುವ ಸಾಧ್ಯತೆ ಇದೆ. ಪ್ರಶಾಂತ್ ನೀಲ್ ಕೆಜಿಎಫ್-2 ಸಿನಿಮಾದ ಕೊನೆಯ ಹಂತದ ಕೆಲಸದಲ್ಲಿ ನಿರತಾಗಿದ್ದಾರೆ. ಇನ್ನೂ ಪ್ರಭಾಸ್ ಸಹ ಈಗಾಗಲೇ ರಾಧೆ ಶ್ಯಾಮ್ ಚಿತ್ರೀಕರಣ ಮುಗಿಸಿದ್ದಾರೆ.

ಸಲಾರ್ ಗೆ ಕೇಳಿಬರುತ್ತಿರುವ ಕಲಾವಿದರ ಹೆಸರುಗಳು
ಸಲಾರ್ ಸಿನಿಮಾಗೆ ಈಗಾಗಲೇ ಅನೇಕ ಕಲಾವಿದರ ಹೆಸರುಗಳು ಕೇಳಿಬರುತ್ತಿದೆ. ಚಿತ್ರದಲ್ಲಿ ಮಲಯಾಳಂ ನಟ ಮೋಹನ್ ಲಾಲ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಬಾಲಿವುಡ್ ನಟ ಜಾನ್ ಅಬ್ರಹಾಂ ವಿಲನ್ ಆಗಿ ಕಾಣಿಸಿಕೊಳ್ಳದ್ದಾರೆ, ನಾಯಕಿಯಾಗಿ ದಿಶಾ ಪಟಾಣಿ ನಟಿಸಲಿದ್ದಾರೆ ಸುದ್ದಿಗಳು ಹರಿದಾಡುತ್ತಿದೆ. ಆದರೆ ಸಿನಿಮಾತಂಡ ಇದ್ಯಾವುದರ ಬಗ್ಗೆಯೂ ಸ್ಪಷ್ಟನೆ ನೀಡಿಲ್ಲ. ಸದ್ಯಕ್ಕೆ ಸಲಾರ್ ಸಿನಿಮಾಗೆ ಸಂಗೀತ ನಿರ್ದೇಶಕ ರವಿ ಬಸ್ರೂರ್ ಮತ್ತು ಛಾಯಾಗ್ರಾಹಕ ಭುವನ್ ಗೌಡ ಸೇರ್ಪಡೆಯಾಗಿದ್ದಾರೆ.